Home namma chikmagalur chikamagalur ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂವರು ಸಾವು
chikamagalurCrime NewsHomeLatest Newsnamma chikmagalur

ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂವರು ಸಾವು

Share
Share

ಚಿಕ್ಕಮಗಳೂರು :ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂವರು ಸಾವಪ್ಪಿದ್ದಾರೆ.

ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ   ಮಾವಿನಹಳ್ಳ ಗ್ರಾಮದ ಸೆರಿನಾ ಬಾರ್ನ್ ಹೋಂಸ್ಟೇನಲ್ಲಿ  ಚಂದ್ರಮ್ಮ ಕೆಲಸ ಮಾಡಿಕೊಂಡಿದ್ದರು.

ಕೆಂಪನಹಳ್ಳಿ ಯಲ್ಲಿರುವ ಮನೆಯಿಂದಲೆ  ದಿನನಿತ್ಯ ಕೆಲಸಕ್ಕೆ ಹೋಗಿ ಬರುತ್ತಿದ್ದು ದಿ:31 ರ ರಾತ್ರಿ ಹೋಂ ಸ್ಟೇನಲ್ಲಿ ಕೆಲಸ ಮಾಡುವ ಹರೀಶ ನೊಂದಿಗೆ  ಯಮಹಾ ರೇ ಝೆಡ್ ಸ್ಕೂಟಿಯಲ್ಲಿ ಹಿಂದೆ ಕುಳಿತು ಬರುತ್ತಿದ್ದರು.

ಅರಿಸಿನಗುಪ್ಪೆ  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಂಭಾಗ ಮಲ್ಲೇನಹಳ್ಳಿ ಕಡೆಯಿಂದ ಚಿಕ್ಕಮಗಳೂರು ಕಡೆಗೆ ಬರುತ್ತಿದ್ದ ಮಹೀಂದ್ರಾ ಪಿಕಪ್ ಚಾಲಕನ ಅಜಾಗರೂಕತೆಯಿಂದ ಸ್ಕೂಟಿಗೆ ಅಪ್ಪಳಿಸಿ ನಿಲ್ಲಿಸದೆ ಹೋಗಿದ್ದಾನೆ.  ರಸ್ತೆಯ ಮೇಲೆ ಬಿದ್ದ ಚಂದ್ರಮ್ಮನ ತಲೆಗೆ  ತೀವ್ರ  ಪೆಟ್ಟಾಗಿ ಸ್ಥಳದಲ್ಲಿಯೆ ಮೃತಪಟ್ಟಿದ್ದಾರೆ.

ಜಿ. ಮಾದಾಪುರ ಮಠದ ಬಳಿ ಅಂಗಡಿಗೆ ಹೋಗಲು ಟಿವಿಎಸ್ ಎಕ್ಸ್ ಎಲ್ ನಲ್ಲಿ  ಗಂಗೇಸರ ಸೇತುವೆ ಮೇಲೆ ಹೋಗುತ್ತಿರುವಾಗ ಟಿವಿಎಸ್ ಸ್ಕಿಡ್ ಆಗಿ ಬಿದ್ದು ರಾಜಯ್ಯ ಎಂಬುವರಿಗೆ ತೀವ್ರ ಗಾಯವಾಗಿತ್ತು.

ಮೊದಲು ಕಡೂರು ಆಸ್ಪತ್ರೆಗೆ ದಾಖಲಿಸಿದ್ದು ನಂತರ ಹಾಸನಕ್ಕೆ ಕರೆದೊಯ್ದು ಆಸ್ಪತ್ರೆಗೆ ಸೇರಿಸಿದ್ದು ಅಲ್ಲಿ ಗಾಯಾಳು ಮೃತಪಟ್ಟಿದ್ದಾರೆ ಎಂದು ಯಗಟಿ  ಪೊಲೀಸರು ತಿಳಿಸಿದ್ದಾರೆ.

ಅಂತರಘಟ್ಟೆ ಜಾತ್ರೆಗೆ ಆಟೋದಲ್ಲಿ ಭದ್ರಾವತಿ ವಾಸಿ ಹನುಮಂತ ರಾವ್, ಪ್ರಮಿಳಾ,ಪಲ್ಲವಿ , ಧನ್ಯ ಮತ್ತು ವರುಣ 9 ಶಿವು ರವರ ಆಟೋದಲ್ಲಿ ಹೋಗುತ್ತಿದ್ದರು.

ಬೀರೂರು ಅಜ್ಜಂಪುರ ಮಧ್ಯದ ದೊಗೇಹಳ್ಳಿ ಬಳಿಎದುರಿಗೆ ಬಂದ ನಾಯಿಯನ್ನು ತಪ್ಪಿಸಲು ಹೋಗಿ  ನಿಯಂತ್ರಣ ತಪ್ಪಿ ಆಟೋ ಪಲ್ಟಿ ಯಾಗಿ ಕಾಲುವೆಯಲ್ಲಿ ಮಗುಚಿ ಬಿದ್ದಿದೆ.

ಹನುಮಂತರಾವ್ ಗೆ ಎದೆಗೆ  ಪ್ರಮಿಳಾಬಾಯಿಗೆ ತಲೆಗೆ ಪಲ್ಲವಿಗೆ ಸೊಂಟಕ್ಕೆ , ಧನ್ಯಳಿಗೆ ಕುತ್ತಿಗೆ, ಕೈಗೆ , ವರುಣಳಿಗೆ ಹೊಟ್ಟೆಗೆ, ಹಾಗೂ ಆಟೋ ಚಾಲಕ ಶಿವುಗೆ ತೀವ್ರ ಪೆಟ್ಟಾಗಿರುತ್ತೆ,

ಕೂಡಲೇ ಎಲ್ಲರನ್ನು ಆಂಬುಲೆನ್ಸ್ ಲ್ಲಿ ತಕ್ಷಣ  ಬೀರೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು  ಶಿವು ಮೃತಪಟ್ಟಿರುವುದಾಗಿ ಬೀರೂರು ಪೊಲೀಸರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಸಿ.ಡಿ.ಎ ಮಾಜಿ ಅಧ್ಯಕ್ಷ ಆನಂದ್ ಮೇಲೆ ಹಲ್ಲೆ …?

ಚಿಕ್ಕಮಗಳೂರು: ಮಾಜಿ ಸಚಿವ ಸಿ.ಟಿ.ರವಿ ಆಪ್ತ ಸುದರ್ಶನ್ ಬಲಗೈ ಬಂಟ ಹಾಲಿ ಮೂಗ್ತಿಹಳ್ಳಿ ಸಹಕಾರ ಸಂಘದ ಅಧ್ಯಕ್ಷ ಆನಂದ್ ನ ರಸಲೀಲೆ ನಡೆಸುತ್ತಿದ್ದಾರೆ ಎಂದು ಕೆಲವರು ಹೋಮ್ ಸ್ಟೇಗೆ ನುಗ್ಗಿ ಗಲಾಟೆ...

ರೈತರಿಗೆ ತೋಟಗಾರಿಕೆ ಬೆಳೆಗಳ ಬಗ್ಗೆ ಮಾಹಿತಿ ನೀಡುವುದೇ ಚೈತ್ರೋತ್ಸವದ ಉದ್ದೇಶ

ಚಿಕ್ಕಮಗಳೂರು: ಜಿಲ್ಲೆಯರೈತರು ಮತ್ತು ಬೆಳೆಗಾರರಿಗೆ ತೋಟಗಾರಿಕೆ ಬೆಳೆಗಳ ಬಗ್ಗೆ ಉಪಯುಕ್ತ ಮಾಹಿತಿ ನೀಡುವುದೇಚೈತ್ರೋತ್ಸವದಉದ್ದೇಶಎಂದುಜಿಲ್ಲಾಧಿಕಾರಿಎಂ.ಎನ್ ನಾಗರಾಜ್ ತಿಳಿಸಿದರು. ಅವರುಇಂದು ನಗರದ ನೇತಾಜಿ ಸುಭಾಷ್‌ಚಂದ್ರಬೋಸ್‌ಜಿಲ್ಲಾಆಟದ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪಶುಪಾಲನಾ ಮತ್ತು ಪಶು...

Related Articles

ಲಾಭಾಂಶ ಆಮಿಷ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚನೆ

ಚಿಕ್ಕಮಗಳೂರು: ಟ್ರೇಡಿಂಗ್ ಹೆಸರಿನಲ್ಲಿ ಹೆಚ್ಚಿನ ಲಾಭಾಂಶ ನೀಡುವ ಆಮಿಷವೊಡ್ಡಿ ಯುವಕನೊಬ್ಬನಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ...

ಸಿಡಿಎ ಅಧ್ಯಕ್ಷರಾಗಿ ಎಚ್‌.ಪಿ. ಮಂಜೇಗೌಡ ನೇಮಕ

ಚಿಕ್ಕಮಗಳೂರು: ಚಿಕ್ಕಮಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಸಿಡಿಎ) ಚಿಕ್ಕಮಗಳೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಪಿ. ಮಂಜೇಗೌಡ ಅವರನ್ನು...

ಕಾಂಗ್ರೆಸ್ ನಲ್ಲಿ ಸಿ.ಡಿ.ಎ. ಫೈಟ್ – ಕಾಂಗ್ರೆಸ್ ನಲ್ಲಿ ಸಿ.ಡಿ.ಎ. ಫೈಟ್ – ರಾಮಚಂದ್ರ ಬಿಗಿ ಪಟ್ಟು

ಚಿಕ್ಕಮಗಳೂರು: ಹಿರೇಮಗಳೂರು ರಾಮಚಂದ್ರ ಸಿ.ಡಿ.ಎ.ಅಧ್ಯಕ್ಷ ಸ್ಥಾನ ಪಡೆಯಲು ಬಿಗಿ ಪಟ್ಟು ಹಿಡಿದು ಒತ್ತಾಯ ಮಾಡುತ್ತಿದ್ದಾರೆ. ಕಳೆದ...

ಸಾಮಾಜಿಕ ಪರಿವರ್ತನೆಗೆ ಮಾಚಿದೇವರ ಕೊಡುಗೆ ಅಪಾರ

ಚಿಕ್ಕಮಗಳೂರು: ಸಾಮಾಜಿಕ ಪರಿವರ್ತನೆ ಮತ್ತು ಸಾಹಿತ್ಯ ಪರಿವರ್ತನೆಗೆ ಮಡಿವಾಳ ಮಾಚಿದೇವರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ...