Home namma chikmagalur chikamagalur ಕೇಂದ್ರ ಬಜೆಟ್‌ ನಲ್ಲಿ ದೇಶದ ಮೂಲ ಸೌಕರ್ಯಾಭಿವೃದ್ಧಿಗೆ ಒತ್ತು
chikamagalurHomeLatest Newsnamma chikmagalur

ಕೇಂದ್ರ ಬಜೆಟ್‌ ನಲ್ಲಿ ದೇಶದ ಮೂಲ ಸೌಕರ್ಯಾಭಿವೃದ್ಧಿಗೆ ಒತ್ತು

Share
Share

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಆಶೋತ್ತರ ಕೇವಲ ಚುನಾವಣೆ ಗೆಲ್ಲುವುದಲ್ಲ, ದೇಶ ಗೆಲ್ಲಿಸುವುದು, ಬಡವರಿಗೆ ಬಲಕೊಡುವುದಾಗಿದೆ ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಹೇಳಿದರು.

ಕೇಂದ್ರ ಸರ್ಕಾರದ ಬಜೆಟ್‌ ಕುರಿತು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಸಚಿವೆ ನಿರ್ಮಲಾ ಸೀತಾರಾಮನ್‌ ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ ಕೇವಲ ಚುನಾವಣೆ ಗೆಲ್ಲುವುದಲ್ಲ.

ದೇಶದ ಮೂಲಸೌಕರ್ಯಾಭಿವೃದ್ಧಿಗೆ ಒತ್ತುಕೊಡುವುದಾಗಿದೆ. ಸಣ್ಣ ಉದ್ಯಮಗಳನ್ನು ಪ್ರೋತ್ಸಾಹಿಸುವ ಮೂಲಕ ಉದ್ಯೋಗ ಸೃಷ್ಟಿ ಮಾಡುವುದಾಗಿದೆ. ವಸತಿ ರಹಿತರಿಗೆ ವಸತಿ ಕಲ್ಪಿಸುವುದು. ಈ ಎಲ್ಲವನ್ನೂ ದೃಷ್ಟಿಯಲ್ಲಿ ಇಟ್ಟುಕೊಂಡು ಕೇಂದ್ರ ಸರ್ಕಾರ ಬಜೆಟ್‌ ರೂಪಿಸಿದೆ ಎಂದರು.

100 ಲಕ್ಷ ಕೋಟಿ ರು, ವೆಚ್ಚದಲ್ಲಿ ಭಾರತ ಆತ್ಮನಿರ್ಬರವಾಗಬೇಕು ಎನ್ನುವುದು ಬಜೆಟ್ ಉದ್ದೇಶವಾಗಿದೆ. ನಮ್ಮ ಬೆಳವಣಿಗೆಯ ದರ 7.8 ದಾಟಿದೆ, ಇದು ಒಂದು ರೀತಿ ದಾಖಲೆಯಾಗಿದೆ. ಭಾರತ ಆರ್ಥಿಕವಾಗಿ ಜಗತ್ತಿನ 4ನೇ ಅತಿ‌ ದೊಡ್ಡ ಶಕ್ತಿವಾಗಿದ್ದು, ಶೀಘ್ರವೇ 3ನೇ ಸ್ಥಾನಕ್ಕೆ ಏರುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಹೇಳಿದರು.

ಭಾರತಕ್ಕೆ ಸ್ವಾತಂತ್ರ್ಯ ಬಂದು 2047ಕ್ಕೆ 100 ವರ್ಷವಾಗಲಿದೆ. ಆ ವೇಳೆಗೆ ಭಾರತ ಆರ್ಥಿಕ-ಜ್ಞಾನದಲ್ಲಿ ಬಲಶಾಲಿಯಾಗಬೇಕು. ಭಾರತ ಜಗತ್ತಿನ ಕಲ್ಯಾಣ ಬಯಸುವ ಸಿದ್ದಾಂತ ಹೊಂದಿರುವ ರಾಷ್ಟ್ರವಾಗಿದೆ. ಭಾರತದ ಸೈದ್ದಾಂತಿಕ ವಿಚಾರಧಾರೆ ಮೂಲಕ ಜಗತ್ತಿನ ಕಲ್ಯಾಣವಾಗಬೇಕು.

ಈ ಕಲ್ಯಾಣಕ್ಕೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಆರ್ಥಿಕ ಚೈತನ್ಯ ಮೂಡಿಸಲಿದೆ. ಎಲ್ಲಾ ಕ್ಷೇತ್ರದಲ್ಲೂ ಆರ್ಥಿಕ ಹೊಸ ಹುರುಪು ನೀಡುವ ಬಜೆಟ್ ಮಂಡಿಸಿದ್ದಾರೆ. ಜನರ ಆಶೋತ್ತರಗಳನ್ನ ಈಡೇರಿಸುವ ಕಡೆ ವಿಶ್ವಾಸ ಉಳಿಸಿಕೊಂಡಿದ್ದಾರೆ ಎಂದರು.

The Union Budget emphasizes on the development of the country’s infrastructure.

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...