ಚಿಕ್ಕಮಗಳೂರು: ಕೊಲೆ ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಬೀರೂರು ಪೋಲೀಸರು ಕೊಲೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಫೆ.೦೪ರಂದು ೧೦.೩೦ರ ವೇಳೆಯಲ್ಲಿ ಬೀರೂರಿನಲ್ಲಿ ರಂಗನಾಥಎಂಬವನು ಪತ್ನಿ ಮಮತಾಳ ಶೀಲಾ ಶಂಕಿಸಿ ಬೇರೆಯವರೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿರುವುದಾಗಿ ಅನುಮಾನಪಟ್ಟು ಜೋರಾಗಿ ಜಗಳವಾಡಿ ಕೈಗಳಿಂದ ಹೊಡೆದು ವೇಲ್ ನಿಂದ ಹೆಂಡತಿಯ ಕುತ್ತಿಗೆಗೆ ಬಿಗಿಯಾಗಿ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಬಗ್ಗೆ ರತ್ನಮ್ಮ ಎಂಬವರು ದೂರು ನೀಡಿದ್ದರು.
ಬೀರೂರು ಪಟ್ಟಣದ ರತ್ನಮ್ಮಎಂಬವರ ಮಗಳಾದ ಮಮತ ೩೩ ವರ್ಷ, ಈಕೆಯನ್ನು ೦೯ ವರ್ಷಗಳ ಹಿಂದೆ ಬುರುಡೆಕಟ್ಟೆ ವಾಸಿ ರಂಗನಾಥ್ ಎಂಬವರ ಮದುವೆ ಮಾಡಿಕೊಟ್ಟಿದ್ದು ಮುಂಚೆ ಸಾಂಸಾರಿಕವಾಗಿ ಅನ್ಯೋನ್ಯವಾಗಿ ಅವರಿಗೆ ೮ ವರ್ಷದ ಗಂಡು ಮಗು ಮತ್ತು ೩ ವರ್ಷದ ಹೆಣ್ಣು ಮಗಳಿದ್ದಳು.
ಬೀರೂರಿನ ಮಾರ್ಗದ ಕ್ಯಾಂಪ್ ಚೌಡಮ್ಮನ ಬೀದಿಯ ಪುಟ್ಟಣ್ಣ ಎಂಬುವರ ಮನೆಯಲ್ಲಿ ಬಾಡಿಗೆಗೆ ವಾಸವಾಗಿರುತ್ತಾರೆ ಇಬ್ಬರೂ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ.
ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಹಾಗೂ ಕೊಲೆ ಆರೋಪಿತನಾದ ರಂಗನಾಥನನ್ನು ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ವಶಕ್ಕೆ ಪಡೆದು ಸೂಕ್ತ ಕಾನೂನು ಕ್ರಮ ಜರುಗಿಸಿದ್ದಾರೆ.
Police were successful in arresting the accused within hours of the murder.
Leave a comment