ಚಿಕ್ಕಮಗಳೂರು: ಸಿದ್ದರಾಮಯ್ಯನವರು ಮಂಡಿಸಲಿರುವ ಬಜೆಟ್ ಸರ್ವಕಾಲಿಕ ದಾಖಲೆಯ ಬಜೆಟ್ ಆಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಭವಿಷ್ಯ ನುಡಿದರು
ಸುದ್ದಿಗೋಷ್ಠಿಯಲ್ಲಿ ಮಾತನಾಡಿ ರಾಜ್ಯ ಸರ್ಕಾರದ ಆರ್ಥಿಕ ನೀತಿ ಹಾಗೂ ಮುಂಬರುವ ಬಜೆಟ್ ಕುರಿತು ತೀವ್ರ ವಾಗ್ದಾಳಿ ನಡೆಸಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಲಿರುವ ಬಜೆಟ್ ಸರ್ವಕಾಲಿಕ ದಾಖಲೆಯ ಬಜೆಟ್ ಆಗಲಿದೆ ಎಂದು ಭವಿಷ್ಯ ನುಡಿದಿದರು
ಕಳೆದ ಮೂರು ವರ್ಷಗಳಿಂದ ಗ್ಯಾರಂಟಿ ಯೋಜನೆಗಳಿಗಾಗಿ ಎಸ್ಸಿ-ಎಸ್ಟಿ ಸಮುದಾಯದ ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ವರ್ಷವೂ ಕೂಡ ಸುಮಾರು 15 ಸಾವಿರ ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ಅನುಮಾನವಿದ್ದು, ಒಂದು ವೇಳೆ ಹಾಗೆ ಮಾಡಿದರೆ ಒಟ್ಟು ಮೊತ್ತ 54 ಸಾವಿರ ಕೋಟಿಗೆ ತಲುಪಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಹಿಂದಿನ ಅನ್ಯಾಯಗಳನ್ನು ಸರಿಪಡಿಸಿ, ಈ ಬಾರಿ ಹಣವನ್ನು ಬೇರೆಡೆಗೆ ಬಳಸಿಕೊಳ್ಳುವುದಿಲ್ಲ ಎಂದು ಬಜೆಟ್ನಲ್ಲಿ ಅಧಿಕೃತವಾಗಿ ಘೋಷಿಸಬೇಕು ಹಾಗೂ ಕೂಡಲೇ ಬಾಕಿ ಇರುವ 39 ಸಾವಿರ ಕೋಟಿ ರೂಪಾಯಿಗಳನ್ನು ವಾಪಸ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದ ಅವರು, ಪ್ರಸ್ತುತ ರಾಜ್ಯದ ಒಟ್ಟು ಸಾಲ 8 ಲಕ್ಷ 14 ಸಾವಿರ ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ ಮತ್ತು ಕಳೆದ ವರ್ಷವೊಂದರಲ್ಲೇ 1 ಲಕ್ಷದ 14 ಸಾವಿರ ಕೋಟಿ ಸಾಲ ಮಾಡಲಾಗಿದೆ ಎಂದು ತಿಳಿಸಿದರು. ಅತಿ ಹೆಚ್ಚು ಬಜೆಟ್ ಮಂಡಿಸಿದ ಹಾಗೂ ಅತಿ ಹೆಚ್ಚು ಸಾಲ ಮಾಡಿದ ಖ್ಯಾತಿ ಸಿದ್ದರಾಮಯ್ಯನವರ ಹೆಸರಿನಲ್ಲಿದೆ ಎಂದು ವ್ಯಂಗ್ಯವಾಡಿದರು.
ರವಿ, ಇದು ‘ಚಾಣಾಕ್ಯ ನೀತಿ’ಯಲ್ಲ ಬದಲಾಗಿ ಬೆಲೆ ಏರಿಕೆ ಮಾಡಿ ಖಜಾನೆ ತುಂಬಿಸುವ ಹಾಗೂ ಸಾಲ ಮಾಡಿಯಾದರೂ ಮಜಾ ಮಾಡು ಎನ್ನುವ ‘ಚಾರ್ವಾಕ ನೀತಿ’ ಎಂದು ಟೀಕಿಸಿದ್ದಾರೆ. 2025 26ನೇ ಸಾಲಿನಲ್ಲಿ ಬಡ್ಡಿ ಕಟ್ಟುವುದಕ್ಕಾಗಿಯೇ 48 ಸಾವಿರ ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದ್ದು, ಇಷ್ಟೆಲ್ಲ ಸಾಲದ ಹೊರತಾಗಿಯೂ ಔಷಧಿ ಖರೀದಿ, ನಿಗಮ ಮಂಡಳಿಗಳಿಗೆ ಅನುದಾನವಿಲ್ಲ ಮತ್ತು ಗುತ್ತಿಗೆದಾರರಿಗೆ 38 ಸಾವಿರ ಕೋಟಿ ರೂಪಾಯಿ ಬಾಕಿ ಉಳಿಸಿಕೊಳ್ಳಲಾಗಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.
ಅಗತ್ಯ ವಸ್ತುಗಳ ಬೆಲೆ ಏರಿಕೆಯಾದರೂ ಸರ್ಕಾರದ ಖಜಾನೆ ತುಂಬದಿರುವುದು ಹಣ ಸೋರಿಕೆಯಾಗುತ್ತಿರುವ ಅನುಮಾನ ಮೂಡಿಸುತ್ತಿದೆ ಎಂದ ಅವರು, ಕೆ.ಪಿ.ಎಸ್.ಸಿ. ಹಗರಣವನ್ನು ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸುವುದರ ಜೊತೆಗೆ, ದಾಖಲೆ ಬಜೆಟ್ ಮಂಡಿಸಲಿರುವ ಸಿಎಂಗೆ ಶುಭ ಹಾರೈಸಿ ಅನ್ಯಾಯಗಳನ್ನು ಸರಿಪಡಿಸುವಂತೆ ಮನವಿ ಮಾಡಿದರು.
Siddaramaiah’s budget to be presented will be an all-time record budget
Leave a comment