ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ದ ಭದ್ರಾ ವನ್ಯಜೀವಿ ವಲಯದ ಮುತ್ತೋಡಿ ಅರಣ್ಯ ಪ್ರದೇಶದಲ್ಲಿ ಕಾಡ್ಲಿಚ್ಚು ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಅರಣ್ಯ ಸಂಪತ್ತು ಬೆಂಕಿಗಾಹುತಿಯಾಗಿದೆ.
ಮುತ್ತೋಡಿ ಅರಣ್ಯ ವಲಯದ ಹೊಸಖಾನ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಂಕಿ ವೇಗವಾಗಿ ಹರಡಿದ್ದು, ಒಣಗಿದ ತರಗೆಲೆಗಳ ಕಾರಣದಿಂದಾಗಿ ಕ್ಷಣಾರ್ಧದಲ್ಲಿ ಕಿಲೋಮೀಟರ್ಗಗಟ್ಟಲೆ ವ್ಯಾಪಿಸಿದೆ. ಈ ಅನಿರೀಕ್ಷಿತ ದುರಂತದಿಂದಾಗಿ ಅಭಯಾರಣ್ಯದಲ್ಲಿರುವ ಅಪರೂಪದ ಸಸ್ಯ ಸಂಪತ್ತು ನಾಶವಾಗುತ್ತಿರುವುದಲ್ಲದೆ, ಅಲ್ಲಿನ ಪ್ರಾಣಿ ಮತ್ತು ಪಕ್ಷಿಗಳ ಜೀವಕ್ಕೂ ತೀವ್ರ ಸಂಚಕಾರ ಒದಗಿದೆ.
ಕಾಡಿಚ್ಚನ್ನು ನಂದಿಸಲು ಅರಣ್ಯ ಇಲಾಖೆಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದರೂ, ಬೆಂಕಿಯ ತೀವ್ರತೆ ನಿಯಂತ್ರಣಕ್ಕೆ ಬರುತ್ತಿಲ್ಲ. ಅರಣ್ಯ ಇಲಾಖೆಯಲ್ಲಿ ವಾಚರ್ಗಳ ಕೊರತೆ ಇರುವುದು ಬೆಂಕಿ ನಂದಿಸುವ ಕಾರ್ಯಕ್ಕೆ ದೊಡ್ಡ ಅಡ್ಡಿಯಾಗಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.
ಅಲ್ಲದೆ, ಜೇನುಕಲ್ಲುಗಿರಿ, ಕಾಗೆಮನೆಗಿರಿ ಹಾಗೂ ಗೆಸ್ಟ್ ಹೌಸ್ ರಸ್ತೆಯ ಭಾಗಗಳಲ್ಲಿ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ಫೈರ್ ಲೈನ್ ನಿರ್ಮಿಸಿಲ್ಲ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿಬಂದಿವೆ. ಸೂಕ್ತ ಮುನ್ನೆಚ್ಚರಿಕೆ ಇಲ್ಲದ ಕಾರಣ ಬೆಂಕಿ ಸುಲಭವಾಗಿ ಅರಣ್ಯದ ಒಳಭಾಗಕ್ಕೆ ನುಗ್ಗಿದ್ದು ಆತಂಕ ವ್ಯಕ್ತವಾಗಿದೆ.
Wildfire in Muthodi forest area
Leave a comment