Home namma chikmagalur chikamagalur ಕಾಂಗ್ರೆಸ್ ಮುಖಂಡ ರಾಹಿಲ್ ಶರೀಫ್‌ ಬಂಧನ
chikamagalurCrime NewsHomeLatest Newsnamma chikmagalur

ಕಾಂಗ್ರೆಸ್ ಮುಖಂಡ ರಾಹಿಲ್ ಶರೀಫ್‌ ಬಂಧನ

Share
Share

ಚಿಕ್ಕಮಗಳೂರು: ನಗರದ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ ಕಾಂಗ್ರೆಸ್ ಮುಖಂಡೆ ಚೇತನಾ ಅವರ ಮೇಲೆ ಲಾಂಗ್‌ನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಇದೀಗ ದೊಡ್ಡ ತಿರುವು ಸಿಕ್ಕಿದೆ. ಘಟನೆ ನಡೆದ ನಂತರ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ, ಕಾಂಗ್ರೆಸ್ ಮುಖಂಡ ರಾಹಿಲ್ ಶರೀಫ್‌ನನ್ನು ಜಿಲ್ಲಾ ಪೊಲೀಸರು ಭಾರತ ಮತ್ತು ನೇಪಾಳದ ಗಡಿ ಭಾಗದಲ್ಲಿ ಯಶಸ್ವಿಯಾಗಿ ಬಂಧಿಸಿದ್ದಾರೆ.

ಕಳೆದ ವಾರ ಚೇತನಾ ಅವರ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದ ರಾಹಿಲ್, ಕೃತ್ಯದ ಬಳಿಕ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿದ್ದನು. ಆರೋಪಿಯ ಪತ್ತೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರು ವಿಶೇಷ ತಂಡವನ್ನು ರಚಿಸಿದ್ದು, ಇನ್ಸ್‌ಪೆಕ್ಟರ್ ಅಭಯಪ್ರಕಾಶ್ ನೇತೃತ್ವದ ತಂಡವು ಹಗಲಿರುಳು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಹೆಡೆಮುರಿ ಕಟ್ಟಿದೆ.

ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ರಾಹಿಲ್ ಶರೀಫ್‌ನನ್ನು ಚಿಕ್ಕಮಗಳೂರಿಗೆ ಕರೆತರಲಾಗುತ್ತಿದ್ದು, ಹಲ್ಲೆಗೆ ನಿಖರ ಕಾರಣವೇನು ಎಂಬ ಬಗ್ಗೆ ಹೆಚ್ಚಿನ ವಿಚಾರಣೆ ನಡೆಯಲಿದೆ. ಈ ಬಂಧನದ ಮೂಲಕ ವಾರದಿಂದ ನಡೆಯುತ್ತಿದ್ದ ಹೈಡ್ರಾಮಕ್ಕೆ ಪೊಲೀಸರು ಅಂತ್ಯ ಹಾಡಿದ್ದಾರೆ.

Congress leader Raheel Sharif arrested

Share

Leave a comment

Leave a Reply

Your email address will not be published. Required fields are marked *

Don't Miss

35 ಲಕ್ಷ ರೂ.ವೆಚ್ಚದ ಗ್ರಾಮಪಂಚಾಯಿತಿ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ

ಚಿಕ್ಕಮಗಳೂರು: ಗ್ರಾಮಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಗಳು ತಮಗೆ ದೊರಕಿದ ಅವಕಾಶವನ್ನು ಜನರ ಕಲ್ಯಾಣಕ್ಕಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು. ತಾಲೂಕಿನ ಬೆಳವಾಡಿಯಲ್ಲಿ ೩೫ ಲಕ್ಷ ರೂ.ವೆಚ್ಚದ ಗ್ರಾಮಪಂಚಾಯಿತಿ...

ಮಾನವಧರ್ಮಕ್ಕೆ ಜಯವಾಗಲಿ- ಧರ್ಮದಿಂದಲೇ ವಿಶ್ವಕ್ಕೆ ಶಾಂತಿ

ಬಾಳೆಹೊನ್ನೂರು: “ಧರ್ಮ,‌ ಪೂಜೆ, ಭಕ್ತಿ ಇವು ಪ್ರದರ್ಶನಕ್ಕೆ ಇರುವಂತಹ ಸಂಗತಿಗಳಲ್ಲ. ಇವು ಮನುಷ್ಯನ ಆತ್ಮವಿಶ್ವಾಸವನ್ನು ಹೆಚ್ಚಿಸುವ ಸಲುವಾಗಿ ಇರುವ ಸಾಧನಗಳು. ನನ್ನ ಧರ್ಮ ಸರಿ, ನಿನ್ನ ಧರ್ಮ ತಪ್ಪು ಎನ್ನುವ ಕಲ್ಪನೆ ಎಲ್ಲಿಯೂ...

Related Articles

ಚಿಕ್ಕಮಗಳೂರು ಜಿಲ್ಲೆಗೆ “ಬ್ಯಾಡ್” ಬಜೆಟ್ !

ಚಿಕ್ಕಮಗಳೂರು: ಜಿಲ್ಲೆಯ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ “ಬ್ಯಾಡ್” ಬಜೆಟ್ ನೀಡಿದ್ದಾರೆ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ....

ಪ್ರವೀಣ್ ಎಚ್.ಟಿ. ಯುಪಿಎಸ್‌ಸಿ ಪರೀಕ್ಷೆಯಲ್ಲಿ 720ನೇ ರ್‍ಯಾಂಕ್

ಚಿಕ್ಕಮಗಳೂರು: ಕಡೂರು ತಾಲೂಕಿನ ಹುಲಿಕೆರೆ ಗ್ರಾಮದ ಯುವ ಪ್ರತಿಭೆ ಪ್ರವೀಣ್ ಎಚ್.ಟಿ. ಈ ಸಾಲಿನ ಯುಪಿಎಸ್‌ಸಿ...

ತೇಗೂರು ಸರ್ಕಾರಿ ಶಾಲೆಯ ಶತಮಾನೋತ್ಸವ

ಚಿಕ್ಕಮಗಳೂರು:  ನಮ್ಮ ಜೀವನದಲ್ಲಿ ನಾವು ಗಳಿಸುವ ಸಂಪತ್ತು ಶಾಶ್ವತವಲ್ಲ, ಆದರೆ ನಾವು ಪಡೆಯುವ ಶಿಕ್ಷಣ ಮತ್ತು...

ಆಮಿಷಗಳಿಗೆ ಬಲಿಯಾಗಬೇಡಿ-ಗ್ರಾಹಕರು ಹಕ್ಕುಗಳ ಬಗ್ಗೆ ಜಾಗೃತರಾಗಲಿ

ಚಿಕ್ಕಮಗಳೂರು: ಇಂದಿನ ಆಧುನಿಕ ಮಾರುಕಟ್ಟೆ ವ್ಯವಸ್ಥೆಯಲ್ಲಿ ಆಕರ್ಷಕ ಆಮಿಷಗಳಿಗೆ ಬಲಿಯಾಗದೆ ಗ್ರಾಹಕರು ತಮ್ಮ ಹಕ್ಕುಗಳ ಬಗ್ಗೆ...