Home namma chikmagalur chikamagalur ಫೆ.೨೮-ಮಾ.೧೭ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ
chikamagalurHomeLatest Newsnamma chikmagalur

ಫೆ.೨೮-ಮಾ.೧೭ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ

Share
Share

ಚಿಕ್ಕಮಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಫೆಬ್ರವರಿ ೨೮ ರಿಂದ ಮಾರ್ಚ್ ೧೭ರವರೆಗೆ ನಡೆಯಲಿದ್ದು, ಪರೀಕ್ಷೆಗಳನ್ನು ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ, ಪಾರದರ್ಶಕವಾಗಿ ನಡೆಸಲು ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಕೇಂದ್ರದಲ್ಲಿ ಮಂಗಳವಾರ ನಡೆದ ೨೦೨೬ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಯಾವುದೇ ರೀತಿಯ ಗೊಂದಲಕ್ಕೆ ಅವಕಾಶವಿರದಂತೆ, ಸುಗಮ ಹಾಗೂ ಸುವ್ಯವಸ್ಥಿತವಾಗಿ ನಡೆಸಬೇಕು. ಪರೀಕ್ಷೆಗೆ ಮೇಲ್ವಿಚಾರಕರ ನಿಯೋಜನೆ ಸೇರಿದಂತೆ ಪಿಯು ಪರೀಕ್ಷಾ ಪ್ರಾಧಿಕಾರದ ನಿರ್ದೇಶನವನ್ನು ಚಾಚೂ ತಪ್ಪದೆ ಪಾಲಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

ಪರೀಕ್ಷಾ ಕೊಠಡಿಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವುದು, ಕುಡಿಯುವ ನೀರಿನ ವ್ಯವಸ್ಥೆ, ಕೊಠಡಿಗಳ ಸ್ವಚ್ಛತೆ, ಬೆಂಚುಗಳ ವ್ಯವಸ್ಥೆ, ಗೋಡೆ ಗಡಿಯಾರ ಸೇರಿದಂತೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಉತ್ತಮ ವಾತಾವರಣ ಕಲ್ಪಿಸಬೇಕು. ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡಬೇಕು.

ಪರೀಕ್ಷಾ ಕೇಂದ್ರಗಳಲ್ಲಿ ಚಲನವಲನಕ್ಕೆ ಸಂಬಂಧಿಸಿದಂತೆ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಸೇರಿದಂತೆ ಪರೀಕ್ಷಾ ಕೇಂದ್ರಗಳಲ್ಲಿ ಚಲನವಲನಗಳಿಗೆ ಸಂಬಂಧಿಸಿದಂತೆ ನಿಗಾ ವಹಿಸಬೇಕು. ವಿದ್ಯಾರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕೊಂಡೊಯ್ಯುವಂತಿಲ್ಲ ಎಂದರು.

ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಹಾಗೂ ಕೊಠಡಿ ಸಂಖ್ಯೆಗಳನ್ನು ಖಾತ್ರಿಪಡಿಸಿಕೊಳ್ಳಲು ಪರೀಕ್ಷಾ ಕೇಂದ್ರಗಳಲ್ಲಿ ಮಾಹಿತಿ ಒದಗಿಸುವಂತಾಗಬೇಕು. ಪರೀಕ್ಷಾ ದಿನಗಳಲ್ಲಿ ಅಗತ್ಯ ವಾಹನಗಳ ವ್ಯವಸ್ಥೆ ಜೊತೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು. ಆರೋಗ್ಯ ಇಲಾಖೆಯಿಂದ ಶುಶ್ರೂಷಕರನ್ನು ನೇಮಕ ಮಾಡಬೇಕು ಎಂದು ಸೂಚಿಸಿದರು.

ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಕೆ.ಮಂಜುಳ ಮಾತನಾಡಿ, ಜಿಲ್ಲೆಯ ಒಟ್ಟು ೧೯ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಒಟ್ಟು ೮೮೯೦ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ ೮೩೧೫ ಹೊಸ ವಿದ್ಯಾರ್ಥಿಗಳು, ೩೫೧ ಪುನರಾವರ್ತಿತ ಅಭ್ಯರ್ಥಿಗಳು, ೨೨೨ ಖಾಸಗಿ ಅಭ್ಯರ್ಥಿಗಳು ಹಾಗೂ ಇಬ್ಬರು ಇತರೆ ಅಭ್ಯರ್ಥಿಗಳು ಸೇರಿದ್ದಾರೆ.

ಒಟ್ಟು ವಿದ್ಯಾರ್ಥಿಗಳಲ್ಲಿ ಕಲಾವಿಭಾಗದಲ್ಲಿ ೧೯೯೦, ವಿಜ್ಞಾನ ವಿಭಾಗದಲ್ಲಿ ೩೮೦೦ ಹಾಗೂ ವಾಣಿಜ್ಯ ವಿಭಾಗದಲ್ಲಿ ೩೧೦೦ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಯ ಎಲ್ಲ ತಾಲ್ಲೂಕು ತಹಸೀಲ್ದಾರರುಗಳ ಜೊತೆ ವಿ.ಸಿ. ಮೂಲಕ ಪರೀಕ್ಷಾ ಸಿದ್ಧತೆ ಬಗ್ಗೆ ಚರ್ಚಿಸಲಾಯಿತು.

ಜಿಲ್ಲೆಯ ವಿವಿಧ ತಾಲ್ಲೂಕುಗಳ ತಹಸೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಕಾಲೇಜು ಪ್ರಾಂಶುಪಾಲರು, ಹಿರಿಯ ಉಪನ್ಯಾಸಕರು ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ವಿವಿಧ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Second PUC annual examination from Feb. 28-Mar. 17

Share

Leave a comment

Leave a Reply

Your email address will not be published. Required fields are marked *

Don't Miss

ನೈತಿಕ ಪೊಲೀಸ್ ಗಿರಿ ಪ್ರಕರಣ – ಗಂಭೀರವಾಗಿ ಪರಿಗಣನೆ

ಚಿಕ್ಕಮಗಳೂರು: ಕಾಫಿನಾಡಿನ ಸಂತೇ ಮೈದಾನದ ಬಳಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣವನ್ನು ಜಿಲ್ಲಾ ಪೊಲೀಸ್ ಇಲಾಖೆ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್...

ಕಲ್ಲು ಎಸೆತ ಪ್ರಕರಣ: ಇಬ್ಬರು ಹಿಂದೂ ಯುವಕರ ಬಂಧನ

ಚಿಕ್ಕಮಗಳೂರು: ಕಾಫಿನಾಡಿನ ವಿಜಯಪುರ ಬಡಾವಣೆಯಲ್ಲಿ ನಡೆದಿದ್ದ ಹಿಂದೂ ಮನೆಯೊಂದರ ಮೇಲೆ ನಡೆದಿದ್ದ ಕಲ್ಲು ಎಸೆತ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಪೊಲೀಸರು ಇಬ್ಬರು ಹಿಂದೂ ಯುವಕರನ್ನು ಬಂಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ...

Related Articles

ಪ್ರವಾಸ ಮುಂದೂಡಲು ಜಿಲ್ಲಾಡಳಿತ ಮನವಿ

ಚಿಕ್ಕಮಗಳೂರು:  ಐ.ಡಿ. ಪೀಠ ಹಾಗೂ ಸುತ್ತಮುತ್ತಲಿನ ತಾಲ್ಲೂಕಿನ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ ಹಾಗೂ...

ಕಾಡುಕೋಣ ದಾಳಿಗೆ ಕೃಷಿಕನಿಗೆ ಗಾಯ

ಕಾಡಾನೆಗಳ ಹಾವಳಿಯಿಂದ ತತ್ತರಿಸಿರುವ ಜನತೆಗೆ ಈಗ ಕಾಡುಕೋಣಗಳ ಉಪಟಳ ಹೊಸ ಆತಂಕ ತಂದೊಡ್ಡಿದೆ. ಕೊಪ್ಪ ತಾಲೂಕಿನ...

ಕಾಫಿನಾಡಿನ ಹಲವೆಡೆ ಕಾಡಾನೆಗಳ ಸಂಚಾರ – ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ

ಚಿಕ್ಕಮಗಳೂರು: ಕಾಫಿನಾಡಿನ ಹಲವೆಡೆ ಕಾಡಾನೆಗಳ ಸಂಚಾರ ತೀವ್ರಗೊಂಡಿದ್ದು, ಅರಣ್ಯ ಇಲಾಖೆ ಹಾಗೂ ಆನೆ ಕಾರ್ಯಪಡೆ (ETF)...

ಇನ್ವೆಸ್ಟ್ಮೆಂಟ್ ನಲ್ಲಿ ಅಧಿಕ ಲಾಭ ವೈದ್ಯರೊಬ್ಬರಿಗೆ 21.85 ಲಕ್ಷ ರೂ. ವಂಚನೆ

ಚಿಕ್ಕಮಗಳೂರು: ಆನ್ಲೈನ್ ಟ್ರೇಡಿಂಗ್ ಇನ್ವೆಸ್ಟ್ಮೆಂಟ್ ನಲ್ಲಿ ಅಧಿಕ ಲಾಭವಿದೆ ಎಂದು ನಂಬಿಸಿ ವೈದ್ಯರೊಬ್ಬರಿಗೆ 21.85 ಲಕ್ಷರು...