Home namma chikmagalur chikamagalur ಬೋರ್‌ವೆಲ್ ಲಾರಿಗೆ ಬೊಲೆರೊ ಜೀಪ್ ಡಿಕ್ಕಿ-ಸ್ಥಳದಲ್ಲೇ ಓರ್ವನ ಸಾವು
chikamagalurHomeLatest Newsnamma chikmagalur

ಬೋರ್‌ವೆಲ್ ಲಾರಿಗೆ ಬೊಲೆರೊ ಜೀಪ್ ಡಿಕ್ಕಿ-ಸ್ಥಳದಲ್ಲೇ ಓರ್ವನ ಸಾವು

Share
Share

ಚಿಕ್ಕಮಗಳೂರು: ರಸ್ತೆ ಬದಿಯಲ್ಲಿ ನಿಂತಿದ್ದ ಬೋರ್‌ವೆಲ್ ಲಾರಿಗೆ ಬೊಲೆರೊ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಜೀಪ್‌ನಲ್ಲಿದ್ದ ಏಳು ಜನರಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ದೋರನಾಳು ಗ್ರಾಮದ ಬಳಿ ಸಂಭವಿಸಿದೆ.

ಘಟನೆಯಲ್ಲಿ ಉಳಿದ ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ.

ಎಂ.ಸಿ.ಹಳ್ಳಿಯಿಂದ ಕಾರ್ಮಿಕರು ಪ್ರತಿನಿತ್ಯ ಬೊಲೆರೊ ಜೀಪ್‌ನಲ್ಲಿ ಕೂಲಿ ಕೆಲಸಕ್ಕಾಗಿ ಕಲ್ಲತ್ತಿಗಿರಿಗೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ.

ಕೆಲಸ ಮುಗಿಸಿಕೊಂಡು ವಾಪಸ್ ಎಂ.ಸಿ.ಹಳ್ಳಿಗೆ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ಸ್ಥಳಕ್ಕೆ ತರೀಕೆರೆ ಮತ್ತು ಲಿಂಗದಹಳ್ಳಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Bolero jeep collides with borewell lorry – one person dies on the spot

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...