ಕೊಟ್ಟಿಗೆಹಾರ: ದಕ್ಷಿಣ ಕನ್ನಡ-ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಭಾರೀ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದೆ.
ಮೂಡಿಗೆರೆ ಅರಣ್ಯ ವಲಯದೊಳಗೆ ಕಾಣಿಸಿಕೊಂಡಿರುವ ಬೆಂಕಿಯಿಂದ ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಹುಲ್ಲುಗಾವಲು ಪ್ರದೇಶ ಸಂಪೂರ್ಣವಾಗಿ ಧಗಧಗಿಸಿ ಉರಿಯುತ್ತಿದೆ.
ಗಾಳಿಯ ವೇಗ ಹೆಚ್ಚಿರುವುದರಿಂದ ಬೆಂಕಿ ಕ್ಷಿಪ್ರವಾಗಿ ಹರಡುತ್ತಿದ್ದು, ಅರಣ್ಯ ಸಂಪತ್ತಿಗೆ ಗಂಭೀರ ಹಾನಿಯಾಗುವ ಆತಂಕ ವ್ಯಕ್ತವಾಗಿದೆ.
ಚಾರ್ಮಾಡಿ ಘಾಟಿಯ ರಸ್ತೆಯ ಪಕ್ಕದಲ್ಲೇ ಬೆಂಕಿ ಕಾಣಿಸಿಕೊಂಡಿರುವುದರಿಂದ ಸಂಚರಿಸುವ ವಾಹನ ಸವಾರರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು,
ಅರಣ್ಯ ಇಲಾಖೆ ಮುಂಜಾಗ್ರತ ಕ್ರಮವಾಗಿ ಬೆಂಕಿ ರೇಖೆ ಮಾಡದೆ ನಿರ್ಲಕ್ಷ ವಹಿಸಿದ್ದರಿಂದ ಈ ಅನಾಹುತಕ್ಕೆ ಕಾರಣವಾಗಿದೆ
ಮಾಹಿತಿ ಪಡೆದ ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ದೌಡಾಯಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಪರಿಸ್ಥಿತಿಯನ್ನು ನಿರಂತರವಾಗಿ ನಿಗಾ ವಹಿಸಲಾಗುತ್ತಿದ್ದು, ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲು ತೀವ್ರ ಪ್ರಯತ್ನಗಳು ಮುಂದುವರಿದಿವೆ.
Massive fire breaks out in Charmadi forest
Leave a comment