Home namma chikmagalur chikamagalur ನಿವೃತ್ತ ಮಹಿಳಾ ನೌಕರಿಗೆ 1,50,000 ರೂ ವಂಚನೆ
chikamagalurCrime NewsHomeLatest Newsnamma chikmagalur

ನಿವೃತ್ತ ಮಹಿಳಾ ನೌಕರಿಗೆ 1,50,000 ರೂ ವಂಚನೆ

Share
Share

ಚಿಕ್ಕಮಗಳೂರು: ಬ್ಯಾಂಕ್ ಆಫ್ ಬರೋಡಾದ ನಿವೃತ್ತ ಮಹಿಳಾ ನೌಕರರೊಬ್ಬರಿಗೆ ಫೇಸ್ ಬುಕ್ ನಲ್ಲಿ BOB PENSION CARD ಎಂಬ ಜಾಹೀರಾತು ಬಂದಿದ್ದು ಅದನ್ನು ಕ್ಲಿಕ್ಕಿಸಿದ್ದಾರೆ.

ಅದರಲ್ಲಿ ಕೇಳಿರುವಂತೆ ಪೋನ್ ನಂಬರ್ ಮತ್ತು ಕೆಲಸವನ್ನು ನಮೂದಿಸಿದ್ದಾರೆ .ನಂತರ ಅನುಮಾನ ಬಂದು ಸದರಿ ಅಪ್ಲೀಕೇಷನ್ ನಿಂದ ವಾಪಸ್ ಬಂದಿರುತ್ತಾರೆ.

ಮಧ್ಯಾಹ್ನದ ವೇಳೆಗೆ ಮೋಬೈಲ್ ನಂಬರ್ ಗೆ ಪೋನ್ ಬಂದಿದ್ದು ತನ್ನ ಹೆಸರು ಶ್ಯಾಮ್ ಎಂದೂ ಬ್ಯಾಂಕ್ ಆಫ್ ಬರೋಡಾದ ಪೆನ್ ಷನ್ ಕಾರ್ಡ್ ವಿಭಾಗದಿಂದ ಮಾತನಾಡುತ್ತಿದ್ದೇನೆ ಎಂದು ನಂಬಿಸಿದ್ದಾರೆ.

ಪೆನ್ ಷನ್ ಕಾರ್ಡ್ ಮಾಡಿಕೊಡುತ್ತೇನೆ ಎಂದು ಹೇಳಿ ವಾಟ್ಸ್ ಆಫ್ ಅನ್ನು ಸ್ಕ್ರೀನ್ ಶೇರಿಂಗ್ ಮಾಡಿಸಿಕೊಂಡಿದ್ದಾನೆ. ಬ್ಯಾಂಕ್ ಆಫ್ ಬರೋಡಾದಲ್ಲಿ ಎಫ್ ಡಿ ಖಾತೆಯಲ್ಲಿ 5,00,000/- ರೂಗಳನ್ನು ಒಂದು ವಾರದ ಹಿಂದೆ ಡೆಪಾಸಿಟ್ ಮಾಡಿದ್ದು , ಈ ಎಫ್ ಡಿ ಖಾತೆಯಿಂದ ತನ್ನ ಬಾಬ್ತು ಬ್ಯಾಂಕ್ ಆಫ್ ಬರೋಡಾದ ಎಸ್ ಬಿ ಖಾತೆಗೆ 4,75,000/- ರೂ ಓವರ್ ಡ್ರಾಪ್ಟ್ ಆನ್ ಎಫ್ ಡಿ ಆಗಿರುವ ಬಗ್ಗೆ ಪೋನ್ ಗೆ ಮೆಸೇಜ್ ಬಂದಿದೆ.

ನಂತರ ಖಾತೆಯಿಂದ 1,50,000/- ರೂ ಡ್ರಾ ಆಗಿದ್ದು, ತಕ್ಷಣ ನನಗೆ ಇದು ಪ್ರಾಡ್ ಪೋನ್ ಕಾಲ್ ತಿಳಿದು ಪೋನ್ ಸಂಪರ್ಕ ಕಡಿತಗೊಳಿಸಿ ಬ್ಯಾಂಕ್ ಗೆ ಪೋನ್ ಮಾಡಿ ತನ್ನ ಅಕೌಂಟ್ ಅನ್ನು ಬ್ಲಾಕ್ ಮಾಡಿಸಿದ್ದಾರೆ.

ಪೆನ್ ಷನ್ ಕಾರ್ಡ್ ಮಾಡಿಸಿಕೊಡುವುದಾಗಿ ನಂಬಿಸಿ ವಾಟ್ಸ್ ಆಫ್ ಸ್ಕ್ರೀನ್ ಶೇರಿಂಗ್ ಮಾಡಿಸಿಕೊಂಡು ತನ್ನ ಎಫ್ ಡಿ ಖಾತೆಯಿಂದ 4,75,000/- ರೂ ಲೋನ್ ಮಾಡಿ ಅದರಲ್ಲಿ 1,50,000/- ರೂಗಳನ್ನು ಡ್ರಾ ಮಾಡಿಕೊಂಡು ಮೋಸ ಮಾಡಿ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Retired female employee cheated of Rs 150000

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...