ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಗಸರಹಳ್ಳಿ ರಸ್ತೆಯಲ್ಲಿ ಜೆಸಿಬಿ ಚಾಲಕನ ಬೇಜವಾಬ್ದಾರಿಯಿಂದ ನಡೆದ ಅಪಘಾತದಲ್ಲಿ ಮೂರ್ತಿ (45) ಎಂಬುವವರು ಮೃತಪಟ್ಟಿದ್ದಾರೆ.
ಕೆಲಸ ಮುಗಿಸಿಕೊಂಡು ಸತೀಶ್ ಎಂಬುವವರ ಮೋಟಾರ್ ಸೈಕಲ್ನಲ್ಲಿ ಹಿಂಬದಿ ಸವಾರನಾಗಿ ಮನೆಗೆ ಮರಳುತ್ತಿದ್ದಾಗ, ಎಸ್ಟೇಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಜೆಸಿಬಿ ಚಾಲಕ ಮಧು ಯಾವುದೇ ಸೂಚನೆ ನೀಡದೆ ಒಮ್ಮೆಲೇ ವಾಹನವನ್ನು ರಸ್ತೆಗೆ ತಂದಿದ್ದಾನೆ.
ಈ ವೇಳೆ ಬೈಕ್ ಜೆಸಿಬಿಯ ಮುಂಭಾಗದ ಬಕೆಟ್ ಡಿಕ್ಕಿ ಹೊಡೆದಿದ್ದು, ಮೂರ್ತಿಯವರ ಹಣೆಗೆ ತೀವ್ರ ಗಾಯಗಳಾಗಿದ್ದವು. ಗಾಯಾಳುವನ್ನು ತಕ್ಷಣವೇ ಚಿಕ್ಕಮಗಳೂರಿನ ಸರ್ಕಾರಿ ಆಸ್ಪತ್ರೆ ಹಾಗೂ ನಂತರ ಕೆ.ಆರ್.ಎಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಮೃತರ ಪತ್ನಿ ಹೇಮಾ ನೀಡಿದ ದೂರಿನ ಮೇರೆಗೆ ಹಾಸನ ಜಿಲ್ಲೆಯ ಹೊಳೆನರಸೀಪುರ ಮೂಲದ ಚಾಲಕ ಮಧು ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
JCB collides with motorbike – man dies
Leave a comment