Home ಅಂತರ ಜಿಲ್ಲಾ ಕಳ್ಳರ ಜಾಲವನ್ನು ಭೇದಿಸಿದ ಜಿಲ್ಲಾ ಪೊಲೀಸರು
HomeLatest Newsnamma chikmagalur

ಅಂತರ ಜಿಲ್ಲಾ ಕಳ್ಳರ ಜಾಲವನ್ನು ಭೇದಿಸಿದ ಜಿಲ್ಲಾ ಪೊಲೀಸರು

Share
Share

ಚಿಕ್ಕಮಗಳೂರು:  ಜಿಲ್ಲೆಯ ಸಬ್ಬರಾಯಪಟ್ಟಣ ಮತ್ತು ತರೀಕೆರೆ ಸೇರಿದಂತೆ ರಾಜ್ಯದ ವಿವಿಧೆಡೆ ಮನೆಗಳ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಕುಖ್ಯಾತ ಅಂತರ ಜಿಲ್ಲಾ ಕಳ್ಳರ ಜಾಲವನ್ನು ಪೊಲೀಸರು ಭೇದಿಸಿದ್ದಾರೆ.

ಮೈಸೂರು ಮೂಲದ ಮಹಮ್ಮದ್ ಫರಾಜ್ ಮತ್ತು ಚಿಕ್ಕಮಗಳೂರಿನ ಭೂದೇಶ್ ಗೌಡ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಅವರಿಂದ ಸುಮಾರು ೩೦,೧೩,೨೦೦ ರೂಪಾಯಿ ಮೌಲ್ಯದ ಸ್ವತ್ತನ್ನು ಜಪ್ತಿ ಮಾಡಿದ್ದಾರೆ.

ಈ ಕಾರ್ಯಾಚರಣೆಯ ವೇಳೆ ಆರೋಪಿಗಳಿಂದ ೧೯೬.೩೫೦ ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ಕಳ್ಳತನದ ಕೃತ್ಯಕ್ಕೆ ಬಳಸುತ್ತಿದ್ದ ಬಿಳಿ ಬಣ್ಣದ ಐ೨೦ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತರು ಚಿಕ್ಕಮಗಳೂರು ಜಿಲ್ಲೆಯ ಸಬ್ಬರಾಯಪಟ್ಟಣ, ತರೀಕೆರೆ ಮಾತ್ರವಲ್ಲದೆ ಮೈಸೂರು, ಗದಗ, ಹುಬ್ಬಳ್ಳಿ ಮತ್ತು ಹಾಸನದ ಹಳೇಬೀಡು ಸೇರಿದಂತೆ ಹಲವು ಕಡೆಗಳಲ್ಲಿ ಕಳ್ಳತನ ಮಾಡಿರುವುದಾಗಿ ವಿಚಾರಣೆಯ ವೇಳೆ ಒಪ್ಪಿಕೊಂಡಿದ್ದಾರೆ.

ಜಿಲ್ಲಾ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ್ ಸಿ.ಟಿ. ಅವರ ಮಾರ್ಗದರ್ಶನದಲ್ಲಿ, ತರೀಕೆರೆ ಡಿವೈಎಸ್‌ಪಿ ಹೆಚ್. ಪರಶುರಾಮಪ್ಪ ಮತ್ತು ಕಡೂರು ಸಿಪಿಐ ರಫೀಕ್ ನೇತೃತ್ವದ ವಿಶೇಷ ತಂಡವು ತಾಂತ್ರಿಕ ಹಾಗೂ ವೈಜ್ಞಾನಿಕ ತನಿಖೆಯ ಮೂಲಕ ಈ ಯಶಸ್ವಿ ಪತ್ತೆ ಕಾರ್ಯ ನಡೆಸಿದೆ. ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಈ ಕಾರ್ಯಾಚರಣೆಯಲ್ಲಿ ಶ್ರಮಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.

District police bust inter-district thieves’ network

Share

Leave a comment

Leave a Reply

Your email address will not be published. Required fields are marked *

Don't Miss

ಕಾಂಗ್ರೆಸ್‌ನ ಮುಸ್ಲಿಂ ಮುಖಂಡ ರಾಹಿಲ್ ಷರೀಫ್‌ ಬಂದನಕ್ಕೆ ಬಿಜೆಪಿ ಆಗ್ರಹ

ಚಿಕ್ಕಮಗಳೂರು : ಇತ್ತೀಚೆಗೆ ದಲಿತ ಮಹಿಳೆಯೋರ್ವರ ಮೇಲೆ ಹಲ್ಲೆ ನಡೆಸಿರುವ ಕಾಂಗ್ರೆಸ್‌ನ ಮುಸ್ಲಿಂ ಮುಖಂಡ ರಾಹಿಲ್ ಷರೀಫ್‌ನನ್ನು ಕೂಡಲೇ ಬಂಧಿಸಬೇಕೆಂದು ಬಿಜೆಪಿ ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಕೆ.ಪಿ ವೆಂಕಟೇಶ್ ಆಗ್ರಹಿಸಿದರು. ನಗರದ...

ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಹಿಲ್ ಶರೀಫ್ ಪಕ್ಷದಿಂದ ಉಚ್ಚಾಟನೆ

ಚಿಕ್ಕಮಗಳೂರು: ಜಿಲ್ಲಾ ಯುವ ಕಾಂಗ್ರೆಸ್ ಘಟಕದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಅಸಭ್ಯ ವರ್ತನೆಯ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಹಿಲ್ ಶರೀಫ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ....

Related Articles

ಸದೃಢ ಭಾರತ ನಿರ್ಮಿಸುವ ಗುರಿ ಯುವಜನತೆ ಮೇಲಿದೆ

ಚಿಕ್ಕಮಗಳೂರು:  ಸದೃಢ ಭಾರತ ನಿರ್ಮಿಸುವ ಜವಾಬ್ದಾರಿ ಯುವಜನತೆಯ ಮೇಲಿ ದೆ. ಯುವಸಂಸತ್ ಒಂದು ಸ್ಪರ್ಧೆಯಲ್ಲ. ಸಂಸತ್ತಿನ...

ಮಾ.11ಕ್ಕೆ ಲಿಂಗತ್ವ ಅಲ್ಪಸಂಖ್ಯಾತರ ಸ್ವಾಭಿಮಾನಿ ನಡಿಗೆ

ಚಿಕ್ಕಮಗಳೂರು: ಪ್ರಸಕ್ತ ರಾಜ್ಯ ಬಜೆಟ್‌ನಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಯಾವುದೇ ರೀತಿಯ ಅನುದಾನ ಬಿಡುಗಡೆ ಮಾಡದಿರುವುದನ್ನು ಖಂಡಿಸಿ...

ಬೈಕ್ -ಕಾರು ಡಿಕ್ಕಿಗೆ ಮಹಿಳೆ ಸಾವು

ಕಡೂರು:  ಬೀರೂರು ಸಮೀಪದ ಬಳ್ಳಿಗನೂರು ಗ್ರಾಮದಲ್ಲಿ ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ನಲ್ಲಿದ್ದ...

ಅಕ್ರಮ ಇಸ್ಪೀಟು ಜೂಜಾಟ-9 ಜನ ಬಂಧನ

ಕೊಪ್ಪ: ತಾಲ್ಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಇಸ್ಪೀಟು ಜೂಜಾಟದ ಮೇಲೆ ಪೊಲೀಸರು ದಾಳಿ...