Home namma chikmagalur chikamagalur ಐಎ ಆಧಾರಿತ ಸಂಚಾರ ನಿರ್ವಹಣಾ ವ್ಯವಸ್ಥೆಗೆ ಚಾಲನೆ
chikamagalurHomeLatest Newsnamma chikmagalur

ಐಎ ಆಧಾರಿತ ಸಂಚಾರ ನಿರ್ವಹಣಾ ವ್ಯವಸ್ಥೆಗೆ ಚಾಲನೆ

Share
Share

ಚಿಕ್ಕಮಗಳೂರು: ಸಂಚಾರ ನಿಯಮ ಉಲ್ಲಂಘನೆಗೆ ಸ್ವಯಂ ಚಾಲಿತ ದಂಡ ನಿರ್ವಹಣಾ ವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆಗಾಗಿ ಜಿಲ್ಲಾ ಪೊಲೀಸ್ ವತಿಯಿಂದ ಆರಂಭಿಸಲಾಗಿರುವ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ರಸ್ತೆ ಸಂಚಾರ ನಿರ್ವಹಣಾ ವ್ಯವಸ್ಥೆಗೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಸೋಮವಾರ ಚಾಲನೆ ನೀಡಿದರು.

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ, ಅಪರಾಧ ಪ್ರಕರಣಗಳ ನಿಯಂತ್ರಣ ತಡೆಗಟ್ಟುವಿಕೆ ಹಾಗೂ ಹೆಚ್ಚುತ್ತಿರುವ ವಾಹನ ದಟ್ಟಣೆ ಸಂಬಂಧ ರಸ್ತೆ ಸಂಚಾರ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸುಮಾರು 41 ಸೌರ ವಿದ್ಯುತ್ ಆಧಾರಿತ ಕೃತಕ ಬುದ್ಧಿಮತ್ತೆ (ಎಐ) ಕ್ಯಾಮರಾ ಕಣ್ಗಾವಲು ಸಂಪರ್ಕ ಜಾಲವನ್ನು ಚಿಕ್ಕಮಗಳೂರು ನಗರದೆಲ್ಲೆಡೆ ಅಳವಡಿಸಲಾಗಿದ್ದು, ಇಂಟಿಗ್ರೇಟೆಡ್ ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್ (ಐಸಿಸಿಸಿ) ಮೂಲಕ ಇದನ್ನು ನಿರ್ವಹಿಸಲಾಗುತ್ತಿದೆ.

ಕೃತಕ ಬುದ್ಧಿಮತ್ತೆ ಆಧಾರಿತ ರಸ್ತೆ ಸಂಚಾರ ನಿರ್ವಹಣಾ ವ್ಯವಸ್ಥೆಗೆ ಚಾಲನೆ ನೀಡಿ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್ ಅವರು, “ಮೆಸ್ಕಾಂ ಸಹಯೋಗದಲ್ಲಿ ಕಾರ್ಪೋರೇಟ್ ಹೊಣೆಗಾರಿಕೆ (CSR) ನಿಧಿಯಡಿ ಅಂದಾಜು 1.75 ಕೋಟಿ ರೂ. ವೆಚ್ಚದಲ್ಲಿ ಎರಡು ಹಂತಗಳಲ್ಲಿ ಯೋಜನೆ ಜಾರಿಗೊಳಿಸಲಾಗುತ್ತಿದೆ,” ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಎಚ್‌.ಡಿ. ತಮ್ಮಯ್ಯ, ಜಿಲ್ಲಾಧಿಕಾರಿ ಎನ್‌.ಎಂ. ನಾಗರಾಜ್‌, ಜಿಲ್ಲಾ ರಕ್ಷಣಾಧಿಕಾರಿ ಜಿತೇಂದ್ರ ಕುಮಾರ್‌ ದಯಾಮ ಮತ್ತಿತರರು ಇದ್ದರು.

Launch of AI-based traffic management system

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...