Home namma chikmagalur chikamagalur ಗ್ರಾಮಠಾಣಾ ಜಾಗ ಒತ್ತುವರಿ ವಿರೋಧಿಸಿ ಪ್ರತಿಭಟನೆ
chikamagalurHomeLatest Newsnamma chikmagalur

ಗ್ರಾಮಠಾಣಾ ಜಾಗ ಒತ್ತುವರಿ ವಿರೋಧಿಸಿ ಪ್ರತಿಭಟನೆ

Share
Share

ಚಿಕ್ಕಮಗಳೂರು: ಆಲ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಾಗರಹಳ್ಳಿ ಗ್ರಾಮದ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ಬರುವ ಕಾಲುದಾರಿ ಜಾಗವನ್ನು ಸಿ.ವಿ ವಿಜೇಂದ್ರ ಅವರು ಒತ್ತವರಿ ಮಾಡಿಕೊಂಡಿದ್ದು, ಕೂಡಲೇ ಒತ್ತುವರಿ ತೆರವು ಮಾಡುವಂತೆ ಒತ್ತಾಯಿಸಿ ರೈತ ಸಂಘದ ಮುಖಂಡರು ಸೋಮವಾರ ಜಿಪಂ ಎದುರು ಪ್ರತಿಭಟನೆ ನಡೆಸಿ ಜಿಪಂ ಉಪಕಾರ್ಯದರ್ಶಿ ಗೌರವ್ ಕುಮಾರ್ ಶೆಟ್ಟಿ ಅವರಿಗೆ ಮನವಿ ಸಲ್ಲಿಸಿದರು.

ಸಿ.ಎಂ ಪ್ರೇಮ ಮತ್ತು ವಿಜೇಂದ್ರ ಎಂ.ಕೆ ಅವರ ಮನೆಯ ಮುಂಭಾಗದಲ್ಲಿ ಇದ್ದ ಕಾಲುದಾರಿ ಸೇರಿದಂತೆ ಏಳು ಕುಂಟೆ ಜಾಗವನ್ನು ಒತ್ತುವರಿ ಮಾಡಿಕೊಂಡು ಕಾಂಪೌಡ್ ನಿರ್ಮಿಸಿರುವುದರಿಂದ ಅಲ್ಲಿಯೇ ೯ ಮನೆಗಳಲ್ಲಿ ವಾಸವಾಗಿರುವ ಜನರಿಗೆ ಓಡಾಡಲು ರಸ್ತೆ ಇಲ್ಲದಂತಾಗಿದೆ ಎಂದು ಆರೋಪಿಸಿದರು.

ಈ ಬಗ್ಗೆ ಸಂಬAದಪಟ್ಟ ಅಧಿಕಾರಿಗಳಿಗೆ ದೂರು ನೀಡಲಾಗಿದ್ದು, ಅರ್ಜಿ ವಿಚಾರಣೆಯಲ್ಲೂ ಗ್ರಾಮ ಪಂಚಾಯಿತಿ ಜಾಗವೆಂದು ತಿಳಿದುಬಂದಿದೆ. ಆಲ್ದೂರು ಗ್ರಾಮ ಪಂಚಾಯಿತಿಗೆ ಮೇಲಧಿಕಾರಿಗಳು ಒತ್ತವರಿಯನ್ನು ತೆರುವುಗೊಳಿಸುವಂತೆ ನೋಟಿಸ್ ನೀಡಿದ್ದರೂ ಸಹ ಅಧಿಕಾರಿಗಳ ಆದೇಶವನ್ನು ಧಿಕ್ಕರಿಸಲಾಗಿದೆ ಎಂದು ಆರೋಪಿಸಿದರು.

ಮನೆಯಲ್ಲಿ ತುರ್ತು ಸಂದರ್ಭ ಸೇರಿದಂತೆ ಯಾವುದೇ ಸಮಾರಂಭ ಹಾಗೂ ಚಿಕಿತ್ಸೆಗಾಗಲಿ ಓಡಾಡಲು ತೊಂದರೆಯಾಗುತ್ತದೆ ಎಂದು ಕೇಳಿಕೊಂಡರೂ ಅಧಿಕಾರಿಗಳು ಹೇಮಂತ್ ಅವರಿಗೆ ನ್ಯಾಯ ದೊರಕಿಸಿ ಕೊಡಲು ಪ್ರಯತ್ನಿಸದೇ ಇರುವುದು ಸಂದೇಹವನ್ನುAಟು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಡಿ.ಮಹೇಶ್, ಜಿಲ್ಲಾ ಉಪಾಧ್ಯಕ್ಷ ಕುಮಾರ ಸ್ವಾಮಿ. ಗೌರವಾಧ್ಯಕ್ಷ ಎಂ.ಸಿ ಬಸವರಾಜ್, ಜಿಲ್ಲಾ ವಕ್ತಾರ ಶಿವಣ್ಣ, ಯುವ ಘಟಕ ಜಿಲ್ಲಾಧ್ಯಕ್ಷ ಯುವರಾಜ್, ಸಂಘಟನಾ ಕಾರ್ಯದರ್ಶಿ ಜೀವನ್, ಪ್ರಮುಖರಾದ ಹೇಮಂತ್ ಮತ್ತಿತರರಿದ್ದರು.

Protest against encroachment of village police station land

Share

Leave a comment

Leave a Reply

Your email address will not be published. Required fields are marked *

Don't Miss

ದಬ್ಬಾಳಿಕೆಯಿಂದ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಯತ್ನ

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಬ್ಬಾಳಿಕೆಯ ಮೂಲಕ ಜಾರಿಗೆ ತರಲು ಮುಂದಾಗಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ವಕ್ತಾರ ಸುಧಾಕರ ಶೆಟ್ಟಿ ಆರೋಪಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಮೆಡಿಕಲ್ ಕಾಲೇಜು ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿ

ಚಿಕ್ಕಮಗಳೂರು:  ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಿರುವ ಮೂಲ ಉದ್ದೇಶ ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ. ಬಡ ರೋಗಿಗಳಿಗೆ ಜಿಲ್ಲೆಯಲ್ಲೇ ಉತ್ತಮ ಚಿಕಿತ್ಸೆ ದೊರೆಯುವಂತೆ, ಆಸ್ಪತ್ರೆಯನ್ನು ತಕ್ಷಣ ಪೂರ್ಣ ಪ್ರಮಾಣದಲ್ಲಿ...

Related Articles

ಬಯಲ ಬಂಗಾರದ”ಈರುಳ್ಳಿ” ಬಲು ದೂರ,ದೂರ

ಅಜ್ಜಂಪುರ: ಚಿಕ್ಕಮಗಳೂರು ಜಿಲ್ಲೆಯಲ್ಲಿ “ಬಯಲ ಬಂಗಾರದ ಬೆಳೆ ಬೆಳೆಯುವ ಕಪ್ಪು ಮಣ್ಣು ಅಜ್ಜಂಪುರ ಮತ್ತು ಕಡೂರು...

ರೈತನ ಮನೆ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಮನೆ ಜಖಂ

ಚಿಕ್ಕಮಗಳೂರು:  ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಗಾಳಿಯ ವೇಗ ಹೆಚ್ಚಿರುವುದರಿಂದ ಮರಗಳು ಧರೆಗುರುಳುತ್ತಿವೆ. ಮೂಡಿಗೇರೆಯ ಕೋಳೂರು...

ಆಸ್ತಿ- ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂಪತ್ತು

ಚಿಕ್ಕಮಗಳೂರು:  ಆಸ್ತಿ ಮತ್ತು ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂ ಪತ್ತು. ಈ ಆರೋಗ್ಯಯುತ ಬದುಕು...

ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದಲೇ 12 ಸಾವಿರ ಕೋಟಿ ರೂ. ವೆಚ್ಚ

ಚಿಕ್ಕಮಗಳೂರು:  ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ...