Home namma chikmagalur chikamagalur ಅರಣ್ಯ ಇಲಾಖೆ ವತಿಯಿಂದ ಬೆಂಕಿ ನಂದಿಸುವ ಅಣುಕು ಪ್ರದರ್ಶನ
chikamagalurHomeLatest Newsnamma chikmagalur

ಅರಣ್ಯ ಇಲಾಖೆ ವತಿಯಿಂದ ಬೆಂಕಿ ನಂದಿಸುವ ಅಣುಕು ಪ್ರದರ್ಶನ

Share
Share
ಕೊಟ್ಟಿಗೆಹಾರ: ಸಮೀಪದ ತರುವೆ ಏಕಲವ್ಯ ವಸತಿ ಶಾಲೆಯಲ್ಲಿ ಅರಣ್ಯ ಇಲಾಖೆ ನೇತೃತ್ವದಲ್ಲಿ ಕಲಾವಿದ ರಮೇಶ್ ಬಂಗಾರ್ ತಂಡದ ವತಿಯಿಂದ ಸಂಕೇತ್ ಯುವ ಸಂಘವು ಪ್ರಾಣಿ, ಪರಿಸರ ಸಂರಕ್ಷಣೆ,ಬೆಂಕಿ ಅನಾಹುತದ ಮಾಹಿತಿ ಹಾಗೂ ಬೆಂಕಿ ನಂದಿಸುವ ಅಣುಕು ಪ್ರದರ್ಶನ ನಡೆಯಿತು.
ಉಪ ವಲಯ ಅರಣ್ಯಾಧಿಕಾರಿ ಬಸವರಾಜ್ ಮಾತನಾಡಿ’ ಬೆಂಕಿ ಮಾನವ ಜೀವಕ್ಕೆ ಅವಶ್ಯಕ.ಅಜಾಗರೂಕತೆ ಮಾಡಿದರೆ ಅಪಾಯಕಾರಿ.ಶಾಲೆಗಳಲ್ಲಿ ಬೆಂಕಿ ನಂದಿಸುವ ಸಾಧನ ಇಟ್ಟುಕೊಳ್ಳುವುದು ಉತ್ತಮ ಬೆಳವಣಿಗೆ.ಅಗ್ನಿ ಶಾಮಕ ದಳ ಹಾಗೂ ಅರಣ್ಯ ಇಲಾಖೆ 24ಗಂಟೆಯೂ ಅನಾಹುತದ ಸಮಯದಲ್ಲಿ ಸೇವೆ ನೀಡುತ್ತಾ ಬಂದಿದ್ದಾರೆ.ತುರ್ತು ಸೇವೆ,ಅಗ್ನಿ ದುರಂತ ತಡೆಯಲು ಇಲಾಖೆಯೊಂದಿಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಸುಖಾಸುಮ್ಮನೇ ಕಾಡಿಗೆ ಬೆಂಕಿ ಕೊಟ್ಟು ವಿಕೃತಿ ಮೆರೆದು ಕಾಡು ನಾಶ ಮಾಡುವುದು ಅಪರಾಧ ಕೃತ್ಯ.ಪರಿಸರ ಉಳಿಸುವುದು ಅರಣ್ಯ ಇಲಾಖೆ ಮಾತ್ರವಲ್ಲದೇ ಪ್ರತಿಯೊಬ್ಬ ನಾಗರೀಕರ ಕರ್ತವ್ಯವಾಗಿದೆ’ಎಂದರು.
ಅಣುಕು ಪ್ರದರ್ಶನ ನೀಡುವ ತಂಡದ ಮುಖ್ಯಸ್ಥೆ ರೂಪ ಬಂಗಾರ್ ಮಾತನಾಡಿ’ ನಮ್ಮ ಕಲಾವಿದರ ತಂಡ ಪ್ರತಿ ವರ್ಷವೂ ಬೆಂಕಿ ಅನಾಹುತ ತಪ್ಪಿಸುವುದು ಹೇಗೆ ಎಂಬುದರ ಬಗ್ಗೆ ಬೀದಿ ನಾಟಕದ ಮೂಲಕ ಜನಜಾಗೃತಿ ಮೂಡಿಸುತ್ತಾ ಬಂದಿದೆ.ಪರಿಸರ ಸ್ವಚ್ಚತೆ ಜನರಲ್ಲಿ ಮೂಡಿಸಲು ನಾಟಕದ ರೂಪದಲ್ಲಿ ತಂಡದವರು ಸರಳವಾಗಿ ಕಾಡು ಪರಿಸರ ಹೇಗೆ ಉಳಿಸಬೇಕು.ಪ್ರಾಣಿ,ಪಕ್ಷಿಗಳನ್ನು ಕೊಲ್ಲದೇ ಅವುಗಳನ್ನು ಪ್ರೀತಿಸಿ ಪ್ರಾಣಿ ಪ್ರೀಯರಾಗಬೇಕು. ಪ್ರಾಣಿಗಳನ್ನು  ರಕ್ಷಿಸುವ ಬಗೆ ಹೇಗೆ ಎಂಬುದರ ಬಗ್ಗೆ ನಾಟಕ ಪ್ರದರ್ಶನ ನೀಡಿ ಉತ್ತಮ ಸಂದೇಶ ನೀಡಿ ಶಾಲಾ ಮಕ್ಕಳಲ್ಲಿ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಏಕಲವ್ಯ  ಶಾಲಾ ಪ್ರಾಂಶುಪಾಲರಾದ ಸತೀಶ್ ಜೈಸ್ವಾಲ್,ಉಪವಲಯ ಅರಣ್ಯಾಧಿಕಾರಿಗಳಾದ ಮಂಜುನಾಥ್,ನಾಗರಾಜ್,ಉಮೇಶ್,ಬೀಟ್ ಪಾರೆಸ್ಟ್ ಉಮೇಶ್, ಸುಧೀರ್,ಕಲಾವಿದರಾದ ಜಯಂತಿ ರಮೇಶ್ ಬಂಗಾರ್, ಕುಮಾರೇಷನ್, ಮಹೇಶ್,ಹನುಮಂತ್,ಅಮಿತ್ ಮತ್ತಿತರರು ಭಾಗವಹಿಸಿದ್ದರು.
Firefighting demonstration by the Forest Department
Share

Leave a comment

Leave a Reply

Your email address will not be published. Required fields are marked *

Don't Miss

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...

Related Articles

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು...

ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಹಲ್ಲೆ

ಮೂಡಿಗೆರೆ:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ...

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ 25ಕ್ಕೂ ಹೆಚ್ಚುಕಡೆ ಬೆಂಕಿ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು  ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ...

3.50 ಕೋಟಿ ರೂ ವೆಚ್ಚದ ವಿವಿಧ ರಸ್ತೆಗಳ ಲೋಕಾರ್ಪಣೆ

ಚಿಕ್ಕಮಗಳೂರು:  ಬಡವರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರ ಧರ್ಮ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ...