Home namma chikmagalur chikamagalur ಪಂಚಾಯತ್ ಸದಸ್ಯರ ಅಧಿಕಾರ ಅವಧಿ ಮುಂದುವರೆಸುವಂತೆ ಮನವಿ
chikamagalurHomeLatest Newsnamma chikmagalur

ಪಂಚಾಯತ್ ಸದಸ್ಯರ ಅಧಿಕಾರ ಅವಧಿ ಮುಂದುವರೆಸುವಂತೆ ಮನವಿ

Share
Oplus_153223168
Share

ಚಿಕ್ಕಮಗಳೂರು: ಗ್ರಾಮ ಪಂಚಾಯತ್ ಸದಸ್ಯರ ಅಧಿಕಾರ ಅವಧಿ ಆರು ತಿಂಗಳು ಮುಂದುವರೆಸುವಂತೆ ಅಜ್ಜಂಪುರ ತಾಲೂಕು ಗ್ರಾಮ ಪಂಚಾಯತ್ ಮಹಾ ಒಕ್ಕೂಟದ ಸದಸ್ಯರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಬುಧವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕೆಲ ಗ್ರಾಮ ಪಂಚಾಯತ್ ಸದಸ್ಯರು, ಕೆಲವು ಗ್ರಾಮ ಪಂಚಾಯತ್‌ಗಳಿಗೆ ಫೆ.೨ಕ್ಕೆ ಮತ್ತೆ ಕೆಲವು ಮಾರ್ಚ್, ಏಪ್ರಿಲ್ ತಿಂಗಳಿಗೆ ಪಂಚಾಯತ್ ಅಧಿಕಾರ ಅವಧಿ ಮುಕ್ತಾಯ ಗೊಳ್ಳುತ್ತಿದೆ. ಈಗಾಗಲೇ ಕೈಗೊಂಡಿರುವ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ಅವುಗಳನ್ನು ಪೂರ್ಣಗೊಳಿಸುವ ಸಲುವಾಗಿ ಗ್ರಾಮ ಪಂಚಾಯತ್ ಸದಸ್ಯರ ಅಧಿಕಾರ ಅವಧಿಯನ್ನು ಆರು ತಿಂಗಳು ಮುಂದುವರೆಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಸಚಿವ ಪ್ರಿಯಾಂಕಖರ್ಗೆ ಅವರಿಗೆ ಮನವಿ ಮಾಡಿದರು.
ರಾಜ್ಯಮಟ್ಟದಲ್ಲಿ ಜ.27ಕ್ಕೆ ಹೋರಾಟ ಹಮ್ಮಿಕೊಂಡಿದ್ದು, ಮುಖ್ಯಮಂತ್ರಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಸಚಿವರಿಗೆ ಗ್ರಾಮ ಪಂಚಾಯತ್ ಮಹಾ ಒಕ್ಕೂಟದ ರಾಜ್ಯಾಧ್ಯಕ್ಷರ ಮೂಲಕ ಮನವಿ ಸಲ್ಲಿಸಿ ಈಗಿರುವ ಗ್ರಾಮ ಪಂಚಾಯತ್ ಸದಸ್ಯರ ಅಧಿಕಾರ ಅವಧಿ 6 ತಿಂಗಳು ಮುಂದುವರೆಸುವಂತೆ ಮನವಿ ಮಾಡಲಾಗುವುದು ಎಂದು ಹೇಳಿದರು.
ಅಧಿಕಾರ ಅವಧಿ ಮುಗಿಯುವ ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿ ನೇಮಕ ಮಾಡುವಂತೆ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ. ಅಧಿಕಾರ ಅವಧಿ ಮುಗಿಯುವ ಪಂಚಾಯತ್‌ಗಳಿಗೆ ಕೂಡಲೇ ಚುನಾವಣೆ ನಡೆಸಬೇಕು. ಇಲ್ಲವೆ ಈಗಿರುವ ಪಂಚಾಯತ್ ಸದಸ್ಯರ ಅಧಿಕಾರ ಅವಧಿ 6 ತಿಂಗಳು ಮುಂದುವರೆಸಬೇಕೆಂದು ಆಗ್ರಹಿಸಿದರು.
ಅಧಿಕಾರ ಅವಧಿ ಮುಕ್ತಾಯಗೊಳ್ಳುವ ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಯನ್ನು ನೇಮಿಸಬೇಕೆಂದು ಹೊರಡಿಸಿರುವ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು. ಈಗಿರುವ ಆಡಳಿತ ಸಮಿತಿಯನ್ನೇ ನೂತನ ಆಡಳಿತ ಸಮಿತಿಯಾಗಿ ಮುಂದಿನ 6 ತಿಂಗಳಿಗೆ ನೇಮಕಮಾಡಬೇಕೆಂದು ಸಚಿವರನ್ನು ಕೋರಲಾಗುವುದು ಎಂದು ತಿಳಿಸಿದರು.
ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯನವರು, ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ.ಶಿವಕುಮಾರ್ ಅವರುಗಳು 2020ರ ಮೇ.12 ರಂದು ಜಂಟಿ ಸುದ್ದಿಗೋಷ್ಟಿ ನಡೆಸಿ ಗ್ರಾಮ ಪಂಚಾಯತ್‌ಗಳು ಪ್ರಜಾಪ್ರಭುತ್ವದ ತಳಪಾಯ, ಅವುಗಳಿಗೆ ಆಡಳಿತಾಧಿಕಾರಿಯನ್ನು ನೇಮಿಸದೆ ಇರುವ ಆಡಳಿತ ಸಮಿತಿ ಅವಧಿಯನ್ನು 6 ತಿಂಗಳು ವಿಸ್ತರಿಸಬೇಕೆಂದು ಆಗಿದ್ದ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು.
ಈಗ ಅವರುಗಳು ಅಧಿಕಾರದಲ್ಲಿದ್ದು, ಈಗಿರುವ ಆಡಳಿತ ಸಮಿತಿ ಅಧಿಕಾರವನ್ನು 6 ತಿಂಗಳು ಮುಂದುವರೆಸಲು ಮುಂದಾಗುವ ಮೂಲಕ ಪ್ರಜಾಪ್ರಭುತ್ವ ಅಡಿಪಾಯ ಗಟ್ಟಿಗೊಳಿಸಬೇಕೆಂದು ಒತ್ತಾಯಿಸಿದರು.
ವಿವಿಧ ಗ್ರಾಮ ಪಂಚಾಯತ್ ಸದಸ್ಯರಾದ ಶಂಕರಪ್ಪ, ದಿನೇಶ್, ತಿಮ್ಮಯ್ಯ, ಪುಷ್ಪಾ, ಶಕುಂತಲಾ, ಸಾಕಮ್ಮ, ನಾಗರಾಜ್, ಶಶಿಕಲಾ, ಮಂಜಪ್ಪ ಇದ್ದರು.
Request to extend the tenure of Panchayat members
Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...