Home namma chikmagalur chikamagalur ರಸ್ತೆ ಅಪಘಾತದಲ್ಲಿ ಇಬ್ಬರ ಸಾವು-ಐವರಿಗೆ ಗಾಯ
chikamagalurHomeLatest Newsnamma chikmagalur

ರಸ್ತೆ ಅಪಘಾತದಲ್ಲಿ ಇಬ್ಬರ ಸಾವು-ಐವರಿಗೆ ಗಾಯ

Share
Share

ಕಡೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗೇಸರ ಸೇತುವೆಯ ಮೇಲೆ ನಡೆದ ರಸ್ತೆ ಅಪಘಾತದಲ್ಲಿ ರಾಜಯ್ಯ ಎಂಬುವವರು ಮೃತಪಟ್ಟಿದ್ದಾರೆ.

ಜಿ. ಮಾದಾಪುರ ಗ್ರಾಮದ ನಿವಾಸಿಯಾದ ಇವರು ತಮ್ಮ ಟಿವಿಎಸ್ ಎಕ್ಸ್‌ಎಲ್ ವಾಹನದಲ್ಲಿ ಮಾದಾಪುರ ಮಠದ ಬಳಿ ಇರುವ ಅಂಗಡಿಗೆ ವ್ಯಾಪಾರಕ್ಕಾಗಿ ತೆರಳುತ್ತಿದ್ದರು. ಈ ವೇಳೆ ಗಂಗೇಸರ ಸೇತುವೆಯ ಮೇಲೆ ವಾಹನ ಸ್ಕಿಡ್ ಆಗಿ ಬಿದ್ದ ಪರಿಣಾಮ ಅವರ ತಲೆಯ ಬಲ ಭಾಗಕ್ಕೆ ತೀವ್ರ ರಕ್ತಗಾಯವಾಗಿತ್ತು.

ತಕ್ಷಣವೇ ಅವರನ್ನು ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಆಟೋ ಪಲ್ಟಿ: ಚಾಲಕ ಸಾವು, ಐವರಿಗೆ ಗಾಯ

ಬೀರೂರು ಮತ್ತು ಅಜ್ಜಂಪುರ ಮಧ್ಯದ ದೋಗೆಹಳ್ಳಿ ಬಳಿ ಆಟೋ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಆಟೋ ಚಾಲಕ ಶಿವು ಎಂಬುವವರು ಮೃತಪಟ್ಟಿದ್ದು, ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಜನವರಿ 31ರ ಮುಂಜಾನೆ ಭದ್ರಾವತಿ ಮತ್ತು ಬೀರೂರು ನಿವಾಸಿಗಳಾದ ಹನುಮಂತ ರಾವ್, ಪ್ರಮಿಳಾ, ಪಲ್ಲವಿ, ಧನ್ಯ ಹಾಗೂ ವರುಣ ಅವರೊಂದಿಗೆ ಶಿವು ಅವರು ಅಂತರಘಟ್ಟೆ ಜಾತ್ರೆಗೆ ಆಟೋದಲ್ಲಿ ತೆರಳುತ್ತಿದ್ದರು. ಮುಂಜಾನೆ 6 ಗಂಟೆಯ ಸುಮಾರಿಗೆ ರಸ್ತೆಗೆ ನಾಯಿ ಅಡ್ಡ ಬಂದಾಗ ಅದನ್ನು ತಪ್ಪಿಸಲು ಹೋದ ಚಾಲಕ ಶಿವು ಅವರ ನಿಯಂತ್ರಣ ತಪ್ಪಿ ಆಟೋ ರಸ್ತೆ ಬದಿಯ ಕಾಲುವೆಗೆ ಉರುಳಿ ಬಿತ್ತು.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿವು ಅವರನ್ನು ಬೀರೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಉಳಿದ ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಮೃತರ ಸಹೋದರ ಶ್ರೀನಿವಾಸ ನೀಡಿದ ದೂರಿನ ಮೇರೆಗೆ ಬೀರೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Two dead five injured in road accident

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...