ತರೀಕೆರೆ : ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿ ದಾಳಿ ನಡೆಸಿರುವ ಘಟನೆ ತಾಲೂಕಿನ ಎ.ರಾಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ರಾಮಕೃಷ್ಣ ಇಂದು ಬೆಳಿಗ್ಗೆ ತಮ್ಮ ತೋಟದಲ್ಲಿ ಕೆಲಸ ಮಾಡಲು ತೆರಳಿದ್ದ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಕರಡಿ ದಾಳಿ ಮಾಡಿದೆ.
ಈ ಭೀಕರ ದಾಳಿಯಿಂದಾಗಿ ರಾಮಕೃಷ್ಣ ಅವರ ಕೈ ಮತ್ತು ಕಾಲುಗಳಿಗೆ ತೀವ್ರವಾದ ಗಾಯಗಳಾಗಿದ್ದು, ಕರಡಿಯು ಅವರ ಮಂಡಿ ಹಾಗೂ ಮೊಣಕೈ ಭಾಗವನ್ನು ಬಲವಾಗಿ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ.ತೀವ್ರ ರಕ್ತಸ್ರಾವವಾಗುತ್ತಿದ್ದರೂ ಧೈರ್ಯಗುಂದದ ರಾಮಕೃಷ್ಣ ಅವರು ಕರಡಿಯೊಂದಿಗೆ ಹೋರಾಡಿ ಅಲ್ಲಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಗಾಯಗೊಂಡ ಸ್ಥಿತಿಯಲ್ಲೇ ತೋಟದಿಂದ ಗ್ರಾಮದವರೆಗೆ ಓಡಿ ಬಂದ ಅವರನ್ನು ಕೂಡಲೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯು ತರೀಕೆರೆ ವಲಯ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
Bear attacks farmer
Leave a comment