Home namma chikmagalur chikamagalur ಆನೆ ದಾಳಿಗೆ ಸಿಲುಕಿ ಕೂಲಿ ಕಾರ್ಮಿಕನ ಬಲಿ
chikamagalurHomeLatest Newsnamma chikmagalur

ಆನೆ ದಾಳಿಗೆ ಸಿಲುಕಿ ಕೂಲಿ ಕಾರ್ಮಿಕನ ಬಲಿ

Share
Share

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಾಡಾನೆ ಅಟ್ಟಹಾಸ ಮುಂದುವರಿದಿದ್ದು, ಆನೆ ದಾಳಿಗೆ ಸಿಲುಕಿ ಕೂಲಿ ಕಾರ್ಮಿಕನೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಸಮೀಪದ ಪುರ ಗ್ರಾಮದಲ್ಲಿ ನಡೆದಿದೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ತಿರುವಳ್ಳಿ ಮೂಲದ ಯಲ್ಲಪ್ಪ (45) ಎಂಬುವವರೇ ಮೃತಪಟ್ಟ ದುರ್ದೈವಿ.‌ ಮೃತ ಯಲ್ಲಪ್ಪ ಅವರು ಈ ಭಾಗದ ತೋಟಗಳಲ್ಲಿ ಕೂಲಿ ಕೆಲಸ ಹಾಗೂ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಘಟನೆಯ ದಿನ ಕೆಲಸ ಮುಗಿಸಿ ನಾಗೇಶ್ ಗೌಡರ ತೋಟದ ಹಾದಿಯ ಮೂಲಕ ಶ್ರೀಧರ್ ಗೌಡ ಎಂಬುವವರ ತೋಟದ ಲೈನ್ ಮನೆಗೆ ತೆರಳುತ್ತಿದ್ದರು. ಈ ವೇಳೆ ದಿಢೀರನೆ ಎದುರಾದ ಕಾಡಾನೆ ಯಲ್ಲಪ್ಪ ಅವರ ಮೇಲೆ ಭೀಕರವಾಗಿ ದಾಳಿ ನಡೆಸಿದ್ದು, ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಕಾಫಿ ತೋಟಗಳ ನಡುವೆ ಆನೆಗಳ ಹಾವಳಿ ಹೆಚ್ಚುತ್ತಿರುವುದು ಕಾರ್ಮಿಕರಲ್ಲಿ ಮತ್ತು ಸ್ಥಳೀಯರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದ್ದು, ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Laborer killed in elephant attack

Share

Leave a comment

Leave a Reply

Your email address will not be published. Required fields are marked *

Don't Miss

ಸಮಾಜ ಪರಿವರ್ತನೆಗೆ ಶರಣ ಚಳುವಳಿಯೇ ಪರಿಹಾರ

ಚಿಕ್ಕಮಗಳೂರು: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಮತ್ತು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ತನ್ನ ೪೦ ರ ಸಂಭ್ರಮದ ಅಂಗವಾಗಿ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳಿಗೆ ನಗರದ...

ಉದ್ಯೋಗ ಭರವಸೆ: ೨ ಲಕ್ಷ ರೂ ವಂಚನೆ

ಚಿಕ್ಕಮಗಳೂರು : ಉನ್ನತ ವಿದ್ಯಾಭ್ಯಾಸ ಮುಗಿಸಿ ಪ್ರತಿಷ್ಠಿತ ಕಂಪನಿಯಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಬೇಕೆಂಬ ಯುವಕನ ಆಸೆಯನ್ನೇ ಬಂಡವಾಳ ಮಾಡಿಕೊಂಡ ವಂಚಕನೊಬ್ಬ ಬರೋಬ್ಬರಿ ಎರಡೂವರೆ ಲಕ್ಷ ರೂಪಾಯಿಗಳನ್ನು ವಂಚಿಸಿರುವ ಘಟನೆ ನಡೆದಿದೆ. ಎಂ.ಎಸ್ಸಿ ಪದವೀಧರ...

Related Articles

ಶಾಲಾ ಮಕ್ಕಳ ಕರ್ನಾಟಕ ದರ್ಶನಕ್ಕೆ ಚಾಲನೆ

ಚಿಕ್ಕಮಗಳೂರು: ಪ್ರವಾಸೋದ್ಯಮ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ತಾಲ್ಲೂಕಿನ ೧೩೩ ಮಕ್ಕಳಿಗೆ ಉಚಿತವಾಗಿ...

ಬೆಂಬಲ ಬೆಲೆಯಲ್ಲಿ ೪,೮೮೬ ರೂ.ಗೆ ಪ್ರತಿ ಕ್ವಿಂಟಾಲ್ ರಾಗಿ ಖರೀದಿ

ಚಿಕ್ಕಮಗಳೂರು: ರಾಗಿಯನ್ನು ಮಾರುಕಟ್ಟೆ ಬೆಲೆಗಿಂತ ಹೆಚ್ಚು ದರ ನೀಡಿ ಬೆಂಬಲ ಬೆಲೆಗೆ ಖರೀದಿಸಿದಾಗ ರೈತರಿಗೆ ಆರ್ಥಿಕ...

ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ

ಚಿಕ್ಕಮಗಳೂರು, ಫೆ.೧೬: ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು....

ಗ್ರಾಮಠಾಣಾ ಜಾಗ ಒತ್ತುವರಿ ವಿರೋಧಿಸಿ ಪ್ರತಿಭಟನೆ

ಚಿಕ್ಕಮಗಳೂರು: ಆಲ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಾಗರಹಳ್ಳಿ ಗ್ರಾಮದ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ಬರುವ ಕಾಲುದಾರಿ...