Home namma chikmagalur chikamagalur ಆಲಿಕಲ್ಲು ಮಳೆಯಿಂದ ರೈತರು ಕಂಗಾಲು
chikamagalurHomeLatest Newsnamma chikmagalur

ಆಲಿಕಲ್ಲು ಮಳೆಯಿಂದ ರೈತರು ಕಂಗಾಲು

Share
Share

ಚಿಕ್ಕಮಗಳೂರು:  ಉಗಾದಿ ಹಬ್ಬದ ಹಿಂದೆ_ಮುಂದೆ ಮಳೆ ಬರುತ್ತದೆ. ಆದರೆ ಈ ವರ್ಷ ಆರಂಭವಾದ ಮಳೆಯಲ್ಲಿ ರಾಶಿ,ರಾಶಿ ಆಲಿಕಲ್ಲು ಮಳೆ ಬರುತ್ತಿರುವುದು ನೋಡಿ ರೈತರು ,ಬೆಳೆಗಾರರು ಕಂಗಲಾಗಿದ್ದಾರೆ ಮುಂದೆ ಏನು ಎಂಬ ಚಿಂತೆ ಉಂಟಾಗಿದೆ.

ಹವಮಾನ ವೈಪರೀತ್ಯಗಳಿಂದ ದಪ್ಪ, ದಪ್ಪ ಆಲಿಕಲ್ಲು ಬೀಳುತ್ತಿವೆ ಎನ್ನಲಾಗುತ್ತಿದೆ. ಜಿಲ್ಲೆಯಲ್ಲಿ ಎರಡು ಬಾರಿ ಆಲಿಕಲ್ಲು ಮಳೆ ಬಂದಿದೆ ಆದರೆ ನಿನ್ನೆ ಸುರಿದ ಮಳೆಯಲ್ಲಿ ರಾಶಿ,ರಾಶಿ ಮತ್ತು ನಿರೀಕ್ಷೆ ಮೀರಿದ ಚಪ್ಪಡಿ ಸೈಜಿನ ಆಲಿಕಲ್ಲು ಬಿದ್ದಿವೆ.

ಖಾಂಡ್ಯ ಹೋಬಳಿ,ಕೊಪ್ಪ , ಬಾಳೆಹೊನ್ನುರು ,ಶೃಂಗೇರಿ ಕೆಲ ಭಾಗಗಳಲ್ಲಿ ಮೂಡಿಗೆರೆ ತಾಲೂಕಿನ ಕೆಲವು ಭಾಗಗಳಲ್ಲಿ ಮತ್ತು ತರೀಕೆರೆಯ ಸುತ್ತ ಮುತ್ತ ಆಲಿಕಲ್ಲು ಮಳೆ ಅರ್ಧ ಗಂಟೆ ಸುರಿದಿರುವುದು ಜಿಲ್ಲೆಯ ಜನರಿಗೆ ಆತಂಕ ಸೃಷ್ಟಿಯಾಗಿದೆ.

ಆಲಿಕಲ್ಲು ಮಳೆಯಿಂದ ಮಲೆನಾಡಿನ ಕಾಫಿ ಮತ್ತು ಅಡಕೆ ಬೆಳೆಗಾರರು ಬಯಲು ಸೀಮೆಯ ಅಡಿಕೆ ಬೆಳೆಗಾರರ ಜೊತೆಗೆ ತರಕಾರಿ ಬೆಳೆದ ರೈತರಿಗೆ ಆತಂಕ ಉಂಟಾಗಿದೆ ಎನ್ನಲಾಗುತ್ತಿದೆ.

ಮಲೆನಾಡಿನ ಕಾಫಿ,ಕಾಳು ಮೆಣಸು,ಅಡಿಕೆ ಮತ್ತು ಕೆಲವು ತರಕಾರಿ ಬೆಳೆಗಳಾಳು ಮತ್ತು ಬಯಲುಸೀಮೆಯ ಅಡಿಕೆ ಹಾಗು ಮಾವು, ಮೆಣಸು ಮತ್ತು ತರಕಾರಿ ಬೆಳೆಗಳಾದ ಟಮೋಟ, ಮುಳುಗಾಯಿ,ಕ್ಯಾರೆಟ್, ಬೀಟ್ ರೊಟ್ ,ಸೊಪ್ಪುಗಳು ಮತ್ತಿತರ ತರಕಾರಿಗಳು ನಾಶವಾಗುತ್ತವೆ.

ಬಯಲು ಪ್ರದೇಶಗಳಲ್ಲಿ ಹೆಚ್ಚಾಗಿ ಮಾವು ಬೆಳೆಯುತ್ತಾರೆ ಮುಖ್ಯವಾಗಿ ತರೀಕೆರೆ ತಾಲ್ಲೂಕು ಅಜ್ಜಂಪುರ ತಾಲ್ಲೂಕು ಕಡೂರು ತಾಲ್ಲೂಕು ಮತ್ತು ಚಿಕ್ಕಮಗಳೂರು ತಾಲ್ಲೂಕಿನ ಲಕ್ಯಾ,ಕಸಬಾ ಹೋಬಳಿಗಳಲ್ಲಿ ಮಾವು ಹೆಚ್ಚಾಗಿ ಬೆಳೆಯುತ್ತಾರೆ ಆಲಿಕಲ್ಲು ಮಳೆಯಿಂದ ಫಸಲಿಗೆ ಭಾರಿ ಹೊಡೆತ ಬೀಳುತ್ತದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಇದೇ ರೀತಿಯಲ್ಲಿ ಮುಂದಿನ ದಿನಗಳಲ್ಲಿ ಆಲಿಕಲ್ಲು ಮಳೆ ಬಂದರೆ ನಮ್ಮ ಕತೆ ಮುಗಿಯುತ್ತದೆ ಸಂಕಷ್ಟ ಕಟ್ಟಿಟ್ಟಾ ಬುಟ್ಟಿ ಎಂದು ನಿಟ್ಟುಸಿರು ಬಿಡುತ್ತಿದ್ದಾರೆ.

Farmers in distress due to hailstorm

Share

Leave a comment

Leave a Reply

Your email address will not be published. Required fields are marked *

Don't Miss

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...

Related Articles

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು...

ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಹಲ್ಲೆ

ಮೂಡಿಗೆರೆ:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ...

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ 25ಕ್ಕೂ ಹೆಚ್ಚುಕಡೆ ಬೆಂಕಿ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು  ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ...

3.50 ಕೋಟಿ ರೂ ವೆಚ್ಚದ ವಿವಿಧ ರಸ್ತೆಗಳ ಲೋಕಾರ್ಪಣೆ

ಚಿಕ್ಕಮಗಳೂರು:  ಬಡವರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರ ಧರ್ಮ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ...