Home namma chikmagalur chikamagalur ಗ್ರಾಮಠಾಣಾ ಜಾಗ ಒತ್ತುವರಿ ವಿರೋಧಿಸಿ ಪ್ರತಿಭಟನೆ
chikamagalurHomeLatest Newsnamma chikmagalur

ಗ್ರಾಮಠಾಣಾ ಜಾಗ ಒತ್ತುವರಿ ವಿರೋಧಿಸಿ ಪ್ರತಿಭಟನೆ

Share
Share

ಚಿಕ್ಕಮಗಳೂರು: ಆಲ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಾಗರಹಳ್ಳಿ ಗ್ರಾಮದ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ಬರುವ ಕಾಲುದಾರಿ ಜಾಗವನ್ನು ಸಿ.ವಿ ವಿಜೇಂದ್ರ ಅವರು ಒತ್ತವರಿ ಮಾಡಿಕೊಂಡಿದ್ದು, ಕೂಡಲೇ ಒತ್ತುವರಿ ತೆರವು ಮಾಡುವಂತೆ ಒತ್ತಾಯಿಸಿ ರೈತ ಸಂಘದ ಮುಖಂಡರು ಸೋಮವಾರ ಜಿಪಂ ಎದುರು ಪ್ರತಿಭಟನೆ ನಡೆಸಿ ಜಿಪಂ ಉಪಕಾರ್ಯದರ್ಶಿ ಗೌರವ್ ಕುಮಾರ್ ಶೆಟ್ಟಿ ಅವರಿಗೆ ಮನವಿ ಸಲ್ಲಿಸಿದರು.

ಸಿ.ಎಂ ಪ್ರೇಮ ಮತ್ತು ವಿಜೇಂದ್ರ ಎಂ.ಕೆ ಅವರ ಮನೆಯ ಮುಂಭಾಗದಲ್ಲಿ ಇದ್ದ ಕಾಲುದಾರಿ ಸೇರಿದಂತೆ ಏಳು ಕುಂಟೆ ಜಾಗವನ್ನು ಒತ್ತುವರಿ ಮಾಡಿಕೊಂಡು ಕಾಂಪೌಡ್ ನಿರ್ಮಿಸಿರುವುದರಿಂದ ಅಲ್ಲಿಯೇ ೯ ಮನೆಗಳಲ್ಲಿ ವಾಸವಾಗಿರುವ ಜನರಿಗೆ ಓಡಾಡಲು ರಸ್ತೆ ಇಲ್ಲದಂತಾಗಿದೆ ಎಂದು ಆರೋಪಿಸಿದರು.

ಈ ಬಗ್ಗೆ ಸಂಬAದಪಟ್ಟ ಅಧಿಕಾರಿಗಳಿಗೆ ದೂರು ನೀಡಲಾಗಿದ್ದು, ಅರ್ಜಿ ವಿಚಾರಣೆಯಲ್ಲೂ ಗ್ರಾಮ ಪಂಚಾಯಿತಿ ಜಾಗವೆಂದು ತಿಳಿದುಬಂದಿದೆ. ಆಲ್ದೂರು ಗ್ರಾಮ ಪಂಚಾಯಿತಿಗೆ ಮೇಲಧಿಕಾರಿಗಳು ಒತ್ತವರಿಯನ್ನು ತೆರುವುಗೊಳಿಸುವಂತೆ ನೋಟಿಸ್ ನೀಡಿದ್ದರೂ ಸಹ ಅಧಿಕಾರಿಗಳ ಆದೇಶವನ್ನು ಧಿಕ್ಕರಿಸಲಾಗಿದೆ ಎಂದು ಆರೋಪಿಸಿದರು.

ಮನೆಯಲ್ಲಿ ತುರ್ತು ಸಂದರ್ಭ ಸೇರಿದಂತೆ ಯಾವುದೇ ಸಮಾರಂಭ ಹಾಗೂ ಚಿಕಿತ್ಸೆಗಾಗಲಿ ಓಡಾಡಲು ತೊಂದರೆಯಾಗುತ್ತದೆ ಎಂದು ಕೇಳಿಕೊಂಡರೂ ಅಧಿಕಾರಿಗಳು ಹೇಮಂತ್ ಅವರಿಗೆ ನ್ಯಾಯ ದೊರಕಿಸಿ ಕೊಡಲು ಪ್ರಯತ್ನಿಸದೇ ಇರುವುದು ಸಂದೇಹವನ್ನುAಟು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಡಿ.ಮಹೇಶ್, ಜಿಲ್ಲಾ ಉಪಾಧ್ಯಕ್ಷ ಕುಮಾರ ಸ್ವಾಮಿ. ಗೌರವಾಧ್ಯಕ್ಷ ಎಂ.ಸಿ ಬಸವರಾಜ್, ಜಿಲ್ಲಾ ವಕ್ತಾರ ಶಿವಣ್ಣ, ಯುವ ಘಟಕ ಜಿಲ್ಲಾಧ್ಯಕ್ಷ ಯುವರಾಜ್, ಸಂಘಟನಾ ಕಾರ್ಯದರ್ಶಿ ಜೀವನ್, ಪ್ರಮುಖರಾದ ಹೇಮಂತ್ ಮತ್ತಿತರರಿದ್ದರು.

Protest against encroachment of village police station land

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...