Home namma chikmagalur chikamagalur ವಿಮಾ ಪರಿಹಾರ ಬಡ್ಡಿ ಸಹಿತ ನೀಡಲು ಆದೇಶ
chikamagalurHomeLatest Newsnamma chikmagalur

ವಿಮಾ ಪರಿಹಾರ ಬಡ್ಡಿ ಸಹಿತ ನೀಡಲು ಆದೇಶ

Share
Share

ಚಿಕ್ಕಮಗಳೂರು: ಶಿಕ್ಷಕರ ಸಹಕಾರ ಬ್ಯಾಂಕ್‌ನಿಂದ ಸಾಲ ಪಡೆದ ಸರ್ಕಾರಿ ಶಿಕ್ಷಕರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಸಾಲ ಮರುಪಾವತಿಗೆ ವಿಮಾ ಹಣವನ್ನು ಭರಿಸದ ವಿಮಾ ಕಂಪನಿಯ ವಿರುದ್ಧ ತೀರ್ಪು ನೀಡಿರುವ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಬಡ್ಡಿ ಸಹಿತ ಹಣ ಪಾವತಿಸುವಂತೆ ಆದೇಶ ನೀಡಿದೆ.

ಕಡೂರು ಪಟ್ಟಣದ ಕೆ.ಎಂ.ದಿನೇಶ್ ಎಂಬುವವರು ನಗರದ ಮಧುವನ ಲೇಔಟ್‌ನಲ್ಲಿರುವ ಮೆ| ಶಿಕ್ಷಕರ ಸಹಕಾರ ಬ್ಯಾಂಕ್‌ನಿಂದ ಪಡೆದ ಸಾಲಕ್ಕೆ ಸಂಬಂಧಿಸಿದಂತೆ ಮೆ| ಎಕ್ಸೈಡ್ ಜೀವ ವಿಮಾ ಕಂಪನಿಯ ಚಿಕ್ಕಮಗಳೂರು ಶಾಖೆಯಿಂದ ವಿಮೆಯನ್ನು ಪಡೆದುಕೊಂಡಿದ್ದರು. ದುರದೃಷ್ಟವಶಾತ್ ೨೦೨೩ರ ಅಕ್ಟೋಬರ್ ೨೬ ರಂದು ದಿನೇಶ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದರು.

ಈ ಹಿನ್ನೆಲೆಯಲ್ಲಿ ಸಾಲ ಮರುಪಾವತಿಸಲು ವಿಮಾ ಕಂಪನಿಯಿಂದ ವಿಮಾ ಪರಿಹಾರದ ಮೊತ್ತವನ್ನು ನೀಡುವಂತೆ ಕೋರಿದ್ದರೂ ವಿಮಾ ಕಂಪನಿ ಹಣ ಪಾವತಿಸದೆ ಸೇವಾ ನ್ಯೂನತೆ ಎಸಗಿತ್ತೆನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ೨೦೨೫ರ ಜುಲೈ ೮ ರಂದು ಮೆ| ಎಕ್ಸೈಡ್ ಜೀವ ವಿಮಾ ಕಂಪನಿಯ ಬೆಂಗಳೂರು ಕಚೇರಿಯ ವ್ಯವಸ್ಥಾಪಕರು ಹಾಗೂ ಚಿಕ್ಕಮಗಳೂರು ಶಾಖಾ ವ್ಯವಸ್ಥಾಪಕರು, ಮೆ|ಶಿಕ್ಷಕರ ಸಹಕಾರ ಬ್ಯಾಂಕ್‌ನ ಉಡುಪಿ ಪ್ರಧಾನ ಕಚೇರಿ ಮತ್ತು ಚಿಕ್ಕಮಗಳೂರು ಶಾಖೆಯ ವ್ಯವಸ್ಥಾಪಕರುಗಳ ವಿರುದ್ಧ ಆಯೋಗಕ್ಕೆ ದೂರು ಸಲ್ಲಿಸಲಾಗಿತ್ತು.

ಈ ಬಗ್ಗೆ ವಿಚಾರಣೆ ನಡೆಸಿದ ಆಯೋಗವು ಜನವರಿ ೨೩ ರಂದು ತೀರ್ಪು ನೀಡಿದ್ದು, ಮೆ| ಎಕ್ಸೈಡ್ ಜೀವ ವಿಮಾ ಕಂಪನಿಯ ಬೆಂಗಳೂರು ಕಚೇರಿ ಹಾಗೂ ಚಿಕ್ಕಮಗಳೂರು ಶಾಖಾ ಕಚೇರಿಯ ವಿರುದ್ಧದ ದೂರನ್ನು ಖರ್ಚಿನೊಂದಿಗೆ ಭಾಗಶಃ ಪುರಸ್ಕರಿಸಿ ಮೆ|ಶಿಕ್ಷಕರ ಸಹಕಾರಿ ಬ್ಯಾಂಕ್‌ನ ಉಡುಪಿ ಪ್ರಧಾನ ಕಚೇರಿ ಮತ್ತು ಚಿಕ್ಕಮಗಳೂರು ಶಾಖೆ ವಿರುದ್ಧದ ದೂರನ್ನು ವಜಾಗೊಳಿಸಿದೆ.

ವಿಮಾ ಕಂಪನಿಯು ವಿಮಾ ಪರಿಹಾರ ಮೊತ್ತ ೧೧.೫೦ ಲಕ್ಷ ರೂ.ಗಳನ್ನು ೨೦೨೪ರ ಫೆಬ್ರವರಿ ೮ ರಿಂದ ಇದುವರೆಗೆ ವಾರ್ಷಿಕ ಶೇ.೯ರ ಬಡ್ಡಿ ಸಹಿತ ಪಾವತಿಸುವಂತೆ ಆದೇಶಿಸಲಾಗಿದೆ. ಅಲ್ಲದೆ, ಪರಿಹಾರವಾಗಿ ೪೦ ಸಾವಿರ ರೂ. ಹಾಗೂ ವ್ಯಾಜ್ಯದ ಖರ್ಚು-ವೆಚ್ಚವೆಂದು ೧೦ ಸಾವಿರ ರೂ.ಗಳನ್ನು ಜಯಂತಿ ಅವರಿಗೆ ನೀಡುವಂತೆ ಆದೇಶ ನೀಡಲಾಗಿದೆ. ತಪ್ಪಿದಲ್ಲಿ ಆದೇಶದ ಮೊತ್ತಕ್ಕೆ ಶೇ.೬ ಭವಿಷ್ಯ ಬಡ್ಡಿಯನ್ನು ಪಾವತಿಸುವಂತೆ ಆದೇಶಿಸಿದೆ.

ಆಯೋಗದ ಅಧ್ಯಕ್ಷರಾದ ಎನ್.ಆರ್.ಚೆನ್ನಕೇಶವ, ಸದಸ್ಯರಾದ ಈ.ಪ್ರೇಮಾ ಮತ್ತು ಡಾ.ಮಂಜುನಾಥ ಎಂ,ಬಮ್ಮನಕಟ್ಟಿ ಅವರು ಈ ತೀರ್ಪನ್ನು ಪ್ರಕಟಿಸಿದ್ದು, ಗ್ರಾಹಕರ ಹಿತರಕ್ಷಣೆ ಮಾಡಲಾಗಿದೆ.
ಪ್ರಕರಣದಲ್ಲಿ ಅರ್ಜಿದಾರರ ಪರವಾಗಿ ವಕೀಲರಾದ ಎಂ.ಕೆ.ರಮೇಶ್ ಅವರು ವಾದ ಮಂಡಿಸಿದ್ದರು.

Order to pay insurance compensation with interest

Share

Leave a comment

Leave a Reply

Your email address will not be published. Required fields are marked *

Don't Miss

ಪ್ರತ್ಯೇಕ ಪ್ರಕರಣಗಳಲ್ಲಿ 5.20 ಲಕ್ಷ ರೂ. ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಬಾಗಿಲು ಮುರಿದು ಒಳಗೆ ನುಗ್ಗಿರುವ ಕಳ್ಳರು ಆಭರಣ ಸೇರಿದಂತೆ ೫.೨೦ ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಅಪಹರಿಸಿದ್ದಾರೆ. ಕಡೂರು ಠಾಣಾ ವ್ಯಾಪ್ತಿಯ ವೆಂಕಟೇಶ್ವರ ನಗರದ...

ಮಕ್ಕಳ ರಕ್ಷಣೆಗಾಗಿ ಮಕ್ಕಳ ರಕ್ಷಣಾ ಸಿಬ್ಬಂದಿಗಳ ಮನವಿ

ಚಿಕ್ಕಮಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲೆಯ ಮಕ್ಕಳ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಕ್ಕಳ ರಕ್ಷಣಾ ಸಿಬ್ಬಂದಿಗಳು ಇಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಮಕ್ಕಳ ರಕ್ಷಣಾ ಕಾರ್ಯಕ್ರಮಗಳು ಖಾಯಂ...

Related Articles

ಕಲ್ಲು ತೂರಾಟ ಪ್ರಕರಣದ ಎಸ್.ಐ.ಟಿ ತನಿಖೆಗೆ ಆಗ್ರಹ

ಚಿಕ್ಕಮಗಳೂರು: ಕಾಫಿನಾಡಿನ ವಿಜಯಪುರ ಬಡಾವಣೆಯ ಹಿಂದೂ ಮನೆಯೊಂದರ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ...

ನರಹಂತಕ ಆನೆ ಸೆರೆಗೆ ಸಾಕಾನೆಗಳ ತಂಡ ಆಗಮನ

ಚಿಕ್ಕಮಗಳೂರು: ಕಾಫಿ ನಾಡಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಕಾರ್ಮಿಕ ಬಲಿ; ಸೆರೆಗೆ ಸಾಕಾನೆಗಳ ತಂಡ ಆಗಮನ...

ನೈತಿಕ ಪೊಲೀಸ್ ಗಿರಿ ಪ್ರಕರಣ – ಗಂಭೀರವಾಗಿ ಪರಿಗಣನೆ

ಚಿಕ್ಕಮಗಳೂರು: ಕಾಫಿನಾಡಿನ ಸಂತೇ ಮೈದಾನದ ಬಳಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣವನ್ನು ಜಿಲ್ಲಾ ಪೊಲೀಸ್...

ಕಲ್ಲು ಎಸೆತ ಪ್ರಕರಣ: ಇಬ್ಬರು ಹಿಂದೂ ಯುವಕರ ಬಂಧನ

ಚಿಕ್ಕಮಗಳೂರು: ಕಾಫಿನಾಡಿನ ವಿಜಯಪುರ ಬಡಾವಣೆಯಲ್ಲಿ ನಡೆದಿದ್ದ ಹಿಂದೂ ಮನೆಯೊಂದರ ಮೇಲೆ ನಡೆದಿದ್ದ ಕಲ್ಲು ಎಸೆತ ಪ್ರಕರಣಕ್ಕೆ...