Home namma chikmagalur chikamagalur ಅಪರಿಚಿತ ಲಿಂಕ್ ಕ್ಲಿಕ್ಕಿಸಿದ್ದಕ್ಕೆ 3 ಲಕ್ಷ ರೂ ವಂಚನೆ
chikamagalurCrime NewsHomeLatest Newsnamma chikmagalur

ಅಪರಿಚಿತ ಲಿಂಕ್ ಕ್ಲಿಕ್ಕಿಸಿದ್ದಕ್ಕೆ 3 ಲಕ್ಷ ರೂ ವಂಚನೆ

Share
Share

ಚಿಕ್ಕಮಗಳೂರು: ಗೂಗಲ್‌ನಲ್ಲಿ ಸಿಗುವ ಅಪರಿಚಿತ ವೆಬ್‌ಸೈಟ್‌ಗಳು ಮತ್ತು ಫೋನ್ ನಂಬರ್‌ಗಳನ್ನು ಕುರುಡಾಗಿ ನಂಬಿದರೆ ಎಂತಹ ಅಪಾಯ ಕಾಯುತ್ತಿರುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.

ಉಜ್ಜಯಿನಿ ಮಹಾಕಾಳಿ ದರ್ಶನಕ್ಕೆ ತೆರಳಲು ಆನ್ನೈನ್ ನಲ್ಲಿ ರೂಮ್ ಬುಕ್ ಮಾಡಲು ಅಪರಿಚಿತ ಲಿಂಕ್ ಕ್ಲಿಕ್ಕಿಸಿ ಸೈಬರ್ ವಂಚಕರ ಜಾಲಕ್ಕೆ ಸಿಲುಕಿ ಸಂದೀಪ್ ಎಂಬುವರು ಬರೋಬ್ಬರಿ 3,09,855 ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ.

ಸಂದೀಪ್ ಅವರು ಗೂಗಲ್‌ನಲ್ಲಿ ‘Mahakal Bhakta Niwas Ujjain’ ಎಂಬ ವೆಬ್‌ಸೈಟ್ ಹುಡುಕಿ ಅದರಲ್ಲಿನ ಮೊಬೈಲ್ ಸಂಖ್ಯೆಗೆ ಕರೆ ಮಾಡಿದ್ದಾರೆ. ಮೊದಲು ಒಂದು ರೂಮ್ ಬುಕ್ ಮಾಡಲು 4,095 ರೂ.ಗಳನ್ನು ವರ್ಗಾಯಿಸಿದ್ದಾರೆ.

ಆದರೆ, ಹಣ ತಲುಪಿಲ್ಲ ಅಥವಾ ‘ಹೋಲ್ಡ್’ ಆಗಿದೆ ಎಂದು ನಂಬಿಸಿದ ವಂಚಕರು, ಹಣ ವಾಪಸ್ ಪಡೆಯಬೇಕಾದರೆ ಮತ್ತೆ ಹಣ ಹಾಕಬೇಕು ಎಂದು ಪದೇ ಪದೇ ಹೇಳಿದ್ದಾರೆ. ಅವರ ಮಾತನ್ನು ನಂಬಿದ ಸಂದೀಪ್. ಹಂತಹಂತವಾಗಿ ವಿವಿಧ ಬ್ಯಾಂಕ್ ಖಾತೆಗಳಿಂದ ಒಟ್ಟು 3 ಲಕ್ಷಕ್ಕೂ ಅಧಿಕ ಹಣವನ್ನು ವರ್ಗಾಯಿಸಿದ್ದಾರೆ.

ಕೊನೆಗೆ ರೂಮ್ ಕೂಡ ಬುಕ್ ಆಗದೆ ಮತ್ತು ಹಣವೂ ವಾಪಸ್ ಬರದೇ ಇದ್ದಾಗ ತಮಗೆ ಮೋಸ ಹೋಗಿರುವುದು ಅರಿವಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಪ್ರವಾಸಕ್ಕೆ ಹೋಗುವ ಮುನ್ನ ಅಧಿಕೃತ ವೆಬ್‌ಸೈಟ್‌ಗಳನ್ನು ಮಾತ್ರ ಬಳಸಿ ಮತ್ತು ಇಂತಹ ಆನ್‌ಲೈನ್ ವಂಚನೆಗಳ ಬಗ್ಗೆ ಜಾಗರೂಕರಾಗಿರಿ ಎಂದು ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Rs 3 lakh fraud for clicking on an unknown link

Share

Leave a comment

Leave a Reply

Your email address will not be published. Required fields are marked *

Don't Miss

35 ಲಕ್ಷ ರೂ.ವೆಚ್ಚದ ಗ್ರಾಮಪಂಚಾಯಿತಿ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ

ಚಿಕ್ಕಮಗಳೂರು: ಗ್ರಾಮಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಗಳು ತಮಗೆ ದೊರಕಿದ ಅವಕಾಶವನ್ನು ಜನರ ಕಲ್ಯಾಣಕ್ಕಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು. ತಾಲೂಕಿನ ಬೆಳವಾಡಿಯಲ್ಲಿ ೩೫ ಲಕ್ಷ ರೂ.ವೆಚ್ಚದ ಗ್ರಾಮಪಂಚಾಯಿತಿ...

ಮಾನವಧರ್ಮಕ್ಕೆ ಜಯವಾಗಲಿ- ಧರ್ಮದಿಂದಲೇ ವಿಶ್ವಕ್ಕೆ ಶಾಂತಿ

ಬಾಳೆಹೊನ್ನೂರು: “ಧರ್ಮ,‌ ಪೂಜೆ, ಭಕ್ತಿ ಇವು ಪ್ರದರ್ಶನಕ್ಕೆ ಇರುವಂತಹ ಸಂಗತಿಗಳಲ್ಲ. ಇವು ಮನುಷ್ಯನ ಆತ್ಮವಿಶ್ವಾಸವನ್ನು ಹೆಚ್ಚಿಸುವ ಸಲುವಾಗಿ ಇರುವ ಸಾಧನಗಳು. ನನ್ನ ಧರ್ಮ ಸರಿ, ನಿನ್ನ ಧರ್ಮ ತಪ್ಪು ಎನ್ನುವ ಕಲ್ಪನೆ ಎಲ್ಲಿಯೂ...

Related Articles

ಕಾಂಗ್ರೆಸ್ ಮುಖಂಡ ರಾಹಿಲ್ ಶರೀಫ್‌ ಬಂಧನ

ಚಿಕ್ಕಮಗಳೂರು: ನಗರದ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ ಕಾಂಗ್ರೆಸ್ ಮುಖಂಡೆ ಚೇತನಾ ಅವರ ಮೇಲೆ ಲಾಂಗ್‌ನಿಂದ ಹಲ್ಲೆ...

ಚಿಕ್ಕಮಗಳೂರು ಜಿಲ್ಲೆಗೆ “ಬ್ಯಾಡ್” ಬಜೆಟ್ !

ಚಿಕ್ಕಮಗಳೂರು: ಜಿಲ್ಲೆಯ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ “ಬ್ಯಾಡ್” ಬಜೆಟ್ ನೀಡಿದ್ದಾರೆ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ....

ಪ್ರವೀಣ್ ಎಚ್.ಟಿ. ಯುಪಿಎಸ್‌ಸಿ ಪರೀಕ್ಷೆಯಲ್ಲಿ 720ನೇ ರ್‍ಯಾಂಕ್

ಚಿಕ್ಕಮಗಳೂರು: ಕಡೂರು ತಾಲೂಕಿನ ಹುಲಿಕೆರೆ ಗ್ರಾಮದ ಯುವ ಪ್ರತಿಭೆ ಪ್ರವೀಣ್ ಎಚ್.ಟಿ. ಈ ಸಾಲಿನ ಯುಪಿಎಸ್‌ಸಿ...

ತೇಗೂರು ಸರ್ಕಾರಿ ಶಾಲೆಯ ಶತಮಾನೋತ್ಸವ

ಚಿಕ್ಕಮಗಳೂರು:  ನಮ್ಮ ಜೀವನದಲ್ಲಿ ನಾವು ಗಳಿಸುವ ಸಂಪತ್ತು ಶಾಶ್ವತವಲ್ಲ, ಆದರೆ ನಾವು ಪಡೆಯುವ ಶಿಕ್ಷಣ ಮತ್ತು...