Home namma chikmagalur chikamagalur ದಲಿತ ಅಪ್ರಾಪ್ತ ಯುವಕನ ಮೇಲೆ ಯುವಕರ ತಂಡದಿಂದ ಹಲ್ಲೆ
chikamagalurHomeLatest Newsnamma chikmagalur

ದಲಿತ ಅಪ್ರಾಪ್ತ ಯುವಕನ ಮೇಲೆ ಯುವಕರ ತಂಡದಿಂದ ಹಲ್ಲೆ

Share
Share

ಚಿಕ್ಕಮಗಳೂರು: ನಗರದ ಸಂತೇ ಮೈದಾನದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದ್ದು, ದಲಿತ ಅಪ್ರಾಪ್ತ ಯುವಕನ ಮೇಲೆ ಮುಸ್ಲಿಂ ಯುವಕರ ತಂಡವೊಂದು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ.

ಮುಸ್ಲಿಂ ಸಮುದಾಯದ ಅಪ್ರಾಪ್ತ ಯುವತಿಯ ಜೊತೆ ದಲಿತ ಯುವಕ ಇದ್ದ ಎಂಬ ಕಾರಣಕ್ಕೆ ಈ ಸಂಘರ್ಷ ನಡೆದಿದ್ದು, ಮುಸ್ಲಿಂ ಯುವಕರು ಪ್ರಶ್ನಿಸುತ್ತಿದ್ದಂತೆ ಯುವತಿ ಸ್ಥಳದಿಂದ ನಿರ್ಗಮಿಸಿದ್ದಾರೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಯುವಕ ಮತ್ತು ಯುವತಿ ಇಬ್ಬರೂ ಸ್ನೇಹಿತರಾಗಿದ್ದು, ಎರಡೂ ಕುಟುಂಬಗಳಿಗೂ ಪರಸ್ಪರ ಪರಿಚಯವಿತ್ತು ಎಂದು ತಿಳಿದುಬಂದಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ನಗರ ಪೊಲೀಸ್‌ ಠಾಣೆಯಲ್ಲಿ ಹಲ್ಲೆ ನಡೆಸಿದ ಎಂಟು ಜನರ ವಿರುದ್ಧ ಅಟ್ರಾಸಿಟಿ ಸೇರಿದಂತೆ ವಿವಿಧ ಕಲಂ ಅಡಿ ಪ್ರಕರಣ ದಾಖಲಾಗಿದ್ದು, ಈಗಾಗಲೇ ನಯಾಜ್, ತಬ್ರಿಜ್ ಹಾಗೂ ಹನೀಫ್ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ತಲೆಮರೆಸಿಕೊಂಡಿರುವ ಉಳಿದ ನಾಲ್ಕು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾ‌ರ್ ನಗರ ಪೊಲೀಸ್‌ ಠಾಣೆಯಲ್ಲೇ ಮೊಕ್ಕಾಂ ಹೂಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

Dalit minor attacked by a group of youths

Share

Leave a comment

Leave a Reply

Your email address will not be published. Required fields are marked *

Don't Miss

ಪ್ರತ್ಯೇಕ ಪ್ರಕರಣಗಳಲ್ಲಿ 5.20 ಲಕ್ಷ ರೂ. ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಬಾಗಿಲು ಮುರಿದು ಒಳಗೆ ನುಗ್ಗಿರುವ ಕಳ್ಳರು ಆಭರಣ ಸೇರಿದಂತೆ ೫.೨೦ ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಅಪಹರಿಸಿದ್ದಾರೆ. ಕಡೂರು ಠಾಣಾ ವ್ಯಾಪ್ತಿಯ ವೆಂಕಟೇಶ್ವರ ನಗರದ...

ಮಕ್ಕಳ ರಕ್ಷಣೆಗಾಗಿ ಮಕ್ಕಳ ರಕ್ಷಣಾ ಸಿಬ್ಬಂದಿಗಳ ಮನವಿ

ಚಿಕ್ಕಮಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲೆಯ ಮಕ್ಕಳ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಕ್ಕಳ ರಕ್ಷಣಾ ಸಿಬ್ಬಂದಿಗಳು ಇಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಮಕ್ಕಳ ರಕ್ಷಣಾ ಕಾರ್ಯಕ್ರಮಗಳು ಖಾಯಂ...

Related Articles

ಕಲ್ಲು ತೂರಾಟ ಪ್ರಕರಣದ ಎಸ್.ಐ.ಟಿ ತನಿಖೆಗೆ ಆಗ್ರಹ

ಚಿಕ್ಕಮಗಳೂರು: ಕಾಫಿನಾಡಿನ ವಿಜಯಪುರ ಬಡಾವಣೆಯ ಹಿಂದೂ ಮನೆಯೊಂದರ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ...

ನರಹಂತಕ ಆನೆ ಸೆರೆಗೆ ಸಾಕಾನೆಗಳ ತಂಡ ಆಗಮನ

ಚಿಕ್ಕಮಗಳೂರು: ಕಾಫಿ ನಾಡಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಕಾರ್ಮಿಕ ಬಲಿ; ಸೆರೆಗೆ ಸಾಕಾನೆಗಳ ತಂಡ ಆಗಮನ...

ನೈತಿಕ ಪೊಲೀಸ್ ಗಿರಿ ಪ್ರಕರಣ – ಗಂಭೀರವಾಗಿ ಪರಿಗಣನೆ

ಚಿಕ್ಕಮಗಳೂರು: ಕಾಫಿನಾಡಿನ ಸಂತೇ ಮೈದಾನದ ಬಳಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣವನ್ನು ಜಿಲ್ಲಾ ಪೊಲೀಸ್...

ಕಲ್ಲು ಎಸೆತ ಪ್ರಕರಣ: ಇಬ್ಬರು ಹಿಂದೂ ಯುವಕರ ಬಂಧನ

ಚಿಕ್ಕಮಗಳೂರು: ಕಾಫಿನಾಡಿನ ವಿಜಯಪುರ ಬಡಾವಣೆಯಲ್ಲಿ ನಡೆದಿದ್ದ ಹಿಂದೂ ಮನೆಯೊಂದರ ಮೇಲೆ ನಡೆದಿದ್ದ ಕಲ್ಲು ಎಸೆತ ಪ್ರಕರಣಕ್ಕೆ...