Home namma chikmagalur chikamagalur ಕೇಂದ್ರ ಬಜೆಟ್‌ ನಲ್ಲಿ ದೇಶದ ಮೂಲ ಸೌಕರ್ಯಾಭಿವೃದ್ಧಿಗೆ ಒತ್ತು
chikamagalurHomeLatest Newsnamma chikmagalur

ಕೇಂದ್ರ ಬಜೆಟ್‌ ನಲ್ಲಿ ದೇಶದ ಮೂಲ ಸೌಕರ್ಯಾಭಿವೃದ್ಧಿಗೆ ಒತ್ತು

Share
Share

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಆಶೋತ್ತರ ಕೇವಲ ಚುನಾವಣೆ ಗೆಲ್ಲುವುದಲ್ಲ, ದೇಶ ಗೆಲ್ಲಿಸುವುದು, ಬಡವರಿಗೆ ಬಲಕೊಡುವುದಾಗಿದೆ ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಹೇಳಿದರು.

ಕೇಂದ್ರ ಸರ್ಕಾರದ ಬಜೆಟ್‌ ಕುರಿತು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಸಚಿವೆ ನಿರ್ಮಲಾ ಸೀತಾರಾಮನ್‌ ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ ಕೇವಲ ಚುನಾವಣೆ ಗೆಲ್ಲುವುದಲ್ಲ.

ದೇಶದ ಮೂಲಸೌಕರ್ಯಾಭಿವೃದ್ಧಿಗೆ ಒತ್ತುಕೊಡುವುದಾಗಿದೆ. ಸಣ್ಣ ಉದ್ಯಮಗಳನ್ನು ಪ್ರೋತ್ಸಾಹಿಸುವ ಮೂಲಕ ಉದ್ಯೋಗ ಸೃಷ್ಟಿ ಮಾಡುವುದಾಗಿದೆ. ವಸತಿ ರಹಿತರಿಗೆ ವಸತಿ ಕಲ್ಪಿಸುವುದು. ಈ ಎಲ್ಲವನ್ನೂ ದೃಷ್ಟಿಯಲ್ಲಿ ಇಟ್ಟುಕೊಂಡು ಕೇಂದ್ರ ಸರ್ಕಾರ ಬಜೆಟ್‌ ರೂಪಿಸಿದೆ ಎಂದರು.

100 ಲಕ್ಷ ಕೋಟಿ ರು, ವೆಚ್ಚದಲ್ಲಿ ಭಾರತ ಆತ್ಮನಿರ್ಬರವಾಗಬೇಕು ಎನ್ನುವುದು ಬಜೆಟ್ ಉದ್ದೇಶವಾಗಿದೆ. ನಮ್ಮ ಬೆಳವಣಿಗೆಯ ದರ 7.8 ದಾಟಿದೆ, ಇದು ಒಂದು ರೀತಿ ದಾಖಲೆಯಾಗಿದೆ. ಭಾರತ ಆರ್ಥಿಕವಾಗಿ ಜಗತ್ತಿನ 4ನೇ ಅತಿ‌ ದೊಡ್ಡ ಶಕ್ತಿವಾಗಿದ್ದು, ಶೀಘ್ರವೇ 3ನೇ ಸ್ಥಾನಕ್ಕೆ ಏರುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಹೇಳಿದರು.

ಭಾರತಕ್ಕೆ ಸ್ವಾತಂತ್ರ್ಯ ಬಂದು 2047ಕ್ಕೆ 100 ವರ್ಷವಾಗಲಿದೆ. ಆ ವೇಳೆಗೆ ಭಾರತ ಆರ್ಥಿಕ-ಜ್ಞಾನದಲ್ಲಿ ಬಲಶಾಲಿಯಾಗಬೇಕು. ಭಾರತ ಜಗತ್ತಿನ ಕಲ್ಯಾಣ ಬಯಸುವ ಸಿದ್ದಾಂತ ಹೊಂದಿರುವ ರಾಷ್ಟ್ರವಾಗಿದೆ. ಭಾರತದ ಸೈದ್ದಾಂತಿಕ ವಿಚಾರಧಾರೆ ಮೂಲಕ ಜಗತ್ತಿನ ಕಲ್ಯಾಣವಾಗಬೇಕು.

ಈ ಕಲ್ಯಾಣಕ್ಕೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಆರ್ಥಿಕ ಚೈತನ್ಯ ಮೂಡಿಸಲಿದೆ. ಎಲ್ಲಾ ಕ್ಷೇತ್ರದಲ್ಲೂ ಆರ್ಥಿಕ ಹೊಸ ಹುರುಪು ನೀಡುವ ಬಜೆಟ್ ಮಂಡಿಸಿದ್ದಾರೆ. ಜನರ ಆಶೋತ್ತರಗಳನ್ನ ಈಡೇರಿಸುವ ಕಡೆ ವಿಶ್ವಾಸ ಉಳಿಸಿಕೊಂಡಿದ್ದಾರೆ ಎಂದರು.

The Union Budget emphasizes on the development of the country’s infrastructure.

Share

Leave a comment

Leave a Reply

Your email address will not be published. Required fields are marked *

Don't Miss

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ. ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ....

ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ. ಪಟ್ಟಣದ...

Related Articles

ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಷನ್ ಸ್ಥಾಪನೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಶನ್ ಸ್ಥಾಪಿಸಿದ್ದು, ಮುಂದಿನ ದಿನಗಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ...

ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ

ಚಿಕ್ಕಮಗಳೂರು: ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ ಸಾಧನೆ ಮಾಡಿರುವ ಶಾಸಕರು ಉಳಿದಿರುವ...

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ವಶ

ಚಿಕ್ಕಮಗಳೂರು : ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಕೆಎಂ ರಸ್ತೆಯ...

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ...