Home Crime News ಬಾವಿಕೆರೆ ಗ್ರಾಮದಲ್ಲಿ ಹಾಡುಹಗಲೇ ಕಳ್ಳತನ
Crime NewsHomeLatest Newsnamma chikmagalurTarikere

ಬಾವಿಕೆರೆ ಗ್ರಾಮದಲ್ಲಿ ಹಾಡುಹಗಲೇ ಕಳ್ಳತನ

Share
Share

ತರೀಕೆರೆ: ತಾಲ್ಲೂಕಿನ ಲಕ್ಕವಳ್ಳಿ ಹೋಬಳಿಯ ಬಾವಿಕೆರೆ ಗ್ರಾಮದಲ್ಲಿ ಹಾಡುಹಗಲೇ ಕಳ್ಳತನ ನಡೆದಿದ್ದು, ದಂಪತಿಗಳು ಕೆಲಸಕ್ಕೆ ಹೋದ ಸಮಯದಲ್ಲಿ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ನಗದನ್ನು ದೋಚಿದ್ದಾರೆ.

ಬಾವಿಕೆರೆ ಗ್ರಾಮದ ನಿವಾಸಿಗಳಾದ ನಗೀನಾ ಬಾನು ಮತ್ತು ಅವರ ಪತಿ ಮೊಹಮ್ಮದ್ ಖಾಲೀಂ ಮನೆಗೆ ಬೀಗ ಹಾಕಿಕೊಂಡು ಗ್ರಾಮದ ಪೆಟ್ರೋಲ್ ಬಂಕ್ ಎದುರಿರುವ ‘ಕೆ.ಜಿ.ಎನ್ ಚಿಕನ್ ಅಂಗಡಿ’ಗೆ ಕೆಲಸಕ್ಕೆ ಹೋಗಿದ್ದರು. ರಾತ್ರಿ 8 ಗಂಟೆಗೆ ವಾಪಸ್ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಕಂಡುಬಂದಿದೆ.

ಮನೆಯೊಳಗೆ ಪರಿಶೀಲಿಸಿದಾಗ, ಗಾಡ್ರೆಜ್ ಬೀರುವಿನ ಲಾಕರ್ ಮುರಿದು ಸುಮಾರು 60,000 ರೂ. ಮೌಲ್ಯದ 6 ಗ್ರಾಂ ತೂಕದ ಎರಡು ಚಿನ್ನದ ಚೈನ್ ಹಾಗೂ ಕೋಳಿ ಮಾರಾಟ ಮಾಡಿ ಕೂಡಿಟ್ಟಿದ್ದ 80,000 ರೂ. ನಗದು ಹಣವನ್ನು ಕಳವು ಮಾಡಿರುವುದು ಬೆಳಕಿಗೆ ಬಂದಿದೆ.

ಒಟ್ಟು 1,40,000 ರೂ. ಮೌಲ್ಯದ ಸ್ವತ್ತುಗಳನ್ನು ಕಳ್ಳರು ದೋಚಿದ್ದಾರೆ. ಈ ಸಂಬಂಧ ನಗೀನಾ ಬಾನು ನೀಡಿದ ದೂರಿನ ಮೇರೆಗೆ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Theft in broad daylight in Bavikere village

Share

Leave a comment

Leave a Reply

Your email address will not be published. Required fields are marked *

Don't Miss

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ. ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ....

ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ. ಪಟ್ಟಣದ...

Related Articles

ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಷನ್ ಸ್ಥಾಪನೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಶನ್ ಸ್ಥಾಪಿಸಿದ್ದು, ಮುಂದಿನ ದಿನಗಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ...

ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ

ಚಿಕ್ಕಮಗಳೂರು: ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ ಸಾಧನೆ ಮಾಡಿರುವ ಶಾಸಕರು ಉಳಿದಿರುವ...

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ವಶ

ಚಿಕ್ಕಮಗಳೂರು : ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಕೆಎಂ ರಸ್ತೆಯ...

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ...