Home namma chikmagalur chikamagalur ಕೆ.ಎಸ್.ಆರ್.ಟಿ.ಸಿಯ ದುಸ್ಥಿತಿ ಕೆಟ್ಟು-ಕೆಟ್ಟು ನಿಲ್ಲುತ್ತಿರುವ ಬಸ್ಸುಗಳು
chikamagalurHomeLatest Newsnamma chikmagalur

ಕೆ.ಎಸ್.ಆರ್.ಟಿ.ಸಿಯ ದುಸ್ಥಿತಿ ಕೆಟ್ಟು-ಕೆಟ್ಟು ನಿಲ್ಲುತ್ತಿರುವ ಬಸ್ಸುಗಳು

Share
Share

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳು ಅತ್ಯಂತ ದುಸ್ಥಿತಿಯಲ್ಲಿ ಇದೆ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ರಸ್ತೆ ಮಧ್ಯೆ, ಮಧ್ಯೆ ಕೆಟ್ಟು ನಿಂತು ಪ್ರಯಾಣಿಕರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ.

ಫೆಬ್ರವರಿ 15 ಜಿಲ್ಲೆಯಲ್ಲಿ ಐದಾರು ಬಸ್ಸುಗಳು ಕೆಟ್ಟು ನಿಂತಿವೆ ಎಂಬ ಮಾಹಿತಿ ನೋಡಿದರೆ ಸಾರಿಗೆ ಯಾವ ಸ್ಥಿತಿಯಲ್ಲಿ ಇದೆ ಎಂದು ಹೇಳಬೇಕಾಗಿದೆ. ಲಕ್ಯಾ ಕ್ರಾಸ್ ಬಳಿ ಬಸ್ಸು ಕೆಟ್ಟು ನಿಂತರೆ ಇಲ್ಲಿಂದ ಹತ್ತು ಕಿಲೋಮೀಟರ್ ದೂರದ ಹಿರೇಗೌಜ ಸಮೀಪದಲ್ಲಿ ಮತ್ತೊಂದು ಬಸ್ಸು ಕೆಟ್ಟು ನಿಂತಿದೆ ಇದೇ ರೀತಿ ಮೂಡಿಗೆರೆ ಸಮೀಪ ಇನ್ನೊಂದು ಬಸ್ಸು ಕೆಟ್ಟು ನಿಂತಿದೆ ಇದರ ಜೊತೆಗೆ ಮತ್ತೆ ಎಲ್ಲಿ,ಎಲ್ಲಿ ಬಸ್ಸುಗಳು ಕೆಟ್ಟು ನಿಂತಿರುತ್ತವೋ ಬಲ್ಲವರ್ಯಾರು ?

ಸಣ್ಣಪುಟ್ಟ ಲೋಪದೋಷಗಳು ಸಹಜ ಬಿಡಿ ಕೆಟ್ಟು ನಿಂತಾಗ ಪ್ರಯಾಣಿಕರು, ಪರದಾಡ ಬೇಕಾಗುತ್ತದೆ ಎಂಬ ಸಾಮಾನ್ಯ ಜ್ಞಾನ ಇಲ್ಲದ ಅಧಿಕಾರಿಗಳಿಗೆ ಕ್ಯಾಕರಿಸಿ ಉಗಿಯ ಬೇಕಾದವರು ಜನಪ್ರತಿನಿಧಿಗಳು ನಿತ್ಯ ಪೋಜ್ ಕೊಡುತ್ತಾ ತಿರುಗಾಡುತ್ತಿದ್ದಾರೆ ಎಂದು ಸಾರ್ವಜನಿಕರು ಉಗಿಯುತ್ತಿದ್ದಾರೆ.

ಬಸ್ಸುಗಳಲ್ಲಿ ನಿತ್ಯ ಸಂಚಾರ ಮಾಡುವುದು ಸಾಮಾನ್ಯ ಜನರು ಅದರಲ್ಲೂ ಹಿರಿಯ ನಾಗರೀಕರು, ಮಹಿಳೆಯರು, ವಿದ್ಯಾರ್ಥಿಗಳು, ಸರ್ಕಾರಿ ನೌಕರರು ಸಮಯಕ್ಕೆ ಸರಿಯಾಗಿ ತಲುಪದಿದ್ದರೆ ಅನುಭವಿಸುವ ಯಾತನೆಗೆ ಹೊಣೆ ಯಾರು ? ಜೊತೆಗೆ ಬಸ್ಸುಗಳಲ್ಲಿ ಸಂಚಾರ ಮಾಡುವಾಗ ಕೆಟ್ಟು ನಿಂತ ತಕ್ಷಣ ಪ್ರಯಾಣಿಕರ ಸಿಟ್ಟು ಸಹಜವಾಗಿ ಡ್ರೈವ್ ರಗಳು ಮತ್ತು ಕಂಡಕ್ಟರ್ ಮೇಲೆ ತಾನೇ ಪಾಪದ ಸಿಬ್ಬಂದಿ ಕ್ಯಾಕರಿಸಿ ಉಳಿಸಿಕೊಳ್ಳತ್ತಾರೆ.ಇದರಿಂದ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ ಪ್ರಸಂಗಗಳು ನಡೆದಿವೆ.

ಚಿಕ್ಕಮಗಳೂರು ಡಿಪೋದ ಎರಡು ಬಸ್ಸುಗಳು ಅಪಘಾತದಲ್ಲಿ ಪರಿಹಾರ ನೀಡದಿರುವುದರಿಂದ ನ್ಯಾಯಾಲಯದ ಆದೇಶ ಮೇರೆಗೆ ಜಪ್ತಿ ಮಾಡಲಾಗಿದೆ. ಇದು ದಿನನಿತ್ಯದ ಗೋಳು ಬಸ್ಸುಗಳು ಇಷ್ಟೊಂದು ಹೀನ ಸ್ಥಿತಿಯಲ್ಲಿರುವಾಗ ನಿರ್ವಹಣೆ ಮಾಡುವ ಅಧಿಕಾರಿಗಳು ಗೆಣಸು ತಿನ್ನುತ್ತಾ ಶಕ್ತಿ ಯೋಜನೆ ಎಂದು ಜಪಮಾಡುತ್ತಿದ್ದಾರ ಇನ್ನೂ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಬಸ್ಸುಗಳು ಕೆಟ್ಟು ನಿಲ್ಲುವುದು ಸರ್ಕಾರದ ಮತ್ತೊಂದು “ಗ್ಯಾರಂಟಿ” ಯೋಜನೆ ಎನ್ನುತ್ತಲೇ ಜಾಹೀರಾತು ನೀಡುತ್ತಿರುವಂತೆ ಕಾಣುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

KSRTC’s poor condition, buses parked in poor condition

Share

Leave a comment

Leave a Reply

Your email address will not be published. Required fields are marked *

Don't Miss

ದಬ್ಬಾಳಿಕೆಯಿಂದ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಯತ್ನ

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಬ್ಬಾಳಿಕೆಯ ಮೂಲಕ ಜಾರಿಗೆ ತರಲು ಮುಂದಾಗಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ವಕ್ತಾರ ಸುಧಾಕರ ಶೆಟ್ಟಿ ಆರೋಪಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಮೆಡಿಕಲ್ ಕಾಲೇಜು ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿ

ಚಿಕ್ಕಮಗಳೂರು:  ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಿರುವ ಮೂಲ ಉದ್ದೇಶ ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ. ಬಡ ರೋಗಿಗಳಿಗೆ ಜಿಲ್ಲೆಯಲ್ಲೇ ಉತ್ತಮ ಚಿಕಿತ್ಸೆ ದೊರೆಯುವಂತೆ, ಆಸ್ಪತ್ರೆಯನ್ನು ತಕ್ಷಣ ಪೂರ್ಣ ಪ್ರಮಾಣದಲ್ಲಿ...

Related Articles

ಬಯಲ ಬಂಗಾರದ”ಈರುಳ್ಳಿ” ಬಲು ದೂರ,ದೂರ

ಅಜ್ಜಂಪುರ: ಚಿಕ್ಕಮಗಳೂರು ಜಿಲ್ಲೆಯಲ್ಲಿ “ಬಯಲ ಬಂಗಾರದ ಬೆಳೆ ಬೆಳೆಯುವ ಕಪ್ಪು ಮಣ್ಣು ಅಜ್ಜಂಪುರ ಮತ್ತು ಕಡೂರು...

ರೈತನ ಮನೆ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಮನೆ ಜಖಂ

ಚಿಕ್ಕಮಗಳೂರು:  ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಗಾಳಿಯ ವೇಗ ಹೆಚ್ಚಿರುವುದರಿಂದ ಮರಗಳು ಧರೆಗುರುಳುತ್ತಿವೆ. ಮೂಡಿಗೇರೆಯ ಕೋಳೂರು...

ಆಸ್ತಿ- ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂಪತ್ತು

ಚಿಕ್ಕಮಗಳೂರು:  ಆಸ್ತಿ ಮತ್ತು ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂ ಪತ್ತು. ಈ ಆರೋಗ್ಯಯುತ ಬದುಕು...

ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದಲೇ 12 ಸಾವಿರ ಕೋಟಿ ರೂ. ವೆಚ್ಚ

ಚಿಕ್ಕಮಗಳೂರು:  ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ...