Home namma chikmagalur chikamagalur ಈಜಲು ತೆರಳಿದ್ದ ಇಬ್ಬರು ಯುವಕರು ನೀರು ಪಾಲು
chikamagalurCrime NewsHomeLatest Newsnamma chikmagalur

ಈಜಲು ತೆರಳಿದ್ದ ಇಬ್ಬರು ಯುವಕರು ನೀರು ಪಾಲು

Share
Share

ಚಿಕ್ಕಮಗಳೂರು : ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಬಾಳೆಹೊಳೆ ಸಮೀಪ ನಡೆದಿದೆ. ಅಭಿಷೇಕ್ (27) ಹಾಗೂ ಯೋಗೀಶ್ (17) ಮೃತ ದುರ್ದೈವಿಗಳು.

ಮೃತ ಯುವಕರಿಬ್ಬರು ಮೂಲತಃ ಕೊಡಗು ಜಿಲ್ಲೆಯವರು ಎಂದು ತಿಳಿದುಬಂದಿದೆ.

ಮೃತ ಅಭಿಷೇಕ್ ಅಕ್ಕ ಕಳಸದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಹೀಗಾಗಿ ಅವರ ಮನೆಗೆ ಬಂದಿದ್ದ. ಅಲ್ಲಿಂದ ಯೋಗೀಶ್ ಹಾಗೂ ಅಭಿಷೇಕ್ ಇಬ್ಬರು ಭದ್ರಾ ನದಿಯಲ್ಲಿ ಈಜಲು ಹೋದಾಗ ಭದ್ರಾ ನದಿಯ ಆಳದ ಅರಿವಿಲ್ಲದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಈಜು ತಜ್ಞರ ನೆರವಿನಿಂದ ಮೃತ ದೇಹಕ್ಕಾಗಿ ಶೋಧ ನಡೆಸುತ್ತಿದ್ದಾರೆ. ಆದರೆ ಈವರೆಗೂ ಮೃತದೇಹ ಪತ್ತೆಯಾಗಿಲ್ಲ. ಘಟನೆ ಸಂಬಂಧ ಕಳಸ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಷಯ ತಿಳಿದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸಂಜೆಯಾದ ಕಾರಣ ಮೃತದೇಹದ ಶೋಧ ಕಾರ್ಯವನ್ನ ನಿಲ್ಲಿಸಲಿರುವ ಪೊಲೀಸರು ನಾಳೆ ಮತ್ತೆ ಹುಡುಕಾಟ ಆರಂಭಿಸಲಿದ್ದಾರೆ ಎಂದು ತಿಳಿದುಬಂದಿದೆ.

Two young men who had gone swimming fell into the water.

Share

Leave a comment

Leave a Reply

Your email address will not be published. Required fields are marked *

Don't Miss

ಕಾಫಿ ತೋಟದಲ್ಲಿ ಮಹಿಳಾ ಕಾರ್ಮಿಕರ ಮೇಲೆ ಚಿರತೆ ಏಕಾಏಕಿ ದಾಳಿ

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಗೌತಹಳ್ಳಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿಗೆ ಒಳಗಾದ ಇಬ್ಬರೂ...

ನಾಲ್ವರು ಯುವಕರಿಂದ ಗಾಂಜಾ ಸೇವನೆ

ಚಿಕ್ಕಮಗಳೂರು: ಕಡೂರು ಮತ್ತು ಬೀರೂರು ಪಟ್ಟಣಗಳಲ್ಲಿ ಮಾದಕ ವಸ್ತು ಸೇವನೆ ಮಾಡುತ್ತಿದ್ದ ನಾಲ್ವರು ಯುವಕರ ಮೇಲೆ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಡೂರು ಪೊಲೀಸ್‌ ಠಾಣೆಯ ಪಿಎಸ್‌ಐ ಸಜಿತ್ ಕುಮಾರ್...

Related Articles

ಭದ್ರಾ ನದಿಯಲ್ಲಿ ನಾಪತ್ತೆಯಾಗಿದ್ದ ಯುವಕರ ಮೃತದೇಹ ಪತ್ತೆ

ಚಿಕ್ಕಮಗಳೂರು: ಶನಿವಾರ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಭದ್ರಾ ನದಿಯಲ್ಲಿ ಈಜಲು ಹೋಗಿ ಸಾವನ್ನಪ್ಪಿದ್ದ ಇಬ್ಬರು...

ಅಮ್ಮಾ ಬುದ್ದಿಮಾತು ಹೇಳಿದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

ಚಿಕ್ಕಮಗಳೂರು: ತಾಯಿ ಬೈಗಳು ಜೊತೆ ಬುದ್ದಿ ಮಾತು ಹೇಳಿದ ಕಾರಣಕ್ಕೆ ಮಗಳು ದುರಂತ ಅಂತ್ಯ ಕಂಡ...

ಅಜ್ಜಂಪುರದಲ್ಲಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ಅಜ್ಜಂಪುರ: ರೈಲ್ವೆ ಹಳಿ ಮೇಲೆ ರೈಲಿಗೆ ಸಿಲುಕಿ ಸುಮಾರು 65 ರಿಂದ 70 ವರ್ಷ ವಯಸ್ಸಿನ...

ಶಾಸಕ ತಮ್ಮಯ್ಯ ರಸ್ತೆ ಡಾಂಬರೀಕರಣ ಕಾಮಗಾರಿ ಪರಿಶೀಲನೆ

ಚಿಕ್ಕಮಗಳೂರು: ನಗರಸಭಾ ವ್ಯಾಪ್ತಿಯಲ್ಲಿ ವಿಶೇಷ ಅನುದಾನದಡಿ ಕೈಗೊಂಡಿರುವ ರಸ್ತೆ ಡಾಂಬರೀಕರಣ ಪೂರ್ಣಗೊಂಡ ಕಾಮಗಾರಿಗಳನ್ನು ಶಾಸಕ ಹೆಚ್.ಡಿ....