Home Crime News ಸೈಬ‌ರ್ ವಂಚನೆಯಿಂದ ಲಕ್ಷಾಂತರ ರೂಪಾಯಿ ವಂಚಕರ ಪಾಲು
Crime NewsHomeKadurLatest Newsnamma chikmagalur

ಸೈಬ‌ರ್ ವಂಚನೆಯಿಂದ ಲಕ್ಷಾಂತರ ರೂಪಾಯಿ ವಂಚಕರ ಪಾಲು

Share
Share

ಕಡೂರು: ಸೈಬ‌ರ್ ವಂಚನೆ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು ಲಕ್ಷಾಂತರ ರೂಪಾಯಿ ವಂಚಕರ ಪಾಲಾಗುತ್ತಿದೆ.

ಕಡೂರಿನ ದರ್ಶನ್ ಎನ್.ಎಂ. ಎಂಬುವವರ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ಒಟ್ಟು 4,02,000 ರೂಪಾಯಿ ಹಣವನ್ನು ಸೈಬರ್ ಕಳ್ಳರು ಲೂಟಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ದರ್ಶನ್ ಅವರಿಗೆ ಜನವರಿ 29ರಂದು ಬೆಳಿಗ್ಗೆ ಮೊಬೈಲ್‌ಗೆ ವಂಚಕರಿಂದ ಸಂದೇಶವೊಂದು ಬಂದಿದ್ದು, ಅದನ್ನು ಓಪನ್ ಮಾಡಿದ ಕೆಲವೇ ಸಮಯದಲ್ಲಿ ಅವರ ಕೆನರಾ ಬ್ಯಾಂಕ್ ಖಾತೆಯಿಂದ ಹಣ ಕಡಿತಗೊಂಡಿರುವ ಬಗ್ಗೆ ಸರಣಿ ಸಂದೇಶಗಳು ಬರಲಾರಂಭಿಸಿವೆ.

ತಕ್ಷಣವೇ ಅವರು ಕಡೂರಿನ ಕೆನರಾ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ವಿಚಾರಿಸಿದಾಗ, ಅವರ ಗಮನಕ್ಕೆ ಬಾರದಂತೆ ಅಪರಿಚಿತರು ಹಂತ ಹಂತವಾಗಿ ಒಟ್ಟು 4.02 ಲಕ್ಷ ರೂಪಾಯಿಗಳನ್ನು ವರ್ಗಾವಣೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಈ ಸಂಬಂಧ ದರ್ಶನ್ ಅವರು ಜನವರಿ 31ರಂದು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ತನ್ನ ಖಾತೆಯಿಂದ ಹಣ ವರ್ಗಾವಣೆ ಮಾಡಿಕೊಂಡು ಮೋಸ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಮತ್ತು ಕಳೆದುಹೋದ ಹಣವನ್ನು ವಾಪಸ್ ಕೊಡಿಸಬೇಕು ಎಂದು ಮನವಿ ಮಾಡಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Cyber ​​fraud costs fraudsters millions of rupees

Share

Leave a comment

Leave a Reply

Your email address will not be published. Required fields are marked *

Don't Miss

ಸಿ.ಡಿ.ಎ ಮಾಜಿ ಅಧ್ಯಕ್ಷ ಆನಂದ್ ಮೇಲೆ ಹಲ್ಲೆ …?

ಚಿಕ್ಕಮಗಳೂರು: ಮಾಜಿ ಸಚಿವ ಸಿ.ಟಿ.ರವಿ ಆಪ್ತ ಸುದರ್ಶನ್ ಬಲಗೈ ಬಂಟ ಹಾಲಿ ಮೂಗ್ತಿಹಳ್ಳಿ ಸಹಕಾರ ಸಂಘದ ಅಧ್ಯಕ್ಷ ಆನಂದ್ ನ ರಸಲೀಲೆ ನಡೆಸುತ್ತಿದ್ದಾರೆ ಎಂದು ಕೆಲವರು ಹೋಮ್ ಸ್ಟೇಗೆ ನುಗ್ಗಿ ಗಲಾಟೆ...

ರೈತರಿಗೆ ತೋಟಗಾರಿಕೆ ಬೆಳೆಗಳ ಬಗ್ಗೆ ಮಾಹಿತಿ ನೀಡುವುದೇ ಚೈತ್ರೋತ್ಸವದ ಉದ್ದೇಶ

ಚಿಕ್ಕಮಗಳೂರು: ಜಿಲ್ಲೆಯರೈತರು ಮತ್ತು ಬೆಳೆಗಾರರಿಗೆ ತೋಟಗಾರಿಕೆ ಬೆಳೆಗಳ ಬಗ್ಗೆ ಉಪಯುಕ್ತ ಮಾಹಿತಿ ನೀಡುವುದೇಚೈತ್ರೋತ್ಸವದಉದ್ದೇಶಎಂದುಜಿಲ್ಲಾಧಿಕಾರಿಎಂ.ಎನ್ ನಾಗರಾಜ್ ತಿಳಿಸಿದರು. ಅವರುಇಂದು ನಗರದ ನೇತಾಜಿ ಸುಭಾಷ್‌ಚಂದ್ರಬೋಸ್‌ಜಿಲ್ಲಾಆಟದ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪಶುಪಾಲನಾ ಮತ್ತು ಪಶು...

Related Articles

ಲಾಭಾಂಶ ಆಮಿಷ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚನೆ

ಚಿಕ್ಕಮಗಳೂರು: ಟ್ರೇಡಿಂಗ್ ಹೆಸರಿನಲ್ಲಿ ಹೆಚ್ಚಿನ ಲಾಭಾಂಶ ನೀಡುವ ಆಮಿಷವೊಡ್ಡಿ ಯುವಕನೊಬ್ಬನಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ...

ಸಿಡಿಎ ಅಧ್ಯಕ್ಷರಾಗಿ ಎಚ್‌.ಪಿ. ಮಂಜೇಗೌಡ ನೇಮಕ

ಚಿಕ್ಕಮಗಳೂರು: ಚಿಕ್ಕಮಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಸಿಡಿಎ) ಚಿಕ್ಕಮಗಳೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಪಿ. ಮಂಜೇಗೌಡ ಅವರನ್ನು...

ಕಾಂಗ್ರೆಸ್ ನಲ್ಲಿ ಸಿ.ಡಿ.ಎ. ಫೈಟ್ – ಕಾಂಗ್ರೆಸ್ ನಲ್ಲಿ ಸಿ.ಡಿ.ಎ. ಫೈಟ್ – ರಾಮಚಂದ್ರ ಬಿಗಿ ಪಟ್ಟು

ಚಿಕ್ಕಮಗಳೂರು: ಹಿರೇಮಗಳೂರು ರಾಮಚಂದ್ರ ಸಿ.ಡಿ.ಎ.ಅಧ್ಯಕ್ಷ ಸ್ಥಾನ ಪಡೆಯಲು ಬಿಗಿ ಪಟ್ಟು ಹಿಡಿದು ಒತ್ತಾಯ ಮಾಡುತ್ತಿದ್ದಾರೆ. ಕಳೆದ...

ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂವರು ಸಾವು

ಚಿಕ್ಕಮಗಳೂರು :ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂವರು ಸಾವಪ್ಪಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್...