Home namma chikmagalur chikamagalur ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ ಮಹಿಳೆಗೆ ವಂಚನೆ
chikamagalurHomeLatest Newsnamma chikmagalur

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ ಮಹಿಳೆಗೆ ವಂಚನೆ

Share
Share

ಚಿಕ್ಕಮಗಳೂರು : ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭ ಗಳಿಸುವ ಅಮಿಷಕ್ಕೆ ಒಳಗಾದ ಮಹಿಳೆಯೊಬ್ಬರು ಬರೋಬ್ಬರಿ ೨,೫೯,೯೫,೯೨೦ ರೂಪಾಯಿಗಳನ್ನು ಕಳೆದುಕೊಂಡು ಸೈಬರ್ ವಂಚಕರ ಬಲೆಗೆ ಬಿದ್ದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಮೊಬೈಲ್ ಗೆ ಬಂದ ವಾಟ್ಸ್ ಆಪ್ ಕರೆಯೊಂದರಲ್ಲಿ ಆನ್‌ಲೈನ್ ಟ್ರೇಡಿಂಗ್ ಬಗ್ಗೆ ಆಸಕ್ತಿ ಇದೆಯೇ ಎಂದು ವಿಚಾರಿಸಲಾಗಿತ್ತು. ಈ ವೇಳೆ ವಂಚಕರು ಕೇವಲ ಸಾವಿರ ಜನರಿಗೆ ಮಾತ್ರ ವಿಶೇಷ ಆಫರ್ ಇದೆ ಎಂದು ನಂಬಿಸಿ ಇವರಿಂದ ಒಂದು ವರ್ಚುವಲ್ ಖಾತೆಯನ್ನು ತೆರೆಯಿಸಿದ್ದರು. ಟ್ರೇಡಿಂಗ್ ಪ್ರಾರಂಭಿಸಿದ ಆರಂಭದಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಪಡೆಯಬಹುದು ಎಂದು ನಂಬಿಸಿದ ಕಿರಾತಕರು, ಹಂತಹಂತವಾಗಿ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು ೨.೫೯ ಕೋಟಿಗೂ ಅಧಿಕ ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ.

ತಾವು ಹೂಡಿಕೆ ಮಾಡಿದ ಅಸಲು ಹಣ ಮತ್ತು ಬಂದಿರುವ ಲಾಭಾಂಶವನ್ನು ಹಿಂಪಡೆಯಲು ಮುಂದಾದಾಗ, ಪ್ರತಿ ಬಾರಿಯೂ ಒಟ್ಟು ಮೊತ್ತದ ೨೦% ಹಣವನ್ನು ಡೆಪಾಸಿಟ್ ಇಡಬೇಕು ಎಂಬ ಹೊಸ ಷರತ್ತನ್ನು ವಂಚಕರು ವಿಧಿಸಿದ್ದರು. ಅದರಂತೆ ಹಣ ಪಾವತಿಸಿದರೂ ಸಹ ಒಂದು ರೂಪಾಯಿಯನ್ನೂ ಡ್ರಾ ಮಾಡಲು ಸಾಧ್ಯವಾಗದಿದ್ದಾಗ ತಾವು ಮೋಸ ಹೋಗಿರುವುದು ಪ್ರಜ್ಞಾ ಅವರಿಗೆ ಮನವರಿಕೆಯಾಗಿದೆ.

ತಾವು ಕಷ್ಟಪಟ್ಟು ಸಂಪಾದಿಸಿದ ಕೋಟ್ಯಂತರ ರೂಪಾಯಿ ಹಣವನ್ನು ವಂಚಿಸಿರುವ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಪೊಲೀಸರಿಗೆ ಮನವಿ ಮಾಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಸೈಬರ್ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

Woman cheated on the pretext of investing in the stock market

Share

Leave a comment

Leave a Reply

Your email address will not be published. Required fields are marked *

Don't Miss

ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ

ಚಿಕ್ಕಮಗಳೂರು: ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ ಸಾಧನೆ ಮಾಡಿರುವ ಶಾಸಕರು ಉಳಿದಿರುವ ಅಧಿಕಾರವಧಿಯಲ್ಲಿ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಅಭಿವೃದ್ಧಿಗೆ ಒತ್ತುನೀಡಬೇಕು ಎಂದು ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ...

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ವಶ

ಚಿಕ್ಕಮಗಳೂರು : ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಕೆಎಂ ರಸ್ತೆಯ ಪುಷ್ಪಗಿರಿ ಪೇಪರ್ ಮಾರ್ಟ್ ಬಳಿ ನಗರ ಠಾಣೆಯ ಪಿಎಸ್‌ಐ ಶಂಭುಲಿಂಗನಗೌಡ ಹಾಗೂ ಸಿಬ್ಬಂದಿ ಗಸ್ತು...

Related Articles

ಉದ್ಯೋಗ ಭರವಸೆ: ೨ ಲಕ್ಷ ರೂ ವಂಚನೆ

ಚಿಕ್ಕಮಗಳೂರು : ಉನ್ನತ ವಿದ್ಯಾಭ್ಯಾಸ ಮುಗಿಸಿ ಪ್ರತಿಷ್ಠಿತ ಕಂಪನಿಯಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಬೇಕೆಂಬ ಯುವಕನ ಆಸೆಯನ್ನೇ ಬಂಡವಾಳ...

ಎನ್.ಆರ್.ಪುರದಲ್ಲಿ ಹಾಡಹಗಲೇ ೧೬.೩೫ ಲಕ್ಷ ಆಭರಣ ಕಳವು

ಎನ್.ಆರ್.ಪುರ: ತಾಲೂಕಿನ ಚಿಬ್ಬಳ್ಳಿ ಗ್ರಾಮದ ಕೆ. ಕಣಬೂರು ವ್ಯಾಪ್ತಿಯಲ್ಲಿ ಹಾಡಹಗಲೇ ಕಳ್ಳತನವೊಂದು ನಡೆದಿದ್ದು, ಸುಮಾರು ೧೬.೩೫...

ನಿಗಮದ ಸಾಲದ ಬಡ್ಡಿ ಮನ್ನಾಗೆ ಸಿ.ಟಿ.ರವಿ ಖಂಡನೆ

ಚಿಕ್ಕಮಗಳೂರು: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸಾಲದ ಬಡ್ಡಿ ಮನ್ನಾ ಮಾಡಿರುವ ರಾಜ್ಯ ಸರ್ಕಾರದ ನೀತಿಯನ್ನ ತೀವ್ರವಾಗಿ...

ಜಿಲ್ಲಾಸ್ಪತ್ರೆಗೆ ಎಂಎಲ್ಸಿ ಸಿ.ಟಿ. ರವಿ ಭೇಟಿ

ಚಿಕ್ಕಮಗಳೂರು: ನಗರದ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿನ ಅವ್ಯವಸ್ಥೆ ಹಾಗೂ ಔಷಧಿಗಳ ತೀವ್ರ ಕೊರತೆಯ ಕುರಿತು ಕೇಳಿಬಂದ...