Home namma chikmagalur chikamagalur ಇನ್ಫೋಸಿಸ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಆನ್‌ಲೈನ್ ಉದ್ಯೋಗ ವಂಚನೆ
chikamagalurCrime NewsHomeLatest Newsnamma chikmagalur

ಇನ್ಫೋಸಿಸ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಆನ್‌ಲೈನ್ ಉದ್ಯೋಗ ವಂಚನೆ

Share
Share

ಚಿಕ್ಕಮಗಳೂರು : ಇಂಜಿನಿಯರಿಂಗ್ ಪದವೀಧರೆ ಆನ್‌ಲೈನ್ ಉದ್ಯೋಗ ವಂಚನೆಗೆ ಬಲಿಯಾಗಿದ್ದು, ಈ ಸಂಬಂಧ ಚಿಕ್ಕಮಗಳೂರು ನಗರದ ಸೆನ್ (CEN) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

2025ರಲ್ಲಿ ಬಿ.ಇ ಕಂಪ್ಯೂಟರ್ ಸೈನ್ಸ್ ಶಿಕ್ಷಣ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದ ಯುವತಿ, ಲಿಂಕ್ಸ್‌ಇನ್ (Linkedin) ಸಾಮಾಜಿಕ ಜಾಲತಾಣದ ಮೂಲಕ ವಂಚಕರ ಜಾಲಕ್ಕೆ ಸಿಲುಕಿದ್ದಾರೆ.

ಮನು ಕುಮಾ‌ರ್ ಎಂಬ ವ್ಯಕ್ತಿಯು ತಾನು ಇನ್ಫೋಸಿಸ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, ಶೀಲ್ ರತನ್ ಪಾಂಡುರಂಗ ಎಂಬುವವರ ಮೂಲಕ ಪ್ರಕ್ರಿಯೆ ನಡೆಸುವುದಾಗಿ ತಿಳಿಸಿದ್ದನು. ಕಂಪನಿಯ ಡೆವಲಪ್‌ಮೆಂಟ್ ಫಂಡ್ ಹಾಗೂ ಫೀಸ್ ಹೆಸರಿನಲ್ಲಿ ಒಟ್ಟು 3,10,000 ರೂಪಾಯಿಗಳನ್ನು ನೀಡುವಂತೆ ಯುವತಿಯನ್ನು ನಂಬಿಸಲಾಗಿತ್ತು.

ಇದನ್ನು ನೈಜವೆಂದು ನಂಬಿದ ಯುವತಿಯು ತನ್ನ ಐಸಿಐಸಿಐ ಬ್ಯಾಂಕ್ ಖಾತೆಯಿಂದ ವಿವಿಧ ಹಂತಗಳಲ್ಲಿ ವಂಚಕರು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಿದ್ದರು. ಹಣ ಪಡೆದ ನಂತರ ಉದ್ಯೋಗ ನೀಡದೆ ಸತಾಯಿಸಿದ ಆರೋಪಿಗಳು, ಕೇಳಿದಾಗ ನಕಲಿ ನೇಮಕಾತಿ ಪತ್ರವನ್ನು (Job Letter) ಕಳುಹಿಸಿ ವಂಚಿಸಿದ್ದಾರೆ.

ಅಷ್ಟೇ ಅಲ್ಲದೆ, ಹಣ ವಾಪಸ್ ನೀಡುವಂತೆ ಒತ್ತಾಯಿಸಿದಾಗ ಊಟ ಮತ್ತು ಮಡಿಕೇರಿಯ ರೆಸಾರ್ಟ್ಗಳಿಗೆ ಬರುವಂತೆ ಯುವತಿಗೆ ಸೂಚಿಸಿ ದಿಕ್ಕು ತಪ್ಪಿಸಲು ಯತ್ನಿಸಿದ್ದಾರೆ. ತಾನು ಮೋಸ ಹೋಗಿರುವುದು ಖಚಿತವಾಗುತ್ತಿದ್ದಂತೆ ಯುವತಿಯು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Online job scam claiming to offer job at Infosys

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ಅಜ್ಜಂಪುರ: ರೈಲ್ವೆ ಹಳಿ ಮೇಲೆ ರೈಲಿಗೆ ಸಿಲುಕಿ ಸುಮಾರು 65 ರಿಂದ 70 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯು ಕೋಲು ಮುಖ, ಸದೃಢ ಮೈಕಟ್ಟು ಮತ್ತು ಎಣ್ಣೆ...

ಶಾಸಕ ತಮ್ಮಯ್ಯ ರಸ್ತೆ ಡಾಂಬರೀಕರಣ ಕಾಮಗಾರಿ ಪರಿಶೀಲನೆ

ಚಿಕ್ಕಮಗಳೂರು: ನಗರಸಭಾ ವ್ಯಾಪ್ತಿಯಲ್ಲಿ ವಿಶೇಷ ಅನುದಾನದಡಿ ಕೈಗೊಂಡಿರುವ ರಸ್ತೆ ಡಾಂಬರೀಕರಣ ಪೂರ್ಣಗೊಂಡ ಕಾಮಗಾರಿಗಳನ್ನು ಶಾಸಕ ಹೆಚ್.ಡಿ. ತಮ್ಮಯ್ಯ ಪರಿಶೀಲಿಸಿದರು. ಅವರು ಇಂದು ನಗರದ ವಿವಿಧ ವಾರ್ಡ್‌ಗಳಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು...

Related Articles

ಆಸ್ತಿ ವಿವಾದ – ಪೊಲೀಸ್ ಠಾಣೆಯ ಮುಂದೆಯೇ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಆಸ್ತಿ ವಿವಾದವೊಂದು ಭೀಕರ ಸ್ವರೂಪ ಪಡೆದುಕೊಂಡಿದೆ. ತಂದೆ ತಾಯಿ ಹಾಗೂ ತಂಗಿಯನ್ನು ಕಳೆದುಕೊಂಡು ಅನಾಥನಾಗಿದ್ದ...

ಡಿ.ಸಿ.ಸಿ.ಬ್ಯಾಂಕ್ ನಲ್ಲಿ ಜಾತಿ ” ಘಾಟು” ಮತ್ತು “ಟ್ರಂಕ್” ಸೊಸೈಟಿಗಳ ಆರ್ಭಟ ?

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಲ್ಲಿ”ಜಾತಿ” ಗ್ರಹಣ ಮೊದಲಿನಿಂದಲೂ ಇದೆ ಆದರೆ...

ಆನ್‌ಲೈನ್ ಟ್ರೇಡಿಂಗ್ ಆಸೆಗೆ 4.36 ಲಕ್ಷ ರೂಪಾಯಿ ಕಳೆದುಕೊಂಡ ಮಹಿಳೆ

ಕಡೂರು : ಮಹಿಳೆಯೊಬ್ಬರು ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 4.36 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ...

ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರ ಬಂಧನ

ಚಿಕ್ಕಮಗಳೂರು : ಮನುಷ್ಯತ್ವಕ್ಕೆ ಮಸಿ ಬಳಿಯುವಂತೆ ವೃದ್ಧ ರೈತರೊಬ್ಬರ ಮೇಲೆ ಹಲ್ಲೆ ನಡೆಸಿ ಹಣ ದೋಚಿದ್ದ...