Home namma chikmagalur chikamagalur ಮೂಡಿಗೆರೆ ಪೊಲೀಸ್ ಠಾಣೆಯ ಒಳಗೆ ಕತ್ತಿ ಹಿಡಿದು ದಾಂಧಲೆ
chikamagalurCrime NewsHomeLatest Newsnamma chikmagalur

ಮೂಡಿಗೆರೆ ಪೊಲೀಸ್ ಠಾಣೆಯ ಒಳಗೆ ಕತ್ತಿ ಹಿಡಿದು ದಾಂಧಲೆ

Share
Share

ಮೂಡಿಗೆರೆ: ವೆಲ್ಡಿಂಗ್ ವಿಚಾರದ ಗಲಾಟೆಯು ಕೊಲೆಯಲ್ಲಿ ಅಂತ್ಯವಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ. ಈ ಬೆನ್ನಲ್ಲೇ ಪೊಲೀಸ್ ಠಾಣೆಯ ಒಳಗೆ ಸೇಡು ತೀರಿಸಿಕೊಳ್ಳಲು ಮೃತ ವ್ಯಕ್ತಿಯ ಪುತ್ರ ಕತ್ತಿ ಹಿಡಿದು ದಾಂಧಲೆ ನಡೆಸಿರುವ ಆಘಾತಕಾರಿ ಘಟನೆಗಳು ವರದಿಯಾಗಿವೆ.

ಮೂಡಿಗೆರೆ ಬೇಲೂರು ರಸ್ತೆಯ ಗ್ಯಾರೇಜ್ ಮಾಲೀಕ ಸೈಯದ್ ಜಾವಿದ್ ಎಂಬುವವರ ಮೇಲೆ ರಾಜು ಎಂಬಾತ ವೆಲ್ಡಿಂಗ್ ವಿಚಾರವಾಗಿ ಗಲಾಟೆ ನಡೆಸಿ, ಅವರ ಎದೆಭಾಗಕ್ಕೆ ರಭಸವಾಗಿ ಹೊಡೆದಿದ್ದಾನೆ. ಈ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡು ಕೆಳಕ್ಕೆ ಬಿದ್ದ ಜಾವಿದ್ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅವರು ಈಗಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ಕೊಲೆಗೆ ಸಂಬಂಧಿಸಿದಂತೆ ಮೃತರ ಪತ್ನಿ ಜೈನಾಬಿ ಅವರು ನೀಡಿದ ದೂರಿನ ಮೇರೆಗೆ ಆಟೋ ರಿಕ್ಷಾ ಚಾಲಕ ರಾಜು ಎಂಬಾತನ ವಿರುದ್ಧ ಮೂಡಿಗೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಠಾಣೆಯ ಆವರಣದಲ್ಲಿ ಮತ್ತೊಂದು ಹೈಡ್ರಾಮಾ ನಡೆದಿದೆ. ಮೃತ ಜಾವಿದ್ ಅವರ ಪುತ್ರ ಸೈಯದ್ ಆಶಿರ್ (26), ತನ್ನ ತಂದೆಯ ಕೊಲೆಗೆ ಪ್ರತಿಕಾರ ತೀರಿಸಿಕೊಳ್ಳಲು ಮಾರುತಿ 800 ಕಾರಿನಲ್ಲಿ ಕತ್ತಿ ಹಿಡಿದು ಠಾಣೆಯೊಳಗೆ ನುಗ್ಗಿದ್ದಾನೆ.

ಠಾಣೆಯಲ್ಲಿದ್ದ ಆರೋಪಿಯ ಮೇಲೆ ಹಲ್ಲೆ ಮಾಡಲು ಮುಂದಾದ ಆತನನ್ನು ತಡೆದ ಹೆಡ್ ಕಾನ್ಸೆಬಲ್ ಪುಟ್ಟೇಗೌಡ ಮತ್ತು ಪಿಸಿ 393 ರವರನ್ನು ತಳ್ಳಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ. ತಕ್ಷಣ ಎಚ್ಚೆತ್ತ ಹೋಮ್ ಗಾರ್ಡ್ ಮೂರ್ತಿ ಮತ್ತು ಇತರೆ ಸಿಬ್ಬಂದಿ ಆತನ ಕೈಯಲ್ಲಿದ್ದ 15 ಇಂಚು ಉದ್ದದ ಹರಿತವಾದ ಕತ್ತಿಯನ್ನು ಕಸಿದುಕೊಂಡು, ಆತನನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಆಶಿರ್ ವಿರುದ್ಧವೂ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Sword-wielding vandalism inside Mudigere police station

Share

Leave a comment

Leave a Reply

Your email address will not be published. Required fields are marked *

Don't Miss

ಲೋಕಾಯುಕ್ತ ಬಲೆಗೆ ತಂಗಲಿ ಗ್ರಾಮ ಪಂಚಾಯಿತಿಯ ಪಿಡಿಒ

ಕಡೂರು : ಸೈಟ್ ಗೆ ಎನ್.ಒ.ಸಿ (NOC) ನೀಡಲು ಲಂಚದ ಬೇಡಿಕೆಯಿಟ್ಟಿದ್ದ ಕಡೂರು ತಾಲೂಕಿನ ತಂಗಲಿ ಗ್ರಾಮ ಪಂಚಾಯಿತಿಯ ಪಿಡಿಒ ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಿಮ್ಮಶೆಟ್ಟಿ ಎಂಬುವವರಿಗೆ ಸೇರಿದ...

ಕಳಪೆ ಕಾಮಗಾರಿ ತಡೆಗಟ್ಟುವಂತೆ ಜಿಲ್ಲಾಡಳಿತಕ್ಕೆ ಒತ್ತಾಯ

ಚಿಕ್ಕಮಗಳೂರು: ಕಡೂರು ತಾಲೂಕಿನ ಐತಿಹಾಸಿಕ ಮದಗದ ಕೆರೆ ಕಾಲುವೆಯ (ಚಾನಲ್) ಕಳಪೆ ಕಾಮಗಾರಿಯನ್ನು ತಡೆಗಟ್ಟುವಂತೆ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ಜಿಲ್ಲಾಡಳಿತವನ್ನು ಒತ್ತಾಯಿಸಿದೆ. ಅಪರ ಜಿಲ್ಲಾಧಿಕಾರಿ ನಾರಾಯಣ ರೆಡ್ಡಿ ಕನಕರೆಡ್ಡಿ...

Related Articles

ಶಾಸಕ ರಾಜೇಗೌಡರ ಕಣ್ಣೀರು ಕಾಂಗ್ರೆಸ್ ನವರ ಆಕ್ರೋಶ-ಬಿ.ಜೆ.ಪಿಯ ತಲ್ಲಣ

ಶೃಂಗೇರಿ: ಶೃಂಗೇರಿ ವಿಧಾನ ಸಭಾ ಕ್ಷೇತ್ರದಲ್ಲಿ ಕಳೆದ ಮೂರು ವರ್ಷಗಳಿಂದ ಶಾಸಕ ರಾಜೇಗೌಡರ ವಿರುದ್ಧ ಬಿಜೆಪಿ...

ದಲಿತ ಸಂಘಟನೆಗಳ ಒಕ್ಕೂಟದ ವಿಭಿನ್ನ ಹೋರಾಟ

ಚಿಕ್ಕಮಗಳೂರು : ನಗರ ಸಮೀಪದ ಗೌಡನಹಳ್ಳಿ ವಾಸಿ ಮಂಜುನಾಥ್ ಯಾನೆ ಹೇಮಂತ್ ಎಂಬುವವರಿಗೆ ಸೇರಿದ ಜೆ.ಸಿ.ಬಿ...

ಅರವಿಂದ್ ಕೇಜ್ರವಾಲ್ ದೋಷಮುಕ್ತ ಪಕ್ಷಕ್ಕೆ ಸಂದ ಜಯ

ಚಿಕ್ಕಮಗಳೂರು : ಕೇಂದ್ರ ಸರ್ಕಾರದ ಪಿತೂರಿಯಿಂದ ದೆಹಲಿಯ ಅಬಕಾರಿ ಹಗರಣದಲ್ಲಿ ಸಿಲುಕಿಸಲಾಗಿದ್ದ ಅರವಿಂದ್ ಕೇಜ್ರವಾಲ್ ಮತ್ತು...

ಬಿಜೆಪಿ ಟಿಕೆಟ್ ಭ್ರಮೆಯಿಂದ ವೆಂಕಟೇಶ್ ಹೊರಬರಲಿ

ಚಿಕ್ಕಮಗಳೂರು : ಶಾಸಕ ಹೆಚ್.ಡಿ ತಮ್ಮಯ್ಯನವರನ್ನು ಪ್ರತಿ ನಿತ್ಯ ವಿರೋಧಿಸಿದರೆ ಮೂಡಿಗೆರೆ ಮೀಸಲು ಕ್ಷೇತ್ರಕ್ಕೆ ಬಿಜೆಪಿ...