Home namma chikmagalur chikamagalur ಷಡ್ಯಂತರದಿಂದ ಚುನಾವಣೆಯಲ್ಲಿ ಸೂಲು ಅನುಭವಿಸುವಂತಾಯಿತು
chikamagalurHomeLatest Newsnamma chikmagalur

ಷಡ್ಯಂತರದಿಂದ ಚುನಾವಣೆಯಲ್ಲಿ ಸೂಲು ಅನುಭವಿಸುವಂತಾಯಿತು

Share
Share

ಮೂಡಿಗೆರೆ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಮತದಾರರು ಕೈಗೊಂಡ ನಿರ್ಣಯಕ್ಕೆ ತಲೆ ಬಾಗುತ್ತೇನೆ. ಆದರೆ ತನ್ನ ಗೆಲುವಿಗೆ ವ್ಯವಸ್ಥಿತ ಷಡ್ಯಂತರ ನಡೆದಿದ್ದರಿಂದ ಸೋಲು ಅನುಭವಿಸುಂತಾಯಿತು ಎಂದು ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದರು.

ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವಿಗಾಗಿ ಉಪ ಸಭಾಪತಿ ಎಂ.ಕೆ.ಪ್ರಾಣೇಶ್, ಎಂಎಲ್‌ಸಿ ಸಿ.ಟಿ.ರವಿ ಸೇರಿದಂತೆ ಎನ್‌ಡಿಎ ಮುಖಂಡರು ಮತ್ತು ಕಾರ್ಯಕರ್ತರು ಕೆಲಸ ಮಾಡಿರುವುದು ಸರ್ವೆ ಸಾಮಾನ್ಯ ಎಂದರು.

ಆದರೆ ಸಹಕಾರ ಸಂಘದಲ್ಲಿ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರ ಸಂಖ್ಯೆ ಕಡಿಮೆ ಇದೆ. ಆದರೂ ಕಾಂಗ್ರೆಸ್‌ನ ಎಲ್ಲಾ ಎಂಎಲ್‌ಎ ಹಾಗೂ ಮುಖಂಡರು ಕೂಡ ಗೆಲುವಿಗಾಗಿ ಶ್ರಮಿಸಿದ್ದರೂ, ಚುನಾವಣೆಯನ್ನು ಇನ್ನಷ್ಟು ಗಂಭೀರವಾಗಿ ತೆಗೆದುಕೊಂಡಿದ್ದರೆ ಗೆಲುವು ಸಾಧ್ಯವಾಗುತ್ತಿತ್ತು ಎಂದು ಹೇಳಿದರು.

ಇಂತಹ ಚುನಾವಣೆಯಲ್ಲಿ ರಾಜಕೀಯ ಮುಖಂಡರು ಪಾಲ್ಗೊಂಡಿರುವ ಬಗ್ಗೆ ತಾನು ಪ್ರತಿಕ್ರಿಯೆ ನೀಡುವುದಿಲ್ಲ. ಇದಕ್ಕೆ ಉತ್ತರ ಅವರಿಂದಲೇ ಪಡೆಯಿರಿ. ತಾನು ಎಲ್ಲರಿಗೂ ಚಿರಪರಿಚಿತನಾಗಿದ್ದೇನೆ.

ರೈತರ ಪರವಾಗಿ ಕಾಳಜಿ ಇಟ್ಟುಕೊಂಡು ವಿಧಾನಸೌಧದ ಮುಂದೆ ಧರಣಿ ಕುಳಿತಿದ್ದೆ. ಹಾಗಾಗಿ ಮಲೆನಾಡು, ಬಯಲುಸೀಮೆ ರೈತರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದರಿಂದ ಚುನಾವಣೆ ಸ್ಪರ್ಧಿಸಿದ್ದೆ. ಆದರೆ ಲೋಕಪ್ಪಗೌಡ ಎಂಬುವರು ಮತದಾರರ ದಿಕ್ಕು ತಪ್ಪಿಸಿದ್ದ ಕಾರಣ ತನಗೆ ಸೋಲು ಉಂಟಾಗಿದೆ ಎಂದು ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸಹಕಾರಿ ಸಂಘಗಳ ಚುನಾವಣೆಗೆ ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತರಿಗೆ ಅವಕಾಶ ಸಿಗುವಂತೆ ಸದನದಲ್ಲಿ ಮಂಡನೆಯಾಗಿರುವುದಕ್ಕೆ ರಾಜ್ಯಪಾಲರು ಸಹಿ ಹಾಕಬೇಕೆಂದು ಒತ್ತಾಯಿಸಿದರು.

The conspiracy led to the election being lost.

 

 

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...