ಚಿಕ್ಕಮಗಳೂರು: ಕಾಫಿನಾಡಿನ ವಿಜಯಪುರ ಬಡಾವಣೆಯಲ್ಲಿ ನಡೆದಿದ್ದ ಹಿಂದೂ ಮನೆಯೊಂದರ ಮೇಲೆ ನಡೆದಿದ್ದ ಕಲ್ಲು ಎಸೆತ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಪೊಲೀಸರು ಇಬ್ಬರು ಹಿಂದೂ ಯುವಕರನ್ನು ಬಂಧಿಸಿದ್ದಾರೆ.
ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಗೌರಿ ಕಾಲುವೆಯ ಭರತ್ (23) ಹಾಗೂ ರಾಮನಹಳ್ಳಿಯ ದಿಲೀಪ್ (27) ಎಂಬುವವರನ್ನು ಬಂಧಿಸಿದ್ದಾರೆ.
ಈ ಇಬ್ಬರು ಯುವಕರು ಘಟನೆ ನಡೆಯುವುದಕ್ಕಿಂತ ಮೂರು ದಿನಗಳ ಹಿಂದಿನಿಂದಲೇ ಕಲ್ಲುತೂರಾಟ ನಡೆದಿರುವ ಮನೆಯ ಸುತ್ತ ಬೈಕಿನಲ್ಲಿ ಓಡಾಡುತ್ತಾ ಅವರನ್ನು ಹಿಂಬಾಲಿಸುತ್ತಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಮೂರ್ನಾಲ್ಕು ದಿನಗಳ ಹಿಂದೆ ಸರ್ಕಾರಿ ಕ್ವಾರ್ಟಸ್್ರ ನಲ್ಲಿ ವಾಸವಿರುವ ಸುಧಾ ತಮ್ಮ ಮನೆಯ ಅವರಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಈ ಯುವಕರನ್ನು ಪ್ರಶ್ನಿಸಿದ್ದಕ್ಕೆ ಕಿರಿಕ್ ನಡೆದಿತ್ತು ಎನ್ನಲಾಗಿದೆ.
ನಮ್ಮ ಮನೆಯ ಅಸುಪಾಸು ಯಾಕೆ ಓಡಾಡುತ್ತೀರಿ ಎಂದು ಪ್ರಶ್ನಿಸಿದ್ದಕ್ಕೆ ಯುವಕರು ಅವರೊಂದಿಗೆ ವಾಗ್ವಾದ ನಡೆಸಿದ್ದರು ಎನ್ನಲಾಗಿದೆ. ಈ ಘಟನೆಯ ಬೆನ್ನಲ್ಲೇ ಮನೆಗಳ ಮೇಲೆ ಕಲ್ಲು ಎಸೆತ ನಡೆದಿದ್ದು ಸದ್ಯ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ಚುರುಕುಗೊಳಿಸಿದ್ದಾರೆ.
Stone pelting case: Two Hindu youths arrested
Leave a comment