ಚಿಕ್ಕಮಗಳೂರು: ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಇಂದು ದಾಖಲೆಯ ೧೭ ನೇ ಬಜೆಟ್ ಮಂಡಿಸಿದ್ದು ಸರ್ವವ್ಯಾಪಿ ಸರ್ವಸ್ಪರ್ಶಿಯಾಗಿದೆ. ಕೃಷಿ, ಗ್ರಾಮೀಣಾಭಿವೃದ್ಧಿ, ಪ್ರವಾಸೋದಮ ಸೇರಿದಂತೆ ಎಲ್ಲಾ ಕ್ಷೇತ್ರಗಳ ಮೂಲಭೂತ ಸೌಕರ್ಯಕ್ಕೆ ಹಣ ಒದಗಿಸಲಾಗಿದೆ. ಆಡಂಬರದ ಹೇಳಿಕೆಗಳಿಗೆ ಸೀಮಿತವಾಗದೆ ಕಾರ್ಯರೂಪಕ್ಕೆ ತರುವಂತಹ ಬಜೆಟ್ ಮಂಡಿಸಿದ್ದಾರೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ತಿಳಿಸಿದ್ದಾರೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು ಜಿಲ್ಲೆಗೆ ಪ್ರಮುಖವಾಗಿ ಸಾರ್ವಜನಿಕ ಸಹಭಾಗಿತ್ವದೊಂದಿಗೆ ಚಿಕ್ಕಮಗಳೂರು ಜಿಲ್ಲೆಯ ಪ್ರವಾಸೋದಮ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಮುಳ್ಳಯ್ಯನಗಿರಿ ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ರೋಪ್ ವೇ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.
ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ವತಿಯಿಂದ ಚಿಕ್ಕಮಗಳೂರು ಬೇಲೂರು ಹಾಗೂ ಬೇಲೂರು-ಹಾಸನ ರೈಲ್ವೆ ಮಾರ್ಗದ ಕಾಮಗಾರಿಗಳ ಭೂಸ್ವಾಧೀನದ ಸಂಪೂರ್ಣ ವೆಚ್ಚವನ್ನು ಹಾಗೂ ಶೇ.೫೦ರಷ್ಟು ನಿರ್ಮಾಣ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ. ಸಾರಿಗೆ ಇಲಾಖೆ ವತಿಯಿಂದ ಚಿಕ್ಕಮಗಳೂರಿನಲ್ಲಿ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ನಿರ್ಮಾಣಕ್ಕೆ ರೂ.೧೨ ಕೋಟಿ ಒದಗಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿರುವ ಕಾರ್ಮಿಕ ರಾಜ್ಯ ವಿಮಾ ಚಿಕಿತ್ಸಾಲಯದ ಉನ್ನತೀಕರಣ ಹಾಗೂ ಜಿಲ್ಲೆಯ ಕೆರೆಗಳ ಏರಿ ಹಾಗೂ ಚಾನಲ್ ಪುನಶ್ವೇತನ ಕಾಮಗಾರಿ ಹಾಗೂ ಕಡೂರು ತಾಲ್ಲೂಕಿನ ೨೫ ಕೆರೆಗಳ ಕೆರೆ ತುಂಬಿಸುವ ಯೋಜನೆಗೆ ಬಜೆಟ್ನಲ್ಲಿ ಅನುದಾನ ಒದಗಿಸಲಾಗಿದೆ. ಒಟ್ಟಿನಲ್ಲಿ ಮುಖ್ಯಮಂತ್ರಿಗಳು ಸರ್ವ ವರ್ಗದ ಜನರಿಗೂ ತಲುಪಿಸುವ ಜನಪರ ಹಾಗೂ ರೈತಪರ ಬಜೆಟ್ ಮಂಡಿಸಿದ್ದಾರೆಂದು ಅವರು ತಿಳಿಸಿದ್ದಾರೆ.
An all-encompassing budget from the Chief Minister
Leave a comment