Home namma chikmagalur chikamagalur ಕೆ.ಎಸ್.ಆರ್.ಟಿ.ಸಿಯ ದುಸ್ಥಿತಿ ಕೆಟ್ಟು-ಕೆಟ್ಟು ನಿಲ್ಲುತ್ತಿರುವ ಬಸ್ಸುಗಳು
chikamagalurHomeLatest Newsnamma chikmagalur

ಕೆ.ಎಸ್.ಆರ್.ಟಿ.ಸಿಯ ದುಸ್ಥಿತಿ ಕೆಟ್ಟು-ಕೆಟ್ಟು ನಿಲ್ಲುತ್ತಿರುವ ಬಸ್ಸುಗಳು

Share
Share

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳು ಅತ್ಯಂತ ದುಸ್ಥಿತಿಯಲ್ಲಿ ಇದೆ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ರಸ್ತೆ ಮಧ್ಯೆ, ಮಧ್ಯೆ ಕೆಟ್ಟು ನಿಂತು ಪ್ರಯಾಣಿಕರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ.

ಫೆಬ್ರವರಿ 15 ಜಿಲ್ಲೆಯಲ್ಲಿ ಐದಾರು ಬಸ್ಸುಗಳು ಕೆಟ್ಟು ನಿಂತಿವೆ ಎಂಬ ಮಾಹಿತಿ ನೋಡಿದರೆ ಸಾರಿಗೆ ಯಾವ ಸ್ಥಿತಿಯಲ್ಲಿ ಇದೆ ಎಂದು ಹೇಳಬೇಕಾಗಿದೆ. ಲಕ್ಯಾ ಕ್ರಾಸ್ ಬಳಿ ಬಸ್ಸು ಕೆಟ್ಟು ನಿಂತರೆ ಇಲ್ಲಿಂದ ಹತ್ತು ಕಿಲೋಮೀಟರ್ ದೂರದ ಹಿರೇಗೌಜ ಸಮೀಪದಲ್ಲಿ ಮತ್ತೊಂದು ಬಸ್ಸು ಕೆಟ್ಟು ನಿಂತಿದೆ ಇದೇ ರೀತಿ ಮೂಡಿಗೆರೆ ಸಮೀಪ ಇನ್ನೊಂದು ಬಸ್ಸು ಕೆಟ್ಟು ನಿಂತಿದೆ ಇದರ ಜೊತೆಗೆ ಮತ್ತೆ ಎಲ್ಲಿ,ಎಲ್ಲಿ ಬಸ್ಸುಗಳು ಕೆಟ್ಟು ನಿಂತಿರುತ್ತವೋ ಬಲ್ಲವರ್ಯಾರು ?

ಸಣ್ಣಪುಟ್ಟ ಲೋಪದೋಷಗಳು ಸಹಜ ಬಿಡಿ ಕೆಟ್ಟು ನಿಂತಾಗ ಪ್ರಯಾಣಿಕರು, ಪರದಾಡ ಬೇಕಾಗುತ್ತದೆ ಎಂಬ ಸಾಮಾನ್ಯ ಜ್ಞಾನ ಇಲ್ಲದ ಅಧಿಕಾರಿಗಳಿಗೆ ಕ್ಯಾಕರಿಸಿ ಉಗಿಯ ಬೇಕಾದವರು ಜನಪ್ರತಿನಿಧಿಗಳು ನಿತ್ಯ ಪೋಜ್ ಕೊಡುತ್ತಾ ತಿರುಗಾಡುತ್ತಿದ್ದಾರೆ ಎಂದು ಸಾರ್ವಜನಿಕರು ಉಗಿಯುತ್ತಿದ್ದಾರೆ.

ಬಸ್ಸುಗಳಲ್ಲಿ ನಿತ್ಯ ಸಂಚಾರ ಮಾಡುವುದು ಸಾಮಾನ್ಯ ಜನರು ಅದರಲ್ಲೂ ಹಿರಿಯ ನಾಗರೀಕರು, ಮಹಿಳೆಯರು, ವಿದ್ಯಾರ್ಥಿಗಳು, ಸರ್ಕಾರಿ ನೌಕರರು ಸಮಯಕ್ಕೆ ಸರಿಯಾಗಿ ತಲುಪದಿದ್ದರೆ ಅನುಭವಿಸುವ ಯಾತನೆಗೆ ಹೊಣೆ ಯಾರು ? ಜೊತೆಗೆ ಬಸ್ಸುಗಳಲ್ಲಿ ಸಂಚಾರ ಮಾಡುವಾಗ ಕೆಟ್ಟು ನಿಂತ ತಕ್ಷಣ ಪ್ರಯಾಣಿಕರ ಸಿಟ್ಟು ಸಹಜವಾಗಿ ಡ್ರೈವ್ ರಗಳು ಮತ್ತು ಕಂಡಕ್ಟರ್ ಮೇಲೆ ತಾನೇ ಪಾಪದ ಸಿಬ್ಬಂದಿ ಕ್ಯಾಕರಿಸಿ ಉಳಿಸಿಕೊಳ್ಳತ್ತಾರೆ.ಇದರಿಂದ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ ಪ್ರಸಂಗಗಳು ನಡೆದಿವೆ.

ಚಿಕ್ಕಮಗಳೂರು ಡಿಪೋದ ಎರಡು ಬಸ್ಸುಗಳು ಅಪಘಾತದಲ್ಲಿ ಪರಿಹಾರ ನೀಡದಿರುವುದರಿಂದ ನ್ಯಾಯಾಲಯದ ಆದೇಶ ಮೇರೆಗೆ ಜಪ್ತಿ ಮಾಡಲಾಗಿದೆ. ಇದು ದಿನನಿತ್ಯದ ಗೋಳು ಬಸ್ಸುಗಳು ಇಷ್ಟೊಂದು ಹೀನ ಸ್ಥಿತಿಯಲ್ಲಿರುವಾಗ ನಿರ್ವಹಣೆ ಮಾಡುವ ಅಧಿಕಾರಿಗಳು ಗೆಣಸು ತಿನ್ನುತ್ತಾ ಶಕ್ತಿ ಯೋಜನೆ ಎಂದು ಜಪಮಾಡುತ್ತಿದ್ದಾರ ಇನ್ನೂ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಬಸ್ಸುಗಳು ಕೆಟ್ಟು ನಿಲ್ಲುವುದು ಸರ್ಕಾರದ ಮತ್ತೊಂದು “ಗ್ಯಾರಂಟಿ” ಯೋಜನೆ ಎನ್ನುತ್ತಲೇ ಜಾಹೀರಾತು ನೀಡುತ್ತಿರುವಂತೆ ಕಾಣುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

KSRTC’s poor condition, buses parked in poor condition

Share

Leave a comment

Leave a Reply

Your email address will not be published. Required fields are marked *

Don't Miss

ಸಮಾಜ ಪರಿವರ್ತನೆಗೆ ಶರಣ ಚಳುವಳಿಯೇ ಪರಿಹಾರ

ಚಿಕ್ಕಮಗಳೂರು: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಮತ್ತು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ತನ್ನ ೪೦ ರ ಸಂಭ್ರಮದ ಅಂಗವಾಗಿ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳಿಗೆ ನಗರದ...

ಉದ್ಯೋಗ ಭರವಸೆ: ೨ ಲಕ್ಷ ರೂ ವಂಚನೆ

ಚಿಕ್ಕಮಗಳೂರು : ಉನ್ನತ ವಿದ್ಯಾಭ್ಯಾಸ ಮುಗಿಸಿ ಪ್ರತಿಷ್ಠಿತ ಕಂಪನಿಯಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಬೇಕೆಂಬ ಯುವಕನ ಆಸೆಯನ್ನೇ ಬಂಡವಾಳ ಮಾಡಿಕೊಂಡ ವಂಚಕನೊಬ್ಬ ಬರೋಬ್ಬರಿ ಎರಡೂವರೆ ಲಕ್ಷ ರೂಪಾಯಿಗಳನ್ನು ವಂಚಿಸಿರುವ ಘಟನೆ ನಡೆದಿದೆ. ಎಂ.ಎಸ್ಸಿ ಪದವೀಧರ...

Related Articles

ಶಾಲಾ ಮಕ್ಕಳ ಕರ್ನಾಟಕ ದರ್ಶನಕ್ಕೆ ಚಾಲನೆ

ಚಿಕ್ಕಮಗಳೂರು: ಪ್ರವಾಸೋದ್ಯಮ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ತಾಲ್ಲೂಕಿನ ೧೩೩ ಮಕ್ಕಳಿಗೆ ಉಚಿತವಾಗಿ...

ಬೆಂಬಲ ಬೆಲೆಯಲ್ಲಿ ೪,೮೮೬ ರೂ.ಗೆ ಪ್ರತಿ ಕ್ವಿಂಟಾಲ್ ರಾಗಿ ಖರೀದಿ

ಚಿಕ್ಕಮಗಳೂರು: ರಾಗಿಯನ್ನು ಮಾರುಕಟ್ಟೆ ಬೆಲೆಗಿಂತ ಹೆಚ್ಚು ದರ ನೀಡಿ ಬೆಂಬಲ ಬೆಲೆಗೆ ಖರೀದಿಸಿದಾಗ ರೈತರಿಗೆ ಆರ್ಥಿಕ...

ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ

ಚಿಕ್ಕಮಗಳೂರು, ಫೆ.೧೬: ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು....

ಗ್ರಾಮಠಾಣಾ ಜಾಗ ಒತ್ತುವರಿ ವಿರೋಧಿಸಿ ಪ್ರತಿಭಟನೆ

ಚಿಕ್ಕಮಗಳೂರು: ಆಲ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಾಗರಹಳ್ಳಿ ಗ್ರಾಮದ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ಬರುವ ಕಾಲುದಾರಿ...