Home namma chikmagalur chikamagalur ಅಪರಾಧ ಪ್ರಕರಣದಲ್ಲಿ ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ಆರೋಪಿ
chikamagalurCrime NewsHomeLatest Newsnamma chikmagalur

ಅಪರಾಧ ಪ್ರಕರಣದಲ್ಲಿ ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ಆರೋಪಿ

Share
Share

ಚಿಕ್ಕಮಗಳೂರು: ಮಾದಕ ವಸ್ತುಗಳ ಸಾಗಾಟ/ಸರಬರಾಜು, ಮಾರಾಟ ಹಾಗೂ ಸೇವನೆ  ಪ್ರಕರಣಗಳಲ್ಲಿ ಆರೋಪಿತನಾಗಿದ್ದ ನದೀಮ್ ಖಾನ್‌ನನ್ನು ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿದೆ .

ಇಲ್ಲಿನ ಗೌರಿ ಕಾಲುವೆ ಹಿಟ್ಟಿನ ಮೇಲಿನ ಹತ್ತಿರ ವಾಸವಾಗಿದ್ದ ನದೀಮ್ ಖಾನ್ (೩೧ ) ಮಾದಕ ವಸ್ತುಗಳ ಸಂಗ್ರಹಣೆ ಸಾಗಾಟ/ಸರಬರಾಜು, ಮಾರಾಟ ಮತ್ತು ಸೇವನೆ ಮಾಡುವ ಅಪರಾಧ ಪ್ರಕರಣಗಳಲ್ಲಿ ತೊಡಗಿಸಿಕೊಂಡಿದ್ದ.

ವೃತ್ತಿಪರ ಡ್ರಗ್ಸ್ ಪೆಡ್ಲರ್ ಆಗಿದ್ದ ಈತನ ವಿರುದ್ಧ ೪ ಮಾದಕ ವಸ್ತುಗಳ ಸಂಗ್ರಹಣೆ, ಸಾಗಾಟ/ಸರಬರಾಜು, ಮಾರಾಟ ಪ್ರಕರಣಗಳು ದಾಖಲಾಗಿತ್ತು. ಒಂದು ಪ್ರಕರಣದಲ್ಲಿ ಈತನಿಗೆ ಶಿಕ್ಷೆಯಾಗಿದೆ .೩ ಪ್ರಕರಣಗಳು ನ್ಯಾಯಾಲಯದ ವಿಚಾರಣೆಯಲ್ಲಿವೆ.

ಒಂದು ಎನ್ ಡಿವಿಎಸ್ ಸೇವನೆ ಪ್ರಕರಣ ದಾಖಲಾಗಿ ಈ ಪ್ರಕರಣದಲ್ಲಿಯೂ ಈತನಿಗೆ ಶಿಕ್ಷೆಯಾಗಿದೆ. ಆರೋಪಿಯು ಸಮಾಜದ ಸ್ವಾಸ್ಥ್ಯ ಕೆಡಿಸುತ್ತ ನಿರಂತರವಾಗಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು,ಈತನನ್ನು ಕೆಂದ್ರ ಕಾರಾಗೃಹ ಬಳ್ಳಾರಿ ಇಲ್ಲಿ ಒಂದು ವರ್ಷಗಳ ಅವಧಿಗೆ ಬಂಧನದಲ್ಲಿ ಇಡಲು ಆದೇಶದ ಹಿನ್ನೆಲೆಯಲ್ಲಿ ಬಳ್ಳಾರಿ ಕಾರಾಗೃಹಕ್ಕೆ ಒಪ್ಪಿಸಲಾಗಿದೆ.

Accused sent to Bellary Central Jail in criminal case

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...