Home namma chikmagalur chikamagalur ಮಾನವಧರ್ಮಕ್ಕೆ ಜಯವಾಗಲಿ- ಧರ್ಮದಿಂದಲೇ ವಿಶ್ವಕ್ಕೆ ಶಾಂತಿ
chikamagalurHomeLatest Newsnamma chikmagalur

ಮಾನವಧರ್ಮಕ್ಕೆ ಜಯವಾಗಲಿ- ಧರ್ಮದಿಂದಲೇ ವಿಶ್ವಕ್ಕೆ ಶಾಂತಿ

Share
Share

ಬಾಳೆಹೊನ್ನೂರು: “ಧರ್ಮ,‌ ಪೂಜೆ, ಭಕ್ತಿ ಇವು ಪ್ರದರ್ಶನಕ್ಕೆ ಇರುವಂತಹ ಸಂಗತಿಗಳಲ್ಲ. ಇವು ಮನುಷ್ಯನ ಆತ್ಮವಿಶ್ವಾಸವನ್ನು ಹೆಚ್ಚಿಸುವ ಸಲುವಾಗಿ ಇರುವ ಸಾಧನಗಳು. ನನ್ನ ಧರ್ಮ ಸರಿ, ನಿನ್ನ ಧರ್ಮ ತಪ್ಪು ಎನ್ನುವ ಕಲ್ಪನೆ ಎಲ್ಲಿಯೂ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಭಿಪ್ರಾಯಪಟ್ಟರು.

“ಆಕಾಶಾತ್ ಪತಿತಂ ತೋಯಂ ಯಥಾಗಚ್ಛತಿ ಸಾಗರಮ್ ಸರ್ವದೇವ ನಮಸ್ಕಾರಃ ಕೇಶವಂ ಪ್ರತಿಗಚ್ಛತಿ. ಅಂದರೆ ಎಷ್ಟೇ ದೇವರಿಗೆ ನಮಸ್ಕಾರ ಮಾಡಿದರೂ ಸಹ ಅದು ಒಂದೇ ದೇವರಿಗೆ ತಲುಪುತ್ತದೆ, ಎಷ್ಟೇ ನದಿಗಳಿದ್ದರೂ ಅವು ಸೇರುವುದು ಒಂದೇ ಸಾಗರಕ್ಕೆ. ಶಿವನ ಲಿಂಗಕ್ಕೆ ಇದೇ ಆಕಾರ ಎಂಬುದು ಇಲ್ಲ. ಇಲ್ಲಿ ಇರುವುದು ನಮ್ಮ ಭಕ್ತಿ” ಎಂದು ಹೇಳಿದರು.

“ಒಕ್ಕಲಿಗನಾಗಿ ಗಂಗಾಧರ ಅಜ್ಜಯ್ಯ ಅವರ ಹೆಸರಿನಲ್ಲಿ ನೀನು ಏಕೆ ಪ್ರಮಾಣ ವಚನ ಸ್ವೀಕಾರ ಮಾಡಿದೆ ಎಂದು ಕೇಳಿದರು. ಅದಕ್ಕೆ ನಾನು ಇದು ನನ್ನ ನಂಬಿಕೆ ಎಂದು ಹೇಳಿದೆ. ಅವರು ನನಗೆ ಆತ್ಮಬಲವನ್ನು ತುಂಬಿದ್ದಾರೆ. ರಂಭಾಪುರಿ ಶ್ರೀಗಳು ನನಗೆ ಮಾರ್ಗದರ್ಶನ ಮಾಡುತ್ತಾ ಬಂದಿದ್ದಾರೆ” ಎಂದರು‌.

“ಅಜ್ಜಯ್ಯ ಅವರು ನನಗೆ ನೀಡಿದ ಸಾಕ್ಷಾತ್ಕಾರವನ್ನ ಬಹಿರಂಗ ಮಾಡಲು ಆಗುವುದಿಲ್ಲ. ಸಮಯ ಬಂದಾಗ ಪುಸ್ತಕ ರೂಪದಲ್ಲಿ ಹೊರತರುತ್ತೇನೆ” ಎಂದರು.

“ಎನ್ನ ಪರಮಗುರು ನೀವೇ, ಎನ್ನ ಗತಿ ಮತಿ ನೀವೇ, ಎನ್ನ ಅರಿವಿನ ಜ್ಯೋತಿ ನೀವೇ, ಎನ್ನ ಅಂತರಂಗ ಬಹಿರಂಗ ನೀವೇ ಕೂಡಲಸಂಗಮದೇವಾ ಎಂದು ಬಸವಣ್ಣ ಹೇಳುತ್ತಾರೆ. ಅಂದರೆ ಗುರುವಿಲ್ಲದೇ ಗುರಿ ಮುಟ್ಟಲು ಸಾಧ್ಯವಿಲ್ಲ” ಎಂದರು.

ರಂಭಾಪುರಿ ಮಠದ ಭವನಕ್ಕೆ 5 ಕೋಟಿ ರೂಪಾಯಿ

“ರಂಭಾಪುರಿ ಶ್ರೀಗಳು ನಿಂತು ಹೋಗಿದ್ದ ಭವನಕ್ಕೆ ನೀವು ಸಹಾಯ ಮಾಡಬೇಕು ಎಂದು ಹೇಳಿದ್ದರು. ನಾನು ಈ ಹಿಂದೆ ಸ್ವಲ್ಪ ಅಡಚಣೆಗಳಿವೆ ಎಂದು ತಡೆಯಲು ಹೇಳಿದ್ದೆ. ಈಗ ಸಮಯ ಒದಗಿ ಬಂದಿದೆ. 5 ಕೋಟಿ ರೂಪಾಯಿಗಳನ್ನು ನೀಡಲಾಗುವುದು‌. ನಾನೇ ಖುದ್ದಾಗಿ ಬಂದು ಅದನ್ನು ಉದ್ಘಾಟನೆ ಮಾಡುತ್ತೇನೆ” ಎಂದು ಹೇಳಿದರು.

“ವೀರಶೈವ, ಲಿಂಗಾಯತ ಧರ್ಮ ಹೋರಾಟ ನಡೆಯುತ್ತಿತ್ತು. ಆಗ ಶ್ರೀಗಳ ಪಾದಕ್ಕೆ ನಮಸ್ಕಾರ ಮಾಡಿ ನಮ್ಮಿಂದ ತಪ್ಪಾಯಿತು ಕ್ಷಮಿಸಿ ಎಂದು ನಾನು ಪ್ರಾರ್ಥಿಸಿದ್ದೆ. ಇಡೀ ರಾಜ್ಯದಲ್ಲಿಯೇ ಇದರ ಬಗ್ಗೆ ಚರ್ಚೆ, ಟೀಕೆ, ಟಿಪ್ಪಣಿಯಾಯಿತು. ಆಗ ನಾನು ಯಾರಿಗೂ ಹೆದರುವ ಅವಶ್ಯಕತೆ ಇಲ್ಲ ಎಂದು ಹೇಳಿ, ಆತ್ಮಸಾಕ್ಷಿಗೆ ಅನುಗುಣವಾಗಿ ಬದುಕಬೇಕು ಎಂದಿದ್ದೆ” ಎಂದು ಹೇಳಿದರು.

“ಧರ್ಮ ಯಾವುದಾದರೂ ಇರಲಿ, ತತ್ವ, ನಾಮ ನೂರಾರೂ ಇದ್ದರು ದೈವವೊಂದೇ. ಪೂಜೆ ಹಲವಾದರೂ ಭಕ್ತಿಯೊಂದೇ, ದೇವನೊಬ್ಬ ನಾಮ ಹಲವು. ಮಾನವಧರ್ಮಕ್ಕೆ ಜಯವಾಗಲಿ, ಮಾನವ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ಅಜ್ಜಯ್ಯ ಹೇಳಿದ್ದಾರೆ. ಅವರ ಮಾತಿನಂತೆ ನಾವೆಲ್ಲರೂ ನಡೆಯಬೇಕು. ಜೊತೆಗೆ ಸಾಹಿತ್ಯ, ಸಂಸ್ಕೃತಿ ಸಮೃದ್ದಿಯಾಗಲಿ. ಶಾಂತಿ ಸದ್ಬುದ್ದಿ ಸರ್ವರಿಗೂ ದೊರಕಲಿ, ಧರ್ಮಕ್ಕಾಗಿ ಏಳಲಿ, ಬಾಳಲಿ, ಆಳಲಿ ಎಂದಿದ್ದಾರೆ” ಎಂದರು.

“ಅಕ್ಕಿ ಹಾಗೂ ಅರಿಶಿನ ಬೇರೆ ಬೇರೆ ಇವೆರಡೂ ಬೆರೆತರೆ ಮಂತ್ರಾಕ್ಷತೆಯಾಗುತ್ತದೆ. ಅದೇ ರೀತಿ ಇಂದು ನನ್ನ ಕೈಯಿಂದ ಅನೇಕ ಕೆಲಸಗಳಿಗೆ ಶಂಕುಸ್ಥಾಪನೆ ಮಾಡಿಸಲಾಗಿದೆ. ಉದ್ಘಾಟನೆ ಮಾಡಿಸಲಾಗಿದೆ. ನಾವುಗಳು ಯಾರೂ ಸಹ ಇದೇ ಜಾತಿಯಲ್ಲಿ ಹುಟ್ಟುಬೇಕು ಎಂದು ಅರ್ಜಿ ಹಾಕಿ ಹುಟ್ಟುವುದಿಲ್ಲ. ನಾನು ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಪೂರ್ವಜನ್ಮದ ಪುಣ್ಯ” ಎಂದು ಹೇಳಿದರು.

“ಹಿರಿಯರು ಮನೆ ಹುಷಾರು, ಮಠ ಹುಷಾರು ಎಂದಿದ್ದಾರೆ. ನಾವು ನಮ್ಮ ಮಠಗಳನ್ನು ಉಳಿಸಿಕೊಳ್ಳಬೇಕು. ಧರ್ಮವನ್ನು ಕಾಪಾಡಿದರೆ ಧರ್ಮ ಅವರನ್ನು ಕಾಪಾಡುತ್ತದೆ. ಈ ಹುಟ್ಟು ಸಾವಿನ ಮಧ್ಯದಲ್ಲಿ ನಾವು ಸಾಕ್ಷಿಗುಡ್ಡೆಗಳನ್ನು ಬಿಟ್ಟು ಹೋಗಬೇಕು” ಎಂದರು.

“ರಂಭಾಪುರಿ ಮಠ ಒಂದು ಧರ್ಮದ ಆಸ್ತಿಯಲ್ಲ. ಮಾನವ ಧರ್ಮದ ಆಸ್ತಿ. ನಾನು ಸಹ ಈ ಮಠದ ಭಕ್ತ. ಶ್ರೀಗಳ ಮಾರ್ಗದರ್ಶನದಲ್ಲಿ ನಡೆಯುವವನು. ನಾವು ಮಾಡುವ ಒಳ್ಳೆ ಕೆಲಸಗಳಿಗೆ ಶ್ರೀಗಳ ಆಶೀರ್ವಾದ ಮುಖ್ಯ” ಎಂದು ಹೇಳಿದರು.

“ನಮ್ಮ ಕುಟುಂಬದಲ್ಲಿ ಯಾರೇ ಜನಿಸಿದರು ಕೆಂಪೇಗೌಡ ಎಂದೇ ನಾಮಕರಣ ಮಾಡುವುದು. ನಮ್ಮ ಅಜ್ಜ, ಮುತ್ತಜ್ಜ, ತಂದೆಯ ಹೆಸರು ಸಹ ಕೆಂಪೇಗೌಡ. ನಮ್ಮ ತಂದೆ- ತಾಯಿಗೆ ಮಕ್ಕಳ ಜನನ ಸ್ವಲ್ಪ ತಡವಾದಾಗ ನಮ್ಮ ಊರಿನ ಬಳಿ ಇರುವ ಶಿವಾಲ್ದಾಪ್ಪ ಬೆಟ್ಟದಲ್ಲಿನ ಶಿವನಿಗೆ ಪೂಜಿಸದ ಮೇಲೆ ನನ್ನ ಜನನವಾಯಿತು. ಅದಕ್ಕೆ ನನಗೆ ಶಿವಕುಮಾರ ಎಂದು ಹೆಸರಿಟ್ಟಿದ್ದಾರೆ” ಎಂದರು.

“ನನಗೂ ವೀರಶೈವರಿಗೂ ಯಾವ ಕಾರಣಕ್ಕೆ ಅವಿನಾಭಾವ ಸಂಬಂಧ ಉಂಟಾಗಿದೆ ಎನ್ನುವುದು ಗೊತ್ತಿಲ್ಲ. ನಾನು ಪಿಯು ವಿದ್ಯಾಭ್ಯಾಸವನ್ನು ವೀರಶೈವ ಸಂಸ್ಥೆಯಲ್ಲಿ ಪೂರ್ಣಗೊಳಿಸಿದೆ. ನಂತರ ವೀರ ಗಂಗಾಧರ ಅಜ್ಜನವರು ಸ್ಥಾಪಿಸಿದ್ದ ರೇಣುಕಾಚಾರ್ಯ ಸಂಸ್ಥೆಯಲ್ಲಿ ಪದವಿ ಓದುತ್ತಿದ್ದೆ. ನಾನು ವೀರ ಗಂಗಾಧರ ಅಜ್ಜನವರ ಪರಮಭಕ್ತ. ಅವರನ್ನು ಸಂಪೂರ್ಣವಾಗಿ ನಂಬಿ ಕೆಲಸ ಮಾಡುವವನು” ಎಂದು ಹೇಳಿದರು.

“ಪುರಂದರ ದಾಸರ ಕೀರ್ತನೆಯಂತೆ ಇದು ಭಾಗ್ಯ ಇದು ಭಾಗ್ಯ ಇದು ಭಾಗ್ಯವಯ್ಯ, ಪದುಮನಾಭನ ಪಾದ ಭಜನೆ ಪರಮ ಸುಖವಯ್ಯ. ಏಕೆಂದರೆ ಪರಮಗುರು ರೇಣುಕಾಚಾರ್ಯ ಅವರ ಪ್ರತಿಮೆಯನ್ನು ಉದ್ಘಾಟನೆ ಮಾಡುವ ಭಾಗ್ಯ ನನಗೆ ಸಿಕ್ಕಿದ್ದು ನನ್ನ ಪುಣ್ಯ” ಎಂದು ಹೇಳಿದರು.

May humanity triumph – peace for the world comes from religion

Share

Leave a comment

Leave a Reply

Your email address will not be published. Required fields are marked *

Don't Miss

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ ಬಿ.ಎಸ್. ಅವರ ನೇತೃತ್ವದಲ್ಲಿ ಜುಲೈ 5, 2026ರಂದು ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯ ಆರ್.ಸಿ....

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ ಫಾಲ್ಸ್‌ (Hebbe Falls) ಧುಮ್ಮಿಕ್ಕಿ ಹರಿಯುತ್ತಿದೆ. ಹೆಬ್ಬೆ ಜಲಪಾತದಲ್ಲಿ ಸುಮಾರು 100 ಅಡಿಗೂ ಎತ್ತರದಿಂದ...

Related Articles

ಜಿಲ್ಲಾ ಆಸ್ಪತ್ರೆಯ ಸರ್ಜನ್ ಆಗಿ ಡಾ.ದೇವರಾಜ್

ಚಿಕ್ಕಮಗಳೂರು; ಮಲ್ಲೇಗೌಡ ಜನರಲ್ ಆಸ್ಪತ್ರೆಯ ಸರ್ಜನ್ ಆಗಿ ಡಾ.ಟಿ.ಎಂ.ದೇವರಾಜ್ ನೇಮಕವಾಗಿದ್ದು ಇಂದು ಮಧ್ಯಾಹ್ನ. ಅಧಿಕಾರ ಸ್ಪೀಕಾರ...

ಭದ್ರಾ ಹುಲಿ ಸಂರಕ್ಷಿತ ಸಿಬ್ಬಂದಿಗಳಿಂದಲೇ ಮದ್ಯಪಾನ ಮೋಜು ಮಸ್ತಿ

ಚಿಕ್ಕಮಗಳೂರು: ಭದ್ರಾ ಹುಲಿ ಸಂರಕ್ಷಿತ ವ್ಯಾಪ್ತಿಯ ತಣಿಗೆಬೈಲು ವಲಯದ, ವಿರೂಪಾಕ್ಷ ಖಾನ್ ಚೆಕ್ ಪೋಸ್ಟ್ ನಲ್ಲಿ ಸಿಬ್ಬಂದಿಗಳು...

ತೋಟಕ್ಕೆ ನೀರು ಬಿಡಲು ಹೋದ ಯುವತಿ ಅಪಹರಣ

ಅಜ್ಜಂಪುರ : ಯುವತಿಯೊಬ್ಬಳನ್ನು ಕಾರಿನಲ್ಲಿ ಬಲವಂತವಾಗಿ ಅಪಹರಿಸಿಕೊಂಡು ಹೋಗಿರುವ ಗಂಭೀರ ಆರೋಪ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ...

ಜೀತ ಪದ್ಧತಿ ತಡೆಗಟ್ಟಲು ಮಾಧ್ಯಮಗಳು ಜೀತ ಪದ್ಧತಿ ವರದಿ ಪ್ರಕಟಿಸಬೇಕು

ಚಿಕ್ಕಮಗಳೂರು: ಮಾನವ ಕಳ್ಳ ಸಾಗಾಣಿಕೆ ಹಾಗೂ ಜೀತ ಕಾರ್ಮಿಕ ಪದ್ಧತಿ ನಿರ್ಮೂಲನೆ ಮತ್ತು ಜೀತ ಪದ್ಧತಿಗೆ...