Home namma chikmagalur chikamagalur ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ
chikamagalurHomeLatest Newsnamma chikmagalur

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ

Share
Share

ಚಿಕ್ಕಮಗಳೂರು: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನೆನ್ನೆ ಪೊಲೀಸ್ ಕಿರುಕುಳಕ್ಕೆ ವಿಧವೆ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ನಡೆದಿತ್ತು. ಇದೀಗ ಇಂತಹದೇ ಮತ್ತೊಂದು ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಏಳು ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ಅಕ್ರಮ ಸಂಬಂಧ ಮತ್ತು ಆಕೆ ತನ್ನ ವಿರುದ್ಧವೇ ನೀಡಿದ ಸುಳ್ಳು ದೂರಿನಿಂದ ಮನನೊಂದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವೃತ್ತಿಯಲ್ಲಿ ಚಾಲಕನಾಗಿದ್ದ ಮನು, ಸಖರಾಯಪಟ್ಟಣ ಮೂಲದ ಹರಿಣಿ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದನು. ದಾಂಪತ್ಯ ಜೀವನ ಸುಗಮವಾಗಿಯೇ ಸಾಗುತ್ತಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಪತ್ನಿ ಹರಿಣಿಗೆ ಪಕ್ಕದ ಮನೆಯ ಅಶೋಕ್ ಎಂಬಾತನ ಜೊತೆ ಸಲುಗೆ ಬೆಳೆದಿತ್ತು.

ಕಳೆದ ರಾತ್ರಿ ಮನು ತನ್ನ ಪತ್ನಿಯ ಮೊಬೈಲ್‌ನಲ್ಲಿ ಅಶೋಕ್ ಕಳುಹಿಸಿದ್ದ ಸಂದೇಶಗಳನ್ನು ನೋಡಿದ್ದನು. ಇದೇ ವಿಚಾರವಾಗಿ ಮನು ಮತ್ತು ಅಶೋಕ್ ನಡುವೆ ತೀವ್ರ ಗಲಾಟೆ ನಡೆದಿದೆ. ಈ ವೇಳೆ ಅಶೋಕ್, “ನಿನ್ನ ಹೆಂಡತಿ ಜೊತೆ ನನಗೆ ಸಂಬಂಧ ಇರುವುದು ನಿಜ” ಎಂದು ಹೇಳಿ ಮನುಗೆ ಅವಮಾನ ಮಾಡಿದ್ದಾನೆ ಎನ್ನಲಾಗಿದೆ.

ಈ ಗಲಾಟೆಯ ಬೆನ್ನಲ್ಲೇ ಪತ್ನಿ ಹರಿಣಿ, ಗಂಡ ಮನು ವಿರುದ್ಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಗಂಡ ನನ್ನ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಆಕೆ ದೂರಿನಲ್ಲಿ ಉಲ್ಲೇಖಿಸಿದ್ದಳು. ಪೊಲೀಸರು ವಿಚಾರಣೆಗೆ ಕರೆದಾಗ, ಇಡೀ ಊರಿನ ಮುಂದೆ ತನ್ನ ಮರ್ಯಾದೆ ಹೋಯಿತು ಎಂದು ಮನು ತೀವ್ರವಾಗಿ ನೊಂದಿದ್ದನು.

ಮರ್ಯಾದೆಗೆ ಹೆದರಿದ ಮನು ಅಂತಿಮವಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ. “ನನ್ನ ಮಗನ ಸಾವಿಗೆ ಆತನ ಪತ್ನಿ ಹರಿಣಿ ಮತ್ತು ಅಶೋಕ್ ಅವರೇ ನೇರ ಕಾರಣ. ಅವರಿಬ್ಬರ ಅಕ್ರಮ ಸಂಬಂಧವೇ ಈ ದುರಂತಕ್ಕೆ ನಾಂದಿ ಹಾಡಿದೆ” ಎಂದು ಮನುವಿನ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದ್ಯ ಪೋಷಕರ ದೂರಿನ ಮೇರೆಗೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Fed up with wife’s illicit relationship husband commits suicide

Share

Leave a comment

Leave a Reply

Your email address will not be published. Required fields are marked *

Don't Miss

ಸಂತ ಸೇವಾಲಾಲ್ ಜಯಂತಿಯಲ್ಲಿ ಸರ್ಕಾರದ ವಿರುದ್ಧದ ಆಕ್ರೋಶ

ಚಿಕ್ಕಮಗಳೂರು: ಕಾಫಿನಾಡಿನ ಕುವೆಂಪು ಕಲಾ ಮಂದಿರದಲ್ಲಿ ಆಯೋಜಿಸಲಾಗಿದ್ದ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮವು ಸಂಭ್ರಮದ ಬದಲು ಸರ್ಕಾರದ ವಿರುದ್ಧದ ಆಕ್ರೋಶದ ಅಖಾಡವಾಗಿ ಮಾರ್ಪಟ್ಟಿತು. ಸಮಾರಂಭದಲ್ಲಿ ಶಾಸಕ ತಮ್ಮಯ್ಯ ಅವರು ಭಾಷಣ ಮಾಡಲು...

ಶ್ರೀ ಸಂತ ಸೇವಾಲಾಲ್ ತತ್ವಾದರ್ಶಗಳು ಮಾsರ್ಗದರ್ಶಿ:

ಚಿಕ್ಕಮಗಳೂರು:  ಹಿಂಸೆ, ಅಸಮಾನತೆ ಇರುವ ಪ್ರಸ್ತುತ ಸಮಾಜಕ್ಕೆ ಶ್ರೀ ಸಂತ ಸೇವಾಲಾಲ್ ಅವರ ತತ್ವಾದರ್ಶಗಳು ಮಾರ್ಗದರ್ಶನ ನೀಡುತ್ತವೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು. ಜಿಲ್ಲಾಡಳಿತ, ಬಂಜಾರ ಸಂಘದಿಂದ ಕುವೆಂಪು ಕಲಾಮಂದಿರದಲ್ಲಿ ಭಾನುವಾರ...

Related Articles

ಮೃತ ಕಾರ್ಮಿಕ ಮಹಿಳೆಯ ಶವವಿಟ್ಟು ಬೃಹತ್‌ ಪ್ರತಿಭಟನೆ

ಬಾಳೆಹೊನ್ನೂರು: ಹುಣಸೆಹಳ್ಳಿಪುರ ಸಮೀಪ ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಬೋರಮ್ಮ ಮೃತಪಟ್ಟ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅರಣ್ಯ...

ಕಾಡಾನೆ ದಾಳಿಗೆ ಮತ್ತೋಂದು ಕಾರ್ಮಿಕ ಮಹಿಳೆ ಸಾವು

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಾಡಾನೆ ದಾಳಿ ಮುಂದುವರಿದಿದ್ದು, ಒಂದೇ ವಾರದಲ್ಲೇ ಇಬ್ಬರು ಕಾರ್ಮಿಕರು ಬಲಿಯಾಗಿದ್ದಾರೆ. ಜಿಲ್ಲೆಯ ಮಲೆನಾಡು...

ಲಾಠಿ ಚಾರ್ಜ್ ಖಂಡಿಸಿ ಇಂದು ಶೃಂಗೇರಿ ಬಂದ್

ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಶವವನ್ನು ರಾಜ್ಯ ಹೆದ್ದಾರಿಯಲ್ಲಿ ಇಟ್ಟುಕೊಂಡು ಬೆಳಗ್ಗೆಯಿಂದ ನಡೆಸುತ್ತಿದ್ದ ಪ್ರತಿಭಟನೆ...

ಇಬ್ಬರು ಅಮಾಯಕರನ್ನು ಬಲಿಪಡೆದಿದ್ದ ಕಾಡಾನೆ ಸೆರೆ

ಚಿಕ್ಕಮಗಳೂರು: ಕಳೆದ ಒಂದು ವಾರದಿಂದ ಮಲೆನಾಡಿಗರ ನಿದ್ದೆಗೆಡಿಸಿ, ಇಬ್ಬರು ಅಮಾಯಕರನ್ನು ಬಲಿಪಡೆದಿದ್ದ ರಕ್ಕಸ ಕಾಡಾನೆ ಕೊನೆಗೂ...