Home namma chikmagalur chikamagalur ಎಚ್. ಡಿ. ಎಫ್. ಸಿ ಬ್ಯಾಂಕ್ ವಿರುದ್ಧ ಅಣಕು ಶವಯಾತ್ರೆ
chikamagalurHomeLatest Newsnamma chikmagalur

ಎಚ್. ಡಿ. ಎಫ್. ಸಿ ಬ್ಯಾಂಕ್ ವಿರುದ್ಧ ಅಣಕು ಶವಯಾತ್ರೆ

Share
???????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Share

ಚಿಕ್ಕಮಗಳೂರು: ಬಡರೈತನ ಆರ್ಥಿಕ ದಿವಾಳಿಗೆ ಕಾರಣವಾಗಿರುವ ಎಚ್.ಡಿ.ಎಫ್ ಬ್ಯಾಂಕ್  ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ಪ್ರತಿಕೃತಿಯೊಂದಿಗೆ ಅಣಕು ಶವಯಾತ್ರೆಯೊಂದಿಗೆ ಮೆರವಣಿಗೆಯಲ್ಲಿ ತೆರಳುತ್ತಿದ್ದ ದಲಿತ ಸಂಘರ್ಷ ಸಮಿತಿ ಒಕ್ಕೂಟದ ಪದಾಧಿಕಾರಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಬಳಿಕ ಬಿಡುಗಡೆಗೊಳಿಸಿದರು.

ಹನುಮಂತಪ್ಪ ವೃತ್ತದಿಂದ ಅಣಕುಶವಯಾತ್ರೆಯೊಂದಿಗೆ ಮೆರವಣಿಗೆ ಆರಂಭಿಸಿ ಮಹಾತ್ಮಗಾಂಧಿ ರಸ್ತೆಯಲ್ಲಿ ತೆರಳಲು ಮುಂದಾಗುತ್ತಿದ್ದಂತೆ ನ್ಯಾಯಾಲದ ತಡೆಯಾಜ್ಞೆ ಇರುವುದರಿಂದ ಮೆರವಣಿಗೆ ನಡೆಸಲು ಸಾಧ್ಯವಿಲ್ಲವೆಂದು ತಿಳಿಸಿದ ಪೊಲೀಸ್ ಅಧಿಕಾರಿಗಳು ದಲಿತ ಸಂಘರ್ಷ ಸಮಿತಿ ರಾಜ್ಯ ಸಮಿತಿ ಸದಸ್ಯ ಮರ್ಲೆ ಅಣ್ಣಯ್ಯ, ರಾಜ್ಯ ಸಂಘಟನಾ ಸಂಚಾಲಕ ದಂಟರಮಕ್ಕಿ ಶ್ರೀನಿವಾಸ, ಜಿಲ್ಲಾ ಸಂಚಾಲಕ ಬಾಚಿಗನಹಳ್ಳಿ ಮಂಜಯ್ಯ,ಭೀಮಯ್ಯ, ಪುರದ ಚಂದ್ರಶೇಖರ್,ಕೃಷ್ಣಮೂರ್ತಿ ಸೇರಿದಂತೆ ಹಲವು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಬಳಿಕ ಬಿಡುಗಡೆಗೊಳಿಸಿದರು.

ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರೈತ ಕುಟುಂಬಕ್ಕೆ ನ್ಯಾಯದೊರಕಿಸಿಕೊಡುವಂತೆ ಬ್ಯಾಂಕಿನ ಸಮೀಪ ಕಳೆದ ಒಂದು ತಿಂಗಳಿನಿಂದ ಸಂಘಟನೆ ಮುಖಂಡರು ಹಗಲು-ರಾತ್ರಿ ಧರಣ ನಡೆಸುತ್ತಿದ್ದಾರೆ. ಈ ಸ್ಥಳಕ್ಕೆ ಬ್ಯಾಂಕಿನ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ಪ್ರತಿಕೃತಿಯನ್ನು ತೆಗೆದಕೊಂಡು ಹೋಗಿ ಧರಣ ಮುಂದುವರೆಸಲು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಮುಖಂಡರು ಮುಂದಾಗುತ್ತಿದ್ದಂತೆ ಪೊಲೀಸರು ಮೆರವಣಿಗೆಗೆ ಅವಕಾಶನೀಡಲು ಪ್ರತಿಭಟನಾ ನಿರತರು ಮತ್ತು ಪ್ರತಿಕೃತಿಯನ್ನು ವಶಕ್ಕೆ ತೆಗೆದುಕೊಂಡರು.

ಎರಡನೇ ಹಂತವಾಗಿ ಜಿಲ್ಲಾ ಉಸ್ತುವಾರಿ ಸಚಿವ ಕಚೇರಿ, ಚಿಕ್ಕಮಗಳೂರು ಶಾಸಕರ ಮನೆ ಮುಂದೆ, ಮೂಡಿಗೆರೆ ಶಾಸಕಿಯ ಮನೆಮುಂದೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದರೊಂದಿಗೆ ತಮಟೆ ಚಳವಳಿ, ಕರಪತ್ರ ಚಳವಳಿ, ಪಂಜಿನ ಮೆರವಣಿಗೆ, ಅರೆಬೆತ್ತಲೆ ಚಳವಳಿ ನಡೆಸಲು ಒಕ್ಕೂಟದ ಮುಖಂಡರು ತೀರ್ಮಾನ ಕೈಗೊಂಡಿದ್ದಾರೆ.

ಉತ್ತಮ ರೀತಿಯ ಬದುಕುಕಟ್ಟಿಕೊಳ್ಳುವ ಕನಸಿನೊಂದಿಗೆ ಜೆಸಿಬಿ ಯಂತ್ರ ಖರೀದಿಸಲು ಬ್ಯಾಂಕ್‌ನಲ್ಲಿ ಸಾಲಮಾಡಿದ್ದು, ೭ ಲಕ್ಷ ಮುಂಗಡ ಹಣವನ್ನು ಬ್ಯಾಂಕಿಗೆ ಪಾವತಿಸಲಾಗಿದೆ. ೧೭ ತಿಂಗಳ ಕಂತು ಹಣ ೧೮ ಲಕ್ಷ ನೀಡಲಾಗಿದೆ.ಕೇವಲ ೨ ತಿಂಗಳ ಕಂತುಹಣ ನೀಡದಿರುವುದಕ್ಕೆ ನೋಟೀಸ್‌ಕೊಡದೆ, ಜೆಸಿಬಿ ಯಂತ್ರವನ್ನು ಸೀಜ್‌ಮಾಡಲಾಗಿದೆ. ಸಾಲಮರುಪಾವತಿಗೆ ಮುಂದಾದರೂ ವಶಪಡಿಸಿಕೊಂಡಿದ್ದ ಜೆಸಿಬಿ ಯಂತ್ರವನ್ನು ನೀಡದೆ ಹರಾಜುಹಾಕಲಾಗಿದೆ ಎಂದು ಪ್ರತಿಭಟನಾ ನಿರತರು ಆರೋಪಿಸಿದರು.

Mock funeral procession against HDFC Bank

Share

Leave a comment

Leave a Reply

Your email address will not be published. Required fields are marked *

Don't Miss

ಕಿಸಿಂಗ್, ಕಿಸಿಂಗ್ ರಾಮಚಂದ್ರ -ಸ್ಮಗ್ಲಿಂಗ್, ಸ್ಮಗ್ಲಿಂಗ್ ರನ್ಯಾ ರಾವ್‌

ಅಪ್ಪ ರಾಮಚಂದ್ರ ರಾವ್ ಗೆ ಚಿನ್ನವೀಡು ಕಾಟ,ಮಲ ಮಗಳು ರನ್ಯಾ ರಾವ್ ಗೆ ಚಿನ್ನ ಕಳವಿನ ವ್ಯಾಮೋಹ .ಅಪ್ಪ ಕಡ್ಡಾಯ ರಜೆಯ ಮೇಲೆ ಮನೆ ಸೇರಿ ಗೃಹ ಮಂತ್ರಿ ಪರಮೇಶ್ವರ್ ಕೃಪೆಗಾಗಿ...

ಪ್ರವಾಸ ಮುಂದೂಡಲು ಜಿಲ್ಲಾಡಳಿತ ಮನವಿ

ಚಿಕ್ಕಮಗಳೂರು:  ಐ.ಡಿ. ಪೀಠ ಹಾಗೂ ಸುತ್ತಮುತ್ತಲಿನ ತಾಲ್ಲೂಕಿನ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ ಹಾಗೂ ಗಾಳಿಕೆರೆಗೆ ಮಾರ್ಚ್ ೪ ರಿಂದ ೬ರವರೆಗೆ ಪ್ರವಾಸಿಗರು ತಮ್ಮ ಪ್ರವಾಸವನ್ನು ಮುಂದೂಡುವುದು ಸೂಕ್ತ ಎಂದು...

Related Articles

ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್ ಸರ್ವಕಾಲಿಕ ದಾಖಲೆಯ ಬಜೆಟ್ ಆಗಲಿದೆ

ಚಿಕ್ಕಮಗಳೂರು: ಸಿದ್ದರಾಮಯ್ಯನವರು ಮಂಡಿಸಲಿರುವ ಬಜೆಟ್ ಸರ್ವಕಾಲಿಕ ದಾಖಲೆಯ ಬಜೆಟ್ ಆಗಲಿದೆ ಎಂದು ವಿಧಾನ ಪರಿಷತ್ ಸದಸ್ಯ...

ಕೊಪ್ಪ ಪಟ್ಟಣದ ಮನೆಯಲ್ಲಿ ಚಿನ್ನಾಭರಣ ಕಳ್ಳತನ

ಕೊಪ್ಪ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಕೈಚಳಕ ತೋರಿಸುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ...

ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಚೆಕ್ ಬೌನ್ಸ್ ಕೇಸ್ ನಲ್ಲಿ ಶಿಕ್ಷೆ.?

ಮೂಡಿಗೆರೆ: ಮೂಡಿಗೆರೆ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಚೆಕ್ ಬೌನ್ಸ್ ದೂರಿನಲ್ಲಿ ಬೆಂಗಳೂರಿನ ಕೋರ್ಟ್ ನಲ್ಲಿ ಶಿಕ್ಷೆ...

ವಿವಿಧ ಬೇಡಿಕೆಗಳ ಈಡೇರಿಕೆಗೆ ಅನಿರ್ಧಿಷ್ಟ ಮುಷ್ಕರ

ಚಿಕ್ಕಮಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...