Home namma chikmagalur chikamagalur ಇಂದು ಡಿಸಿಸಿ ಬ್ಯಾಂಕ್‌ನ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಮತದಾನ
chikamagalurHomeLatest Newsnamma chikmagalur

ಇಂದು ಡಿಸಿಸಿ ಬ್ಯಾಂಕ್‌ನ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಮತದಾನ

Share
Share

ಚಿಕ್ಕಮಗಳೂರು: ಜಿಲ್ಲಾ ಕೇಂದ್ರ ಸಹಕಾರ (ಡಿಸಿಸಿ) ಬ್ಯಾಂಕ್‌ನ ಆಡಳಿತ ಮಂಡಳಿಯ 5 ನಿರ್ದೇಶಕರ ಸ್ಥಾನಗಳಿಗೆ ಶನಿವಾರ ಮತದಾನ ನಡೆಯಲಿದೆ.

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ ಬೆಳಿಗ್ಗೆ 9 ಗಂಟೆಗೆ ಮತದಾನ ಆರಂಭವಾಗಿ ಸಂಜೆ 4 ಗಂಟೆಗೆ ಮುಕ್ತಾಯಗೊಳ್ಳಲಿದೆ. ಬಳಿಕ ಮತ ಎಣಿಕೆ ನಡೆಯಲಿದೆ.

ಬ್ಯಾಂಕಿನ ಒಟ್ಟು 13 ಸ್ಥಾನಗಳಿಗೆ ಜ. 17 ರಂದು ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಲಾಗಿತ್ತು. 8 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು, ಇನ್ನುಳಿದ 5 ಸ್ಥಾನಗಳಿಗೆ ಶನಿವಾರ ಮತದಾನ ನಡೆಯಲಿದೆ. ಕಣದಲ್ಲಿ 5 ಸ್ಥಾನಗಳಿಗೆ 10 ಮಂದಿ ಸ್ಪರ್ಧೆಯಲ್ಲಿದ್ದಾರೆ. ಈ ಬಾರಿ ಚುನಾವಣೆ ಹಲವು ಕುತೂಹಲಕ್ಕೆ ಕಾರಣವಾಗಿದೆ.

ಅಂದರೆ, ಇದೇ ಮೊದಲ ಬಾರಿಗೆ ಕಡೂರು ಶಾಸಕ ಕೆ.ಎಸ್‌. ಆನಂದ್‌, ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ ಹಾಗೂ ಮೂಡಿಗೆರೆ ಕ್ಷೇತ್ರದ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಸ್ಪರ್ಧೆ ಮಾಡಿದ್ದಾರೆ. ವಿಧಾನಪರಿಷತ್ ಸದಸ್ಯ ಎಸ್‌.ಎಲ್‌. ಭೋಜೇಗೌಡ ಅವರು ಪುನರಾಯ್ಕೆ ಬಯಸಿ ಸ್ಪರ್ಧೆ ಮಾಡಿದ್ದಾರೆ.

ಎಲ್ಲಾ ನಾಲ್ಕು ಕ್ಷೇತ್ರಗಳಲ್ಲಿನ ಚುನಾವಣೆ ಕುತೂಹಲ ಮೂಡಿಸಿದೆ. ಕೆಲವೆಡೆ ನೇರ ನೇರಾ ಸ್ಪರ್ಧೆ ಇದ್ದರೆ, ಒಂದು ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಚಿಕ್ಕಮಗಳೂರು ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಲ್ಲಿ 32 ಮಂದಿ ಮತದಾರರು ಇದ್ದು, 2 ಸ್ಥಾನಗಳಿಗೆ 3 ಮಂದಿ ಸ್ಪರ್ಧೆ ಮಾಡಿದ್ದಾರೆ. ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ, ಎಸ್‌.ಎಲ್‌. ಭೋಜೇಗೌಡ, ಬಿಜೆಪಿ ಮುಖಂಡ, ಜಿಪಂ ಮಾಜಿ ಸದಸ್ಯ ಎಂ.ಎಸ್‌. ನಿರಂಜನ್‌ ಕಣದಲ್ಲಿದ್ದಾರೆ.

ಇಲ್ಲಿ ಅವಿರೋಧ ಆಯ್ಕೆಯಾಗುವ ನಿರೀಕ್ಷೆ ಇತ್ತು. ಆದರೆ, ನಿರಂಜನ್‌ ಸ್ಪರ್ಧಾ ಕಣದಲ್ಲಿ ಉಳಿದುಕೊಂಡಿದ್ದರಿಂದ ಈ ಕ್ಷೇತ್ರದ ಫಲಿತಾಂಶ ಕುತೂಹಲ ಮೂಡಿಸಿದೆ. ಅವರು ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಂಬುದಾಗಿ ಘೋಷಣೆ ಮಾಡಿದ್ದರಿಂದ ರಾಜಕೀಯ ವಲಯದಲ್ಲಿ ಹೊಸದೊಂದು ಚರ್ಚೆ ಹುಟ್ಟು ಹಾಕಿದೆ.

ಕೊಪ್ಪ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಹಕಾರ ಸಂಘಗಳ ಕ್ಷೇತ್ರದಲ್ಲಿ ಒಟ್ಟು 12 ಮಂದಿ ಮತದಾರರು ಇದ್ದು, ಒಂದು ಸ್ಥಾನಕ್ಕೆ 3 ಮಂದಿ ಸ್ಪರ್ಧೆ ಮಾಡಿದ್ದಾರೆ. ಕಣದಲ್ಲಿ ಪ್ರಜ್ವಲ್‌, ಕೆ.ಎಸ್‌. ರವೀಂದ್ರ, ಬಿ.ಎಸ್‌. ಸತೀಶ್‌ ಇದ್ದಾರೆ.

ಜಿಲ್ಲೆಯ ಎಲ್ಲಾ ತಾಲೂಕು ವ್ಯವಸಾಯೋತ್ಪನ್ನ ಸಹಕಾರ ಸಂಘಗಳ ಕ್ಷೇತ್ರದಲ್ಲಿ ಒಟ್ಟು 7 ಮಂದಿ ಮತದಾರರು ಇದ್ದು, ಇಲ್ಲಿನ ಒಂದು ಸ್ಥಾನಕ್ಕೆ ಕಡೂರು ಕ್ಷೇತ್ರದ ಶಾಸಕ ಕೆ.ಎಸ್‌. ಆನಂದ್‌, ಎಚ್‌.ಕೆ. ದಿನೇಶ್‌ ಹೊಸೂರು ಸ್ಪರ್ಧೆ ಮಾಡಿದ್ದಾರೆ. ಹಾಗಾಗಿ ಈ ಕ್ಷೇತ್ರದ ಫಲಿತಾಂಶ ಕುತೂಹಲ ಮೂಡಿಸಿದೆ.

ಜಿಲ್ಲೆಯ ಎಲ್ಲಾ ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕುಗಳು, ಪಟ್ಟಣ ಸಹಕಾರ ಬ್ಯಾಂಕ್‌ ಹಾಗೂ ಇನ್ನುಳಿದ ಎಲ್ಲಾ ಸಹಕಾರ ಸಂಘಗಳ ಕ್ಷೇತ್ರದಲ್ಲಿ 94 ಮತದಾರರು ಇದ್ದು, ಈ ಕ್ಷೇತ್ರದಲ್ಲಿ ಮೂಡಿಗೆರೆ ಕ್ಷೇತ್ರದ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಹಾಗೂ ಡಿಸಿಸಿ ಬ್ಯಾಂಕಿನ ಮಾಜಿ ಉಪಾಧ್ಯಕ್ಷ ಟಿ.ಎಲ್. ರಮೇಶ್‌ ಇದ್ದಾರೆ. ಹಾಗಾಗಿ ಈ ಕ್ಷೇತ್ರದ ಫಲಿತಾಂಶ ಕುತೂಹಲದಿಂದ ಜನರು ಎದುರು ನೋಡುತ್ತಿದ್ದಾರೆ.

Voting for the position of director of the board of directors of DCC Bank today

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...