Home namma chikmagalur chikamagalur ಬೀರೂರಿನಲ್ಲಿ ಅನುಮಾನದ ಭೂತಕ್ಕೆ ಪತ್ನಿ ಕೊಲೆ
chikamagalurHomeLatest Newsnamma chikmagalur

ಬೀರೂರಿನಲ್ಲಿ ಅನುಮಾನದ ಭೂತಕ್ಕೆ ಪತ್ನಿ ಕೊಲೆ

Share
Share

ಚಿಕ್ಕಮಗಳೂರು: ಪ್ರೀತಿಸಿ ಮದುವೆಯಾಗಿ 12 ವರ್ಷಗಳ ಸುಖ ಸಂಸಾರ ನಡೆಸಿದ್ದ ದಂಪತಿಗಳ ನಡುವೆ ಅನುಮಾನದ ಕಿಚ್ಚು ಹತ್ತಿ, ದಾಂಪತ್ಯ ಜೀವನವೇ ನಾಶವಾಗಿದೆ. ಈ ಅನುಮಾನದ ಭೂತದಿಂದ ಪತ್ನಿಯ ಕೊಲೆ ಮಾಡಿರುವ ಘಟನೆ ಬೀರೂರು ಪಟ್ಟಣದ ಚೌಡೇಶ್ವರಿಯಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಮಮತಾ (32) ಎಂದು ಗುರುತಿಸಲಾಗಿದೆ.

ಇದೀಗ ಕೊಲೆ ಮಾಡಿದ ಪತಿ ರಂಗನಾಥ್ ಪೊಲೀಸರ ವಶದಲ್ಲಿದ್ದಾನೆ. ಅಜ್ಜಂಪುರ ತಾಲೂಕಿನ ಬುರುಡೆಕಟ್ಟೆ ಗ್ರಾಮದ ರಂಗನಾಥ್ ಮತ್ತು ಮಮತಾ ಪರಸ್ಪರ ಪ್ರೀತಿಸಿ 12 ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. 7 ವರ್ಷಗಳ ಹಿಂದೆ ಇವರು ಬೀರೂರಿಗೆ ಬಂದು ನೆಲೆಸಿದ್ದರು.

ಗಾರೆ ಕೆಲಸ ಮಾಡುತ್ತಿದ್ದ ರಂಗನಾಥ್ ಸುಖ ಸಂಸಾರವನ್ನು ಮಾಡುತ್ತಿದ್ದ, ಗಂಡನಿಗೆ ಸಹಾಯವಾಗಲಿ ಎಂದು ಮಮತಾ ಕೂಡ ಅಡಿಕೆ ಸುಲಿಯುವ ಮತ್ತು ಮದುವೆ ಮಂಟಪಗಳಲ್ಲಿ ಕೆಲಸ ಮಾಡುತ್ತಿದ್ದಳು. ಕೆಲಸದ ನಿಮಿತ್ತ ಹೊರಹೋಗುತ್ತಿದ್ದ ಮಮತಾಗೆ ಮೊಬೈಲ್ ಚಟ ಹೆಚ್ಚಾಗಿತ್ತು.

ಇದರಿಂದ ಹಲವಾರು ಪುರುಷರ ಜೊತೆ ಅವರು ಸಂಪರ್ಕದಲ್ಲಿದ್ದಾಳೆ ಎಂಬ ಸಂಶಯ ರಂಗನಾಥ್ ಮನಸ್ಸಿನಲ್ಲಿ ಇತ್ತು. ಫೆಬ್ರವರಿ 4ರ ಸಂಜೆ ಮಗನ ಹುಟ್ಟುಹಬ್ಬದ ಆಚರಣೆಗೆ ಮನೆಯಲ್ಲಿ ಸಿದ್ಧತೆ ನಡೆದಿತ್ತು. ಇದೇ ವೇಳೆ ಮಮತಾ ಮೊಬೈಲ್‌ನಲ್ಲೇ ಬ್ಯುಸಿಯಾಗಿರುವುದನ್ನು ನೋಡಿ ರಂಗನಾಥ್ ಅವರ ಕೋಪ ನೆತ್ತಿಗೇರಿತ್ತು. ಆಕ್ರೋಶಗೊಂಡ ರಂಗನಾಥ್, ಮಕ್ಕಳ ಮುಂದೆಯೇ ಗಲಾಟೆ ಆರಂಭಿಸಿದ್ದಾರೆ.

ಜಗಳ ವಿಕೋಪಕ್ಕೆ ಹೋಗಿ, ಮಮತಾಳನ್ನು ನೆಲಕ್ಕೆ ಕೆಡವಿ ಕತ್ತು ಹಿಸುಕಿ, ವೇಲ್‌ನಿಂದ ಬಿಗಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಹತ್ಯೆಯ ನಂತರ ರಾತ್ರಿಯಿಡೀ ಹೆಂಡತಿಯ ಶವ ಮತ್ತು ಮಕ್ಕಳ ಜೊತೆಯೇ ಕಳೆದ ಹಂತಕ ರಂಗನಾಥ್, ಫೆಬ್ರವರಿ 5ರ ಗುರುವಾರ ಬೆಳಿಗ್ಗೆ ಬೀರೂರು ಪೊಲೀಸ್ ಠಾಣೆಗೆ ಹೋಗಿ, ಸರ್, ನನ್ನ ಹೆಂಡತಿ ರಾತ್ರಿ ಚೆನ್ನಾಗಿದ್ದಳು, ಬೆಳಿಗ್ಗೆ ಎದ್ದೇಳುತ್ತಿಲ್ಲ ಎಂದು ಕಥೆ ಕಟ್ಟಿದ್ದಾನೆ.
ಆದರೆ ಮನೆಗೆ ಬಂದು ಪರಿಶೀಲಿಸಿದ ಪೊಲೀಸರಿಗೆ ಕುತ್ತಿಗೆಯ ಮೇಲಿದ್ದ ಗುರುತುಗಳನ್ನು ನೋಡಿ ಇದು ಕೊಲೆ ಎಂದು ಖಚಿತವಾಗಿದೆ. ವಿಚಾರಣೆ ನಡೆಸಿದಾಗ ರಂಗನಾಥ್ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ. ಹೆಂಡತಿ ಬರ್ಬರವಾಗಿ ಹತ್ಯೆಯಾಗಿದ್ದು, ಗಂಡ ಜೈಲು ಪಾಲಾಗಿದ್ದಾನೆ. ತಂದೆ-ತಾಯಿಯ ನಡುವಿನ ಜಗಳ ಮತ್ತು ಅನುಮಾನಕ್ಕೆ ಇಬ್ಬರು ಮುಗ್ಧ ಮಕ್ಕಳು ಅನಾರ್ಥರಾಗಿದ್ದಾರೆ.
Wife murdered over suspicion in Birur
Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...