Home namma chikmagalur chikamagalur ಮೂರು ಲಕ್ಷ ರೂ. ಮೌಲ್ಯದ ಗಾಂಜಾ ವಶ
chikamagalurCrime NewsHomeLatest Newsnamma chikmagalur

ಮೂರು ಲಕ್ಷ ರೂ. ಮೌಲ್ಯದ ಗಾಂಜಾ ವಶ

Share
Share

ಚಿಕ್ಕಮಗಳೂರು, ಎನ್ ಡಿಪಿಎಸ್ ಪ್ರಕರಣದಲ್ಲಿ ಆರೋಪಿತನೋರ್ವನನ್ನು ಬಂಧಿಸಿರುವ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಆತನಿಂದ ಮೂರು ಲಕ್ಷ ರೂ. ಮೌಲ್ಯದ 5ಕೆಜಿ 850 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ.

ಎನ್ ಡಿಪಿಎಸ್ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಎನ್.ಆರ್.ಪುರ ತಾಲೂಕು ಕಟ್ಟಿನಮನೆ ಗ್ರಾಮದ ವಿಜಯಕುಮಾರ್ ಅಲಿಯಾಸ್ ವಿಜಯ ಶೆಟ್ಟಿ ಎಂಬಾತನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆಗೊಳಪಡಿಸಿದಾಗ ಚಿಕ್ಕಮಗಳೂರು ರೈಲ್ವೇ ನಿಲ್ದಾಣದ ಬಳಿ ಅಡಗಿಸಿಟ್ಟಿದ್ದ ಮೂರು ಲಕ್ಷ ರೂ. ಮೌಲ್ಯದ ಗಾಂಜಾವನ್ನು ಪೊಲೀಸರಿಗೆ ತೋರಿಸಿದ್ದಾನೆ.

ಕೆಲ ದಿನಗಳ ಹಿಂದೆ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿದ್ದ ಪೊಲೀಸರು ಅವರಿಂದ ಒಂದು ಕೆಜಿಗೂ ಹೆಚ್ಚು ಗಾಂಜಾ ವಶಪಡಿಸಿಕೊಂಡಿದ್ದರು. ಈ ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ ತಮಗೆ ವಿಜಯ ಶೆಟ್ಟಿ ಗಾಂಜಾ ಸರಬರಾಜು ಮಾಡುತ್ತಿರುವ ಬಗ್ಗೆ ಬಾಯಿ ಬಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ನಗರ ಠಾಣೆ ಪೊಲೀಸರು ವಿಜಯ ಶೆಟ್ಟಿ ಬಂಧನಕ್ಕೆ ಬಲೆ ಬೀಸಿದ್ದರು.

ಕೊನೆಗೂ ವಿಜಯ ಶೆಟ್ಟಿಯನ್ನು ಬಂಧಿಸಿದ ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ತಾನು ಈ ಹಿಂದೆ ಬಂಧಿತರಾದವರಿಗೆ ಗಾಂಜಾ ನೀಡಲು ಬಂದಿದ್ದು, ಅವರು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದರಿಂದ ತಾನು ರೈಲ್ವೇ ನಿಲ್ದಾಣದ ಬಳಿ ಗಾಂಜಾ ಅಡಗಿಸಿಟ್ಟಿರುವುದಾಗಿ ಮಾಹಿತಿ ನೀಡಿದ್ದ. ಈ ಹಿನ್ನೆಲೆಯಲ್ಲಿ ವಿಜಯಶೆಟ್ಟಿಯನ್ನು ರೈಲ್ವೇ ನಿಲ್ದಾಣದ ಸಮೀಪ ಕರೆದೊಯ್ದು ಅಡಗಿಸಿಟ್ಟಿದ್ದ ಮೂರು ಲಕ್ಷ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ.

ಕಾರ್ಯಾಚರಣೆಯಲ್ಲಿ ನಗರದ ಠಾಣೆ ಇನ್ಸ್ ಪೆಕ್ಟರ್ ಅಭಯ ಪ್ರಕಾಶ್ ಸೋಮನಾಳ್, ಪಿಎಸ್ ಐಗಳಾದ ಶಂಭುಲಿಂಗನಗೌಡ, ಧನರಾಜ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು

Three lakh rupees worth of ganja seized

Share

Leave a comment

Leave a Reply

Your email address will not be published. Required fields are marked *

Don't Miss

ಹೇಮಾವತಿ ನದಿಯಲ್ಲಿ ಬಳಿ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು

ಮೂಡಿಗೆರೆ: ಹೇಮಾವತಿ ನದಿಯಲ್ಲಿ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೋಣಿಗಂಡಿ ಬಳಿ ನಡೆದಿದೆ. ನದಿ ತೀರದಲ್ಲಿ ತುಂಡಾಗಿ ಬಿದ್ದಿದ್ದ ಸಜೀವ ವಿದ್ಯುತ್...

ಜಿಲ್ಲೆಯಲ್ಲಿ “ಅಡ್ಜಸ್ಟ ಮೆಂಟ್ ಜನಪ್ರತಿನಿಧಿಗಳು. ಜಿಲ್ಲೆ ದೋಚುತ್ತಿರುವ ಖದೀಮರು ?

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಹೆಸರಿನಲ್ಲಿ ನಿತ್ಯ ದರೋಡೆ ನಡಯುತ್ತಿವೆ.ಜೊತೆಗೆ ಡ್ರಗ್ಸ್ ಮಾಫಿಯಾ ಕೂಡ ಎಂಟ್ರಿ ಕೊಟ್ಟಿದೆ. ಜಿಲ್ಲೆಯ ಸಮಸ್ಯೆಗಳ ವಿಷಯಗಳ ಮೇಲೆ ನಿಗಾ ವಹಿಸದೆ ಇರುವುದರಿಂದ ರಾಜ್ಯದ ವಿವಿಧ ಭಾಗದಿಂದ ಮತ್ತು...

Related Articles

ನಗರಸಭೆಯಿಂದ ಬೆನಕ ಬಾರ್ ಆಂಡ್ ರೆಸ್ಟೋರೆಂಟ್ ಗೆ ಬೀಗ

ನಗರಸಭೆ ನಿಗದಿಪಡಿಸಿದ ಗಾಡಿಗೆ ಕಸ ನೀಡದೆ ಚರಂಡಿಗೆ ಹಾಕುತ್ತಿದ್ದ ನಗರದ ಬೆನಕ ಬಾರ್ ಆಂಡ್ ರೆಸ್ಟೋರೆಂಟ್...

ಕಬಡ್ಡಿ-ಖೋಖೋ ಗ್ರಾಮೀಣ ಸೊಗಡಿನ ಕ್ರೀಡೆಗಳು

ಚಿಕ್ಕಮಗಳೂರು: ಕಬಡ್ಡಿ, ಖೋಖೋ ಹಾಗೂ ವಾಲಿಬಾಲ್ ಗ್ರಾಮೀಣ ಸೊಗಡಿನ ಅ ಮೂಲ್ಯವಾದ ಕ್ರೀಡೆಗಳು. ಇವುಗಳನ್ನು ಮುಂದಿನ...

ಗುತ್ತಿಗೆದಾರರ ಬಾಕಿ ಹಣ ಮರುಪಾವತಿಗಾಗಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ಗುತ್ತಿಗೆದಾರರಿಗೆ ಬಾಕಿ ಉಳಿಸಿಕೊಂಡಿರುವ ೩೭ ಸಾವಿರ ಕೋಟಿರೂ. ಹಣ ಮರುಪಾವತಿಗೆ ಒತ್ತಾಯಿಸಿ ಮಾರ್ಚ್ ೦೫...

ಮಾ. 5ರಂದು ಗುತ್ತಿಗೆದಾರಿಂದ ಬೆಂಗಳೂರಿನಲ್ಲಿ ಸಾಂಕೇತಿಕ ಧರಣಿ

ಚಿಕ್ಕಮಗಳೂರು: ರಾಜ್ಯ ಸರ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುತ್ತಿಗೆದಾರರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಜೊತೆಗೆ ಬಾಕಿ ಇರುವ...