Home namma chikmagalur chikamagalur ಬಿಜೆಪಿ ಟಿಕೆಟ್ ಭ್ರಮೆಯಿಂದ ವೆಂಕಟೇಶ್ ಹೊರಬರಲಿ
chikamagalurHomeLatest Newsnamma chikmagalur

ಬಿಜೆಪಿ ಟಿಕೆಟ್ ಭ್ರಮೆಯಿಂದ ವೆಂಕಟೇಶ್ ಹೊರಬರಲಿ

Share
Oplus_16908288
Share

ಚಿಕ್ಕಮಗಳೂರು : ಶಾಸಕ ಹೆಚ್.ಡಿ ತಮ್ಮಯ್ಯನವರನ್ನು ಪ್ರತಿ ನಿತ್ಯ ವಿರೋಧಿಸಿದರೆ ಮೂಡಿಗೆರೆ ಮೀಸಲು ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ನೀಡಬಹುದು ಎಂಬ ಭ್ರಮೆಯಿಂದ ಕುರುವಂಗಿ ವೆಂಕಟೇಶ್ ಅವರು ಹೊರಬರಲಿ ಎಂದು ಕೆ.ಪಿ.ಪಿ ಸಂಶೋಧನಾ ವಿಭಾಗದ ಜಿಲ್ಲಾ ಅಧ್ಯಕ್ಷ ಶಿವಕುಮಾರ್ ಹೇಳಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿಂದು ಕರೆದಿದ್ದ ಸುದ್ದಿ ಗೋಷ್ಟಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರದಲ್ಲಿ ಹೆಚ್.ಡಿ ತಮ್ಮಯ್ಯನವರಿಂದ ದಲಿತರಿಗೆ ರಕ್ಷಣೆ ಇಲ್ಲ ಎಂದು ಸುಳ್ಳು ಆರೋಪ ಮಾಡಿರುವ ಬಿಜೆಪಿ ಎಸ್ಸಿ ಘಟಕದ ಜಿಲ್ಲಾ ಅಧ್ಯಕ್ಷರು ಎಷ್ಟು ಜನ ದಲಿತರಿಗೆ ನ್ಯಾಯ ಒದಗಿಸಿದ್ದಾರೆ ಎಂದು ಬಹಿರಂಗ ಪಡಿಸಲಿ ಎಂದರು.

ತಮ್ಮ ಸ್ವಾರ್ಥಕ್ಕಾಗಿ ಪ್ರತಿ ದಲಿತ ಕಾಲೋನಿಗಳಲ್ಲಿ ಇದ್ದ ಅಂಬೇಡ್ಕರ್ ಯುವಕ ಸಂಘಗಳನ್ನು ಹೊಡೆದು ಆಳುವ ನೀತಿ ಅನುಸರಿಸಿ ದಲಿತ ಕಾಲೋನಿಗಳಲ್ಲಿ ಬ್ರಿಟಿಷ್ ನೀತಿಯಿಂದ ದಲಿತ ಯುವಕರ ಒಗ್ಗಟ್ಟನ್ನು ಹಿಬ್ಬಾಗ ಮಾಡಿದ ಕೀರ್ತಿ ವೆಂಕಟೇಶ್ ಅವರಿಗೆ ಸಲ್ಲುತ್ತದೆ ಎಂದರು.

ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳಲ್ಲಿ ನಕ್ಸಲ್ ಚಟುವಟಿಕೆ ನಡೆಸುತ್ತಾರೆ ಎಂದು ಅವರ ಅಣ್ಣನವರು ಜಿಲ್ಲಾ ಪಂಚಾಯತಿ ಸಭೆಯಲ್ಲಿ ಬಹಿರಂಗ ಹೇಳಿಕೆ ನೀಡಿ ಹಾಸ್ಟೆಲ್‌ನಲ್ಲಿ ಇರುವ ದಲಿತ ವಿದ್ಯಾರ್ಥಿಗಳನ್ನು ಅವಮಾನಿಸಿದಾಗ ಬಿಜೆಪಿ ದಲಿತ ಮುಖಂಡರು ಎಲ್ಲಿ ಅಡಗಿ ಕುಳಿತಿದ್ದರುಎಂದು ಲೇವಡಿ ಮಾಡಿದರು.

ಸಿ.ಟಿರವಿ ದಲಿತಪರ ಹೋರಾಟಗಾರರನ್ನು ಅರ್ಬನ್ ನಕ್ಸಲರು ಎಂದು ಕರೆಯುವ ಮೂಲಕ ಹೋರಾಟಗಾರರನ್ನು ಅಪಹಾಸ್ಯ ಮಾಡಿ ಅವಮಾನಿಸಿದಾಗ ಈ ವೈಟ್ ಕಾಲರ್ ಬಿಜೆಪಿಯ ದಲಿತ ನಾಯಕರು ಯಾಕೆ ಬಾಯಿಗೆ ಬೀಗ ಹಾಕಿಕೊಂಡಿದ್ದರುಎಂದು ಪ್ರಶ್ನಿಸಿದರು.

ದಲಿತರ ಬಗ್ಗೆ ಬಿಜೆಪಿ ಎಸ್ಸಿ ಘಟಕದ ಅಧ್ಯಕ್ಷರಿಗೆ ನಿಜವಾಗಿಯೂ ದಲಿತರ ಬಗ್ಗೆ ಕಾಳಜಿ ಇದ್ದಿದ್ದರೆ, ಬಿಜೆಪಿಯಲ್ಲಿ ಎಸ್ಸಿ ಘಟಕಕ್ಕೆ ಬೇರೆ ದಲಿತ ನಾಯಕರಿಗೆ ಅವಕಾಶ ನೀಡದೆ ಸಾರ್ವಕಾಲಿಕ ಅಧ್ಯಕ್ಷರಾಗಿ ಯಾಕೆ ಉಳಿದಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಲಿ.ಎಂದು ಸವಾಲೆಸೆದರು.

ಇನ್ನಾದರೂ ಈ ರೀತಿಯ ದುಷ್ಟ ರಾಜಕಾರಣವನ್ನು ಬಿಟ್ಟು ಸಮಾಜದ ಒಳಿತಿಗಾಗಿ, ಸಾಧ್ಯವಾದರೆ ಚಿಕ್ಕಮಗಳೂರಿನ ಅಭಿವೃದ್ಧಿಗೆ ಆರೋಗ್ಯಕರ ಸಲಹೆಗಳನ್ನು ನೀಡಲಿ ಈ ರೀತಿಯ ವ್ಯರ್ಥ ಕೆಲಸಗಳನ್ನು ಬಿಟ್ಟು ಉತ್ತಮ ನಾಯಕರಾಗುವ ಕಡೆ ಗಮನ ಹರಿಸಲಿ ಎಂದರು.

ಗೋಷ್ಟಿಯಲ್ಲಿ ಗ್ಯಾರಂಟಿಸಮಿತಿ ತಾಲ್ಲೋಕು ಅಧ್ಯಕ್ಷಮಲ್ಲೇಶ್ ಸ್ವಾಮಿ,ಯುವಘಟಕದ ಅಧ್ಯಕ್ಷ ಲಾಕೇಶ್,ಲಕ್ಯಾಸಂತೋಷ್ ಕುರುವಂಗಿ ರಾಜೇಶ್ ಇದ್ದರು.

Let Venkatesh come out of the illusion of BJP ticket.

Share

Leave a comment

Leave a Reply

Your email address will not be published. Required fields are marked *

Don't Miss

ಲೋಕಾಯುಕ್ತ ಬಲೆಗೆ ತಂಗಲಿ ಗ್ರಾಮ ಪಂಚಾಯಿತಿಯ ಪಿಡಿಒ

ಕಡೂರು : ಸೈಟ್ ಗೆ ಎನ್.ಒ.ಸಿ (NOC) ನೀಡಲು ಲಂಚದ ಬೇಡಿಕೆಯಿಟ್ಟಿದ್ದ ಕಡೂರು ತಾಲೂಕಿನ ತಂಗಲಿ ಗ್ರಾಮ ಪಂಚಾಯಿತಿಯ ಪಿಡಿಒ ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಿಮ್ಮಶೆಟ್ಟಿ ಎಂಬುವವರಿಗೆ ಸೇರಿದ...

ಕಳಪೆ ಕಾಮಗಾರಿ ತಡೆಗಟ್ಟುವಂತೆ ಜಿಲ್ಲಾಡಳಿತಕ್ಕೆ ಒತ್ತಾಯ

ಚಿಕ್ಕಮಗಳೂರು: ಕಡೂರು ತಾಲೂಕಿನ ಐತಿಹಾಸಿಕ ಮದಗದ ಕೆರೆ ಕಾಲುವೆಯ (ಚಾನಲ್) ಕಳಪೆ ಕಾಮಗಾರಿಯನ್ನು ತಡೆಗಟ್ಟುವಂತೆ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ಜಿಲ್ಲಾಡಳಿತವನ್ನು ಒತ್ತಾಯಿಸಿದೆ. ಅಪರ ಜಿಲ್ಲಾಧಿಕಾರಿ ನಾರಾಯಣ ರೆಡ್ಡಿ ಕನಕರೆಡ್ಡಿ...

Related Articles

ಶಾಸಕ ರಾಜೇಗೌಡರ ಕಣ್ಣೀರು ಕಾಂಗ್ರೆಸ್ ನವರ ಆಕ್ರೋಶ-ಬಿ.ಜೆ.ಪಿಯ ತಲ್ಲಣ

ಶೃಂಗೇರಿ: ಶೃಂಗೇರಿ ವಿಧಾನ ಸಭಾ ಕ್ಷೇತ್ರದಲ್ಲಿ ಕಳೆದ ಮೂರು ವರ್ಷಗಳಿಂದ ಶಾಸಕ ರಾಜೇಗೌಡರ ವಿರುದ್ಧ ಬಿಜೆಪಿ...

ದಲಿತ ಸಂಘಟನೆಗಳ ಒಕ್ಕೂಟದ ವಿಭಿನ್ನ ಹೋರಾಟ

ಚಿಕ್ಕಮಗಳೂರು : ನಗರ ಸಮೀಪದ ಗೌಡನಹಳ್ಳಿ ವಾಸಿ ಮಂಜುನಾಥ್ ಯಾನೆ ಹೇಮಂತ್ ಎಂಬುವವರಿಗೆ ಸೇರಿದ ಜೆ.ಸಿ.ಬಿ...

ಅರವಿಂದ್ ಕೇಜ್ರವಾಲ್ ದೋಷಮುಕ್ತ ಪಕ್ಷಕ್ಕೆ ಸಂದ ಜಯ

ಚಿಕ್ಕಮಗಳೂರು : ಕೇಂದ್ರ ಸರ್ಕಾರದ ಪಿತೂರಿಯಿಂದ ದೆಹಲಿಯ ಅಬಕಾರಿ ಹಗರಣದಲ್ಲಿ ಸಿಲುಕಿಸಲಾಗಿದ್ದ ಅರವಿಂದ್ ಕೇಜ್ರವಾಲ್ ಮತ್ತು...

ಕೈವಾರ ತಾತಯ್ಯ ವಿಶ್ವ ಶ್ರೇಷ್ಠ ಸಂತ

ಚಿಕ್ಕಮಗಳೂರು: ಮಹಾನ್ ಕಾಲಜ್ಞಾನಿ ಮತ್ತು ತತ್ವಜ್ಞಾನಿ ಶ್ರೀ ಯೋಗಿ ನಾರೇಯಣ ಯತೀಂದ್ರರು (ಕೈವಾರ ತಾತಯ್ಯ) ಕೇವಲ...