Home Crime News ಬೈಕ್ -ಕಾರು ಡಿಕ್ಕಿಗೆ ಮಹಿಳೆ ಸಾವು
Crime NewsHomeKadurLatest Newsnamma chikmagalur

ಬೈಕ್ -ಕಾರು ಡಿಕ್ಕಿಗೆ ಮಹಿಳೆ ಸಾವು

Share
Share

ಕಡೂರು:  ಬೀರೂರು ಸಮೀಪದ ಬಳ್ಳಿಗನೂರು ಗ್ರಾಮದಲ್ಲಿ ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಮಹಿಳೆ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಸರಸ್ವತಿಪುರ ಗ್ರಾಮದ ನಿವಾಸಿ ಗೌರಮ್ಮ (63) ಮೃತಪಟ್ಟವರು. ಉಬ್ಬಸ ಸಮಸ್ಯೆಯಿಂದ ಬಳಲುತ್ತಿದ್ದ ಗೌರಮ್ಮ ಅವರನ್ನು ಚಿಕಿತ್ಸೆಗಾಗಿ ತರೀಕರೆ ತಾಲ್ಲೂಕು ಲಿಂಗದಹಳ್ಳಿಗೆ ಬೈಕ್‌ನಲ್ಲಿ ಕರೆದೊಯ್ಯುತ್ತಿದ್ದಾಗ ಈ ಘಟನೆ ನಡೆದಿದೆ.

ಗೌರಮ್ಮ ಪತಿ ಶಿವಣ್ಣ ಹಾಗೂ ಮಗ ರಾಜು ಅವರಿಗೂ ಗಂಭೀರ ಗಾಯಗಳಾಗಿವೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಮಹಿಳೆಯ ಸಹೋದರ ನೀಡಿದ ದೂರಿನ ಅನ್ವಯ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Woman dies in bike-car collision

Share

Leave a comment

Leave a Reply

Your email address will not be published. Required fields are marked *

Don't Miss

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು ನೆರೆಯವರ ತೋಟದ ಮನೆಯ ಹಿಂಭಾಗ ಬೆಂಕಿ ಹಚ್ಚಿಕೊಂಡು ಸಂಶಯಾಸ್ಪದವಾಗಿ ಸಾವನ್ನಪ್ಪಿರುವ ದುರಂತ ಘಟನೆ ವರದಿಯಾಗಿದೆ....

Related Articles

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...

ಕ್ರೆಡಿಟ್ ಕಾರ್ಡ್ ಮಿತಿ ಹೆಚ್ಚಿಸುವ ನೆಪದಲ್ಲಿ ₹1.59 ಲಕ್ಷ ವಂಚನೆ

ಚಿಕ್ಕಮಗಳೂರು: ಕ್ರೆಡಿಟ್ ಕಾರ್ಡ್ ಮಿತಿಯನ್ನು ಹೆಚ್ಚಿಸುವುದಾಗಿ ನಂಬಿಸಿ ಬ್ಯಾಂಕ್ ಅಧಿಕಾರಿಯಂತೆ ನಟಿಸಿದ ಸೈಬರ್ ವಂಚಕರು ವ್ಯಕ್ತಿಯೊಬ್ಬರ...