Home namma chikmagalur chikamagalur ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಹಿಲ್ ಶರೀಫ್ ಪಕ್ಷದಿಂದ ಉಚ್ಚಾಟನೆ
chikamagalurHomeLatest Newsnamma chikmagalur

ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಹಿಲ್ ಶರೀಫ್ ಪಕ್ಷದಿಂದ ಉಚ್ಚಾಟನೆ

Share
Share

ಚಿಕ್ಕಮಗಳೂರು: ಜಿಲ್ಲಾ ಯುವ ಕಾಂಗ್ರೆಸ್ ಘಟಕದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಅಸಭ್ಯ ವರ್ತನೆಯ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಹಿಲ್ ಶರೀಫ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ.

ಈ ಕುರಿತು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಾ. ಕೆ.ಪಿ. ಅಂಶುಮಂತ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ರಾಹಿಲ್ ಶರೀಫ್ ಅವರು ಸಾರ್ವಜನಿಕವಾಗಿ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಅಸಭ್ಯವಾಗಿ ವರ್ತಿಸುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಕೇಳಿಬಂದಿದ್ದವು.

ಈ ವರ್ತನೆಗಳ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವುದು ಪಕ್ಷದ ಶಿಸ್ತಿನ ಉಲ್ಲಂಘನೆಯಾಗಿದೆ ಎಂದು ಪರಿಗಣಿಸಲಾಗಿದೆ. ಇಂತಹ ನಡವಳಿಕೆಗಳಿಂದ ಕಾಂಗ್ರೆಸ್ ಪಕ್ಷ ಮತ್ತು ಸಂಘಟನೆಗೆ ಮುಜುಗರ ಉಂಟಾಗಿರುವ ಕಾರಣ, ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಅಂಶುಮಂತ್ ಆದೇಶಿಸಿದ್ದಾರೆ.

District Youth Congress Vice President Rahil Sharif expelled from the party

Share

Leave a comment

Leave a Reply

Your email address will not be published. Required fields are marked *

Don't Miss

ಲೋಕಾಯುಕ್ತ ಬಲೆಗೆ ತಂಗಲಿ ಗ್ರಾಮ ಪಂಚಾಯಿತಿಯ ಪಿಡಿಒ

ಕಡೂರು : ಸೈಟ್ ಗೆ ಎನ್.ಒ.ಸಿ (NOC) ನೀಡಲು ಲಂಚದ ಬೇಡಿಕೆಯಿಟ್ಟಿದ್ದ ಕಡೂರು ತಾಲೂಕಿನ ತಂಗಲಿ ಗ್ರಾಮ ಪಂಚಾಯಿತಿಯ ಪಿಡಿಒ ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಿಮ್ಮಶೆಟ್ಟಿ ಎಂಬುವವರಿಗೆ ಸೇರಿದ...

ಕಳಪೆ ಕಾಮಗಾರಿ ತಡೆಗಟ್ಟುವಂತೆ ಜಿಲ್ಲಾಡಳಿತಕ್ಕೆ ಒತ್ತಾಯ

ಚಿಕ್ಕಮಗಳೂರು: ಕಡೂರು ತಾಲೂಕಿನ ಐತಿಹಾಸಿಕ ಮದಗದ ಕೆರೆ ಕಾಲುವೆಯ (ಚಾನಲ್) ಕಳಪೆ ಕಾಮಗಾರಿಯನ್ನು ತಡೆಗಟ್ಟುವಂತೆ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ಜಿಲ್ಲಾಡಳಿತವನ್ನು ಒತ್ತಾಯಿಸಿದೆ. ಅಪರ ಜಿಲ್ಲಾಧಿಕಾರಿ ನಾರಾಯಣ ರೆಡ್ಡಿ ಕನಕರೆಡ್ಡಿ...

Related Articles

ಶಾಸಕ ರಾಜೇಗೌಡರ ಕಣ್ಣೀರು ಕಾಂಗ್ರೆಸ್ ನವರ ಆಕ್ರೋಶ-ಬಿ.ಜೆ.ಪಿಯ ತಲ್ಲಣ

ಶೃಂಗೇರಿ: ಶೃಂಗೇರಿ ವಿಧಾನ ಸಭಾ ಕ್ಷೇತ್ರದಲ್ಲಿ ಕಳೆದ ಮೂರು ವರ್ಷಗಳಿಂದ ಶಾಸಕ ರಾಜೇಗೌಡರ ವಿರುದ್ಧ ಬಿಜೆಪಿ...

ದಲಿತ ಸಂಘಟನೆಗಳ ಒಕ್ಕೂಟದ ವಿಭಿನ್ನ ಹೋರಾಟ

ಚಿಕ್ಕಮಗಳೂರು : ನಗರ ಸಮೀಪದ ಗೌಡನಹಳ್ಳಿ ವಾಸಿ ಮಂಜುನಾಥ್ ಯಾನೆ ಹೇಮಂತ್ ಎಂಬುವವರಿಗೆ ಸೇರಿದ ಜೆ.ಸಿ.ಬಿ...

ಅರವಿಂದ್ ಕೇಜ್ರವಾಲ್ ದೋಷಮುಕ್ತ ಪಕ್ಷಕ್ಕೆ ಸಂದ ಜಯ

ಚಿಕ್ಕಮಗಳೂರು : ಕೇಂದ್ರ ಸರ್ಕಾರದ ಪಿತೂರಿಯಿಂದ ದೆಹಲಿಯ ಅಬಕಾರಿ ಹಗರಣದಲ್ಲಿ ಸಿಲುಕಿಸಲಾಗಿದ್ದ ಅರವಿಂದ್ ಕೇಜ್ರವಾಲ್ ಮತ್ತು...

ಬಿಜೆಪಿ ಟಿಕೆಟ್ ಭ್ರಮೆಯಿಂದ ವೆಂಕಟೇಶ್ ಹೊರಬರಲಿ

ಚಿಕ್ಕಮಗಳೂರು : ಶಾಸಕ ಹೆಚ್.ಡಿ ತಮ್ಮಯ್ಯನವರನ್ನು ಪ್ರತಿ ನಿತ್ಯ ವಿರೋಧಿಸಿದರೆ ಮೂಡಿಗೆರೆ ಮೀಸಲು ಕ್ಷೇತ್ರಕ್ಕೆ ಬಿಜೆಪಿ...