Home namma chikmagalur chikamagalur ಗಲಿ-ಬಿಲಿ “ಗಿಲ್ಲಿ”ಆಟ ಕಿಂಗ್ ಮೇಕರ್ “ಕಿಂಗ್”
chikamagalurHomeLatest Newsnamma chikmagalur

ಗಲಿ-ಬಿಲಿ “ಗಿಲ್ಲಿ”ಆಟ ಕಿಂಗ್ ಮೇಕರ್ “ಕಿಂಗ್”

Share
Share

ಚಿಕ್ಕಮಗಳೂರು: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಗೆ ಇದುವರೆಗೆ ಕಿಂಗ್ ಮೇಕರ್ ಆಗಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ”ಕಿಂಗ್ ” ನಂತೆ ಕಂಗೊಳಿಸುತ್ತಿದ್ದಾರೆ.
ಇನ್ನೂ ಉಪಾಧ್ಯಕ್ಷರಾಗಿ ದಿನೇಶ್ ಹೊಸೂರು ಆಯ್ಕೆ ಯಾಗಿದ್ದಾರೆ.

ಕಳೆದ ಒಂದು ವರ್ಷದಿಂದ ದಿನಕ್ಕೊಂದು ಸುದ್ದಿ ಕ್ಷಣಕ್ಕೊಂದು ಸುದ್ದಿಗಳ ಮಧ್ಯೆ ಸುದ್ದಿಗಳಿಗೆ ತೆರೆ ಬಿದ್ದಿದೆ. ಕಾಂಗ್ರೆಸ್ ಸರ್ಕಾರ ಇರುವುದರಿಂದ ಚುನಾವಣೆ ನಡೆಸುವುದು ಕಷ್ಟ ಎನ್ನುವಂತಹ ಘಟನೆಗಳು ನಡೆದಿವೆ.ಕಡೂರು ಶಾಸಕ ಆನಂದ್ ಮತ್ತು ತರೀಕೆರೆ ಶಾಸಕ ಶ್ರೀನಿವಾಸ್ ಸರ್ಕಾರದ ಮೇಲೆ ಒತ್ತಡ ತಂದು ಬ್ಯಾಂಕ್ ಬಗ್ಗೆ ತನಿಖೆ ನಡೆಸಬೇಕು ಎಂಬ ಹಿನ್ನೆಲೆಯಲ್ಲಿ ಚುನಾವಣೆ ಪ್ರಕ್ರಿಯೆ ಪ್ರಾರಂಭವಾದ ಮೇಲೆ ಚುನಾವಣೆ ಪ್ರಕ್ರಿಯೆಗೆ ತಾತ್ಕಾಲಿಕ ತಡೆಯಾಯಿತು.

ಇದರ ಬಗ್ಗೆ ನ್ಯಾಯಾಲಯ ಚುನಾವಣೆ ನಡೆಸಬೇಕು ಮತ್ತು ಆಡಳಿತ ಮಂಡಳಿ ಯಾತಾ ಸ್ಥಿತಿ ಮುಂದುವರೆಯಬೇಕು ಎಂದು ತೀರ್ಪು ನೀಡಿದ್ದು ಆಡಳಿತ ಮಂಡಳಿ ಅವಧಿ ಮುಗಿದರೂ ಆಡಳಿತ ನಡೆಸಿದ್ದು ದಾಖಲೆ .ಇದಕ್ಕೆ ಬೆಳ್ಳಿ ಪ್ರಕಾಶ್ ಕೊಡುಗೆ ಕಾರಣ ಎನ್ನಲಾಗಿದೆ. ಸ್ಥಗಿತಗೊಂಡಿದ್ದ ಚುನಾವಣೆಗೆ ಪ್ರಕ್ರಿಯೆ ಪ್ರಾರಂಭವಾಗಿ ಬಿಜೆಪಿ ಜೆಡಿಎಸ್ ಮೈತ್ರಿ ಕೂಟ ಕ್ಲೀನ್ ಸ್ವೀಪ್ ಮಾಡಿತು.

ಚಿಕ್ಕಮಗಳೂರು ಸಹಕಾರ ಸಂಘಗಳ ವತಿಯಿಂದ ವಿ,ಪ,ಸದಸ್ಯ ಸಿ.ಟಿ.ರವಿ ಮತ್ತು ಎಸ್.ಎಲ್.ಬೋಜೇಗೌಡರ ವಿರುದ್ಧ ಎಂ.ಎಸ್.ನಿರಂಜನ ತೊಡರುಗಾಲು ಕೊಟ್ಟರೂ ನಿರಾಯಾಸವಾಗಿ ಸಿ.ಟ.ರವಿ ಮತ್ತು ಎಸ್‌. ಎಲ್. ಬೋಜೇಗೌಡ ಆಯ್ಕೆಯಾದರೆ ಇತರೆ ಸಹಕಾರ ಸಂಘಗಳಿಂದ ಟಿ.ಎಲ್.ರಮೇಶ್ ಹ್ಯಾಟ್ರಿಕ್ ಸಾಧಿಸಿದರೆ ಇವರ ವಿರುದ್ಧ ಸ್ಪರ್ಧೆ ಮಾಡಿದ್ದ ಕಾಂಗ್ರೆಸ್ ನ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಸೋಲ ಬೇಕಾಯಿತು.

ಟಿ.ಎ.ಪಿ.ಸಿ.ಎಂ.ಎಸ್ ಕ್ಷೇತ್ರದಿಂದ ಕಡೂರು ಶಾಸಕ ಆನಂದ್ ಸ್ಪರ್ಧೆ ಮಾಡಿದ್ದರಿಂದ ತೀವ್ರ ಕುತೂಹಲ ಕೆರಳಿಸಿದ ಚುನಾವಣೆಯಲ್ಲಿ ಆನಂದ್ ಸೋತರೆ ಇವರ ಪ್ರತಿ ಸ್ಪರ್ಧೆ ದಿನೇಶ್ ಹೊಸೂರು ಒಂದು ಮತದಿಂದ ಗೆಲುವು ಸಾಧಿಸಿದರು. ಕಳೆದ ಬಾರಿ ಲಿಂಗಾಯತರು ಬ್ಯಾಂಕ್ ನ ಅಯಾ ಕಟ್ಟಿನ ಅಧ್ಯಕ್ಷ ಮತ್ತು ಅಪೆಕ್ಸ್ ಬ್ಯಾಂಕ್ ಪ್ರತಿನಿಧಿಯಾಗಿದ್ದರು .ಪ್ರಸ್ತುತ ಬ್ಯಾಂಕ್ ಒಕ್ಕಲಿಗರ ಬಿಗಿ ಹಿಡಿತಕ್ಕೆ ಸಿಕ್ಕಂತಾಯಿತು ಎಂಬ ವಿಶ್ಲೇಷಣೆಗಳು ಚರ್ಚೆ ಆಗುತ್ತಿವೆ.

ಸಿ.ಟಿ.ರವಿ ಕಿಂಗ್ ಮೇಕರ್ ಜೊತೆಗೆ “ಕಿಂಗ್” ಆದರೆ ಎಸ್.ಎಲ್.ಬೋಜೇಗೌಡರು ಎಲ್ಲಾ ನಾನೇ ಎಂಬಂತೆ ಆಗಿದ್ದಾರೆ ಬ್ಯಾಂಕ್ ಇಂದು ಬಿಜೆಪಿ ತೆಕ್ಕೆಗೆ ತರುವಲ್ಲಿ ಶ್ರಮಿಸಿದ ಬೆಳ್ಳಿ ಪ್ರಕಾಶ್ “ಹೀರೋ” ನಂತೆ ಕಂಡರೆ ಅಧ್ಯಕ್ಷರಾಗಿದ್ದ ಡಿ.ಎಸ್.ಸುರೇಶ್ ದುರಂತ ನಾಯಕರಾಗಿದ್ದಾರೆ.ಇನ್ನೂ ಉಳಿದವರು ಸೈಡ್ ಅಂಕ್ಟರ್ ತರಹ ಇದ್ದಾರೆ.ಪವರ್ ಇದ್ದರೂ ನಮ್ಮದು ಏನೂ ನಡೆಯಲಿಲ್ಲ ಮುಂದೆ ” ಮಾರಿ ಹಬ್ಬ ” ಇದೆ ಎಂದು ಕಾಂಗ್ರೆಸ್ ನವರು ಗೊಣಗುತ್ತಿದ್ದಾರೆ.

ಇಷ್ಟೆಲ್ಲಾ ಅಧಿಕಾರ ಪಡೆಯಲು ಕಸರತ್ತು ನಡೆಸಿದ್ದು ಏಕೆ ಎಂದರೆ “ಬ್ಯಾಂಕ್” ನೇಮಕಾತಿಗಾಗಿ ಎಂದು ಜನ ಮಾತನಾಡುತ್ತಿದ್ದಾರೆ.

Gali-bili “Gilli” Game King Maker “King”

Share

Leave a comment

Leave a Reply

Your email address will not be published. Required fields are marked *

Don't Miss

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ. ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ....

ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ. ಪಟ್ಟಣದ...

Related Articles

ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಷನ್ ಸ್ಥಾಪನೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಶನ್ ಸ್ಥಾಪಿಸಿದ್ದು, ಮುಂದಿನ ದಿನಗಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ...

ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ

ಚಿಕ್ಕಮಗಳೂರು: ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ ಸಾಧನೆ ಮಾಡಿರುವ ಶಾಸಕರು ಉಳಿದಿರುವ...

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ವಶ

ಚಿಕ್ಕಮಗಳೂರು : ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಕೆಎಂ ರಸ್ತೆಯ...

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ...