ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ.
ಪಟ್ಟಣದ ಪುರಸಭೆ ವ್ಯಾಪ್ತಿಯ 7ನೇ ವಾರ್ಡಿನಲ್ಲಿರುವ ಅ.ನಂ.7762/4081ರ ಸ್ವತ್ತಿನ ಚಕ್ಕುಬಂಧಿಯನ್ನು ನಿಯಾಮಬಾಹಿರವಾಗಿ ತಿದ್ದುಪಡಿ ಮಾಡಿರುವ ಬಗ್ಗೆ ಪಟ್ಟಣದ ನಿವಾಸಿ ಕೆ.ಇ. ಹಿರಿಯಣ್ಣ ಜಿಲ್ಲಾಧಿಕಾರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ
ಪುರಸಭೆಯ ದ್ವಿತೀಯ ದರ್ಜೆ ಸಹಾಯಕ, ಕಂದಾಯ ನಿರೀಕ್ಷಕ ಜಗದೀಶ್ ರಾಜ್ ಅರಸ್ ಮತ್ತು ಖಾತೆ ಶಾಖೆಯ ವಿಷಯ ನಿರ್ವಾಹಕ ಸಿ.ಎಸ್. ಶಂಕರ್ ಕೈಬರಹದ ಅರ್ಜಿಗಳನ್ನು ಭೌತಿಕವಾಗಿ ನಗರ ಸಂಸ್ಥೆಗಳಲ್ಲಿ ಸ್ವೀಕರಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದರೂ ಕೂಡ ಕೈ ಬರಹದ ಅರ್ಜಿಯನ್ನು ಸ್ವೀಕರಿಸಿ ಭೌತಿಕ ಕಡತದಲ್ಲಿ ಪ್ರಕರಣವನ್ನು ನಿರ್ವಹಿಸಿ ಪೌರಾಡಳಿತ ನಿರ್ದೇಶನಾಲಯ ಸುತ್ತೊಲೆಯನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ಬಾಕಿ ಇಟ್ಟು ಸೇವೆಯಿಂದ ಅಮಾನತ್ತುಗೊಳಿಸಿದ್ದಾರೆ.
Two second grade assistants of Kadur Municipality suspended
Leave a comment