Home namma chikmagalur chikamagalur ಬಿ.ಜೆ.ಪಿಯಲ್ಲಿ ಭಾಜಾ ಭಜಂತ್ರಿ ನಿರಂಜನ್ ಸಸ್ಪೆಂಡ್ ! ಆನಂದ್ ಗೆ ಅತಿಥ್ಯ ?
chikamagalurHomeLatest Newsnamma chikmagalur

ಬಿ.ಜೆ.ಪಿಯಲ್ಲಿ ಭಾಜಾ ಭಜಂತ್ರಿ ನಿರಂಜನ್ ಸಸ್ಪೆಂಡ್ ! ಆನಂದ್ ಗೆ ಅತಿಥ್ಯ ?

Share
Share

ಚಿಕ್ಕಮಗಳೂರು: ಭಾರತೀಯ ಜನತಾ ಪಕ್ಷದಲ್ಲಿ ಸಸ್ಪೆಂಡ್ ಯುಗ ಪ್ರಾರಂಭವಾಗಿದೆ. ಇನ್ನೂ ಎಷ್ಟು ಜನಕ್ಕೆ ಸಸ್ಪೆಂಡ್ ಸಿಟಿ.ಹೊಡೆಯಲಿದೆ ಎಂಬ ಲೆಕ್ಕಾಚಾರ ನಡೆಯುತ್ತಿದೆ.ಯಾರನ್ನು ಸಸ್ಪೆಂಡ್ಮಾಡಬೇಕು ಯಾರಿಗೆ ಅತಿಥ್ಯ ನೀಡಬೇಕು ಎಂಬುದು ಪಕ್ಷಕ್ಕೆ ಬಿಟ್ಟ ವಿಚಾರ. ಆದರೆ ಅತಿಥ್ಯ ನೀಡುವಾಗ ಅವರ ಘನ ಕಾರ್ಯಗಳ ಅವಲೋಕನ ಮಾಡಬೇಕಲ್ಲವೇ?

ನಿರಂಜನ್ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಮತ್ತು ಹಿಂದೆ ವಿಧಾನ ಪರಿಷತ್ ಮತ್ತು ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದಾರೆ ಎಂದು ಕಾರಣ ನೀಡಲಾಗಿದೆ. ಹೌದು ಡಿ.ಸಿ.ಸಿ. ಬ್ಯಾಂಕ್ ಚುನಾವಣೆಯಲ್ಲಿ ರಾಜಕೀಯ ಸಲ್ಲದು ಎಂದು ಭಾಷಣ ಬಿಗಿಯುವವರು ಪಕ್ಷ ಹೇಳಿದ ಅಭ್ಯರ್ಥಿ ವಿರುದ್ದ ಸ್ಪರ್ಧೆ ಮಾಡಿರುವುದಕ್ಕೆ ಸಸ್ಪೆಂಡ್ ಭಾಗ್ಯ ಕೊಡಲಾಗಿದೆ.

ಆನಂದ್ ನಗರದ ಸಿ,ಡಿ,ಎ ಅಧ್ಯಕ್ಷನಾಗಿದ್ದವನು ಮಹಿಳೆ ಯೊಂದಿಗೆ ಇರುವಾಗ ಬಿಜೆಪಿಯವರು ತದಕಿ ಹಾದಿ ರಂಪ ಬೀದಿ ರಂಪವಾಗಿ ಎಲ್ಲೆಡೆಯೂ ವಿಡಿಯೋ ಹರಿದಾಡಿದರೂ ಪಕ್ಷಕ್ಕೆ ಮುಜುಗರ ತಂದಿಲ್ಲಾವೇ? ಆದರೆ ಇದುವರೆವಿಗೂ ಆತನ ಸಸ್ಪೆಂಡ್ ಆಗದಿರುವುದರ ರಹಸ್ಯ ಏನಿರಬಹುದು? ಆನಂದ್ ಹಿನ್ನೆಲೆ ಕೆದಕಿದರೆ ಬಹಳಷ್ಟು ವಿಷಯಗಳಿವೆ ಎಂದು ಬಿಜೆಪಿಯಲ್ಲಿ ಮಾತನಾಡುತ್ತಿರುವುದು ಗುಟ್ಟಾಗಿ ಉಳಿದಿಲ್ಲ.

ಸಿ.ಟಿ.ರವಿ ಬ್ಯಾಂಕ್ ನ ಅಧ್ಯಕ್ಷ ಸ್ಥಾನ ಸ್ವೀಕರಿಸಿದ ದಿನ ನಿರಂಜನ್ ಗೆ ಸಸ್ಪೆಂಡ್ ಪತ್ರ ತಲುಪಿದರೆ ಆನಂದ್ ಪತ್ರಿಕೆಗಳು ಮತ್ತು ನ್ಯೂಸ್ ಚಾನಲ್ ಗಳು ಸುದ್ದಿ ಪ್ರಸಾರ ಮಾಡಬಾರುದು ಎಂದು ಕೋರ್ಟ್ ಆದೇಶದ ಪ್ರತಿ ಕೊಡಿಸುತ್ತಾರೆ.

ಬಿಜೆಪಿಯಲ್ಲಿ ಏನು ನಡೆಯುತ್ತಿದೆ ಎಂದು ಜನ ಮೂಗಿನ ಮೇಲೆ ಬೆರಳಿಟ್ಟುಕೊಂಡು ನೋಡುತ್ತಿದ್ದಾರೆ.ಹೇಳುವುದು ವೇದ ತಿನ್ನುವುದು ಬದನೆಯಕಾಯಿ ಎಂದು ಹಿರಿಯರೊಬ್ಬರು ಹೇಳಿದ ಮಾತು ತಲೆಯಲ್ಲಿ ಹುಳ ಬಿಟ್ಟಂತೆ ಆಗಿದೆ.

Bhaja Bhajantri Niranjan suspended in BJP! Guest for Anand?

Share

Leave a comment

Leave a Reply

Your email address will not be published. Required fields are marked *

Don't Miss

ಸಾವಿನಲ್ಲೂ ಸಾರ್ಥಕತೆ ಮೆರೆದ ಆಟೋಚಾಲಕ ಮಂಜುನಾಥ್

ಕೊಪ್ಪ : ಅಪಘಾತದಲ್ಲಿ ಮೆದುಳು ನಿಷ್ಕ್ರೀಯಗೊಂಡು ಜೀವನ್ಮರಣ ಸ್ಥಿತಿಯಲ್ಲಿ ಒದ್ದಾಡುತ್ತಿದ್ದ ಅಟೋಚಾಲಕರೊಬ್ಬರು ತನ್ನ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಇವರ ಕುಟುಂಬದ ನಿರ್ಧಾರಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ....

ಫೆ.೯ ರಿಂದ ಮೂರು ದಿನ ಶರಣ ಸಾಹಿತ್ಯ ಸಮಾವೇಶ

ಚಿಕ್ಕಮಗಳೂರು: ಅಖಿಲಭಾರತ ಶರಣ ಸಾಹಿತ್ಯ ಪರಿಷತ್ತಿಗೆ ೪೦ ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನಿಂದ ಫೆ.೯, ೧೦ ಮತ್ತು ೧೧ ರಂದು ಮೂರು ದಿನ ಸಂವಾದ, ವಿಚಾರಗೋಷ್ಠಿ, ಶರಣ...

Related Articles

ಗುತ್ತಿಗೆದಾರರ ಬಾಕಿ ಹಣ ಮರುಪಾವತಿಗಾಗಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ಗುತ್ತಿಗೆದಾರರಿಗೆ ಬಾಕಿ ಉಳಿಸಿಕೊಂಡಿರುವ ೩೭ ಸಾವಿರ ಕೋಟಿರೂ. ಹಣ ಮರುಪಾವತಿಗೆ ಒತ್ತಾಯಿಸಿ ಮಾರ್ಚ್ ೦೫...

ಮಾ. 5ರಂದು ಗುತ್ತಿಗೆದಾರಿಂದ ಬೆಂಗಳೂರಿನಲ್ಲಿ ಸಾಂಕೇತಿಕ ಧರಣಿ

ಚಿಕ್ಕಮಗಳೂರು: ರಾಜ್ಯ ಸರ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುತ್ತಿಗೆದಾರರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಜೊತೆಗೆ ಬಾಕಿ ಇರುವ...

ಭೂ ಭೌತಿಕ ಸಮೀಕ್ಷೆ ಉದ್ದೇಶದಿಂದ ಲಘು ವಿಮಾನ ಹಾರಾಟ

ಚಿಕ್ಕಮಗಳೂರು: ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಮತ್ತು ಕಳಸ ತಾಲೂಕು ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳ...

ಬಾಳೆಹೊನ್ನೂರಿನ ವ್ಯಕ್ತಿಗೆ ಆನ್‌ಲೈನ್ ಫಿಶಿಂಗ್ ಫ್ರಾಡ್

ಚಿಕ್ಕಮಗಳೂರು: ಕಸ್ಟಮರ್‌ಕೇರ್‌ನಿಂದ ದೂರವಾಣಿ ಕರೆಮಾಡಿರುವ ವ್ಯಕ್ತಿ ಬಾಳೆಹೊನ್ನೂರು ವ್ಯಕ್ತಿಯೊಬ್ಬರಿಗೆ ೧,೯೭,೮೪೧ ರೂ.ಗಳನ್ನು ವಂಚಿಸಿದ್ದಾರೆ. ಬಾಳೆಹೊನ್ನೂರು ಠಾಣೆ...