Home State News ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
State News

ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

Share
Share
ಚಿಕ್ಕಮಗಳೂರು: ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೊನೆಗೂ ವಿಡಿಯೋ ಅಸಲಿಯತ್ತು ಏನೆಂದು ತನಿಖೆಯಿಂದ ಬಯಲಾಗಿದೆ.

ಕೆಲವು ದಿನಗಳ ಹಿಂದೆ ಡಿಜಿಪಿ ರಾಮಚಂದ್ರ ರಾವ್ ತಮ್ಮ ಕಚೇರಿಯಲ್ಲಿ ಇಬ್ಬರು ಮಹಿಳೆಯರೊಂದಿಗೆ ಅಶ್ಲೀಲವಾಗಿ ವರ್ತಿಸುತ್ತಿರುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ತಕ್ಷಣವೇ ಗೃಹ ಇಲಾಖೆ ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸಿ ಇಲಾಖೆ ಮಟ್ಟದಲ್ಲಿ ತನಿಖೆಗೆ ಆದೇಶಿಸಿತ್ತು.  ಇದೀಗ ತನಿಖೆ ಪೂರ್ಣಗೊಂಡಿದ್ದು ವಿಡಿಯೋಗಳು ಅಸಲಿ ಎಂದು ಬಯಲಾಗಿದೆ. ಈ ವಿಡಿಯೋಗಳು ಎಐ ನಿರ್ಮಿತ ಅಥವಾ ಡೀಪ್ ಫೇಕ್ ವಿಡಿಯೋ ಅಥವಾ ಎಡಿಟ್ ಮಾಡಲಾದ ವಿಡಿಯೋಗಳು ಅಲ್ಲ ಎಂದು ತನಿಖೆಯಿಂದ ಖಚಿತವಾಗಿದೆ.
ಇದರೊಂದಿಗೆ ರಾಮಚಂದ್ರ ರಾವ್ ಗೆ ತೀವ್ರ ಹಿನ್ನಡೆಯಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಅವರು ನಿವೃತ್ತರಾಗಲಿದ್ದರು. ಇದಕ್ಕೆ ಮೊದಲು ಪ್ರತಿಕ್ರಿಯಿಸಿದ್ದ ಅವರು ಇದು ಎಐ ವಿಡಿಯೋ ಎಂದಿದ್ದರು. ಆದರೆ ಈಗ ವಿಡಿಯೋಗಳು ಅಸಲಿ ಎಂದು ಖಚಿತವಾಗಿದ್ದು ಸದ್ಯಕ್ಕೆ ಅವರ ನಿವೃತ್ತಿ ವೇತನ, ಇತರೆ ಸೌಲಭ್ಯಗಳನ್ನುಸ್ಥಗಿತಗೊಳಿಸಲಾಗುತ್ತದೆ.
ಇನ್ನು ವಿಡಿಯೋದಲ್ಲಿದ್ದ ಇಬ್ಬರು ಮಹಿಳೆಯರು ಸದ್ಯಕ್ಕೆ ನಾಪತ್ತೆಯಾಗಿದ್ದಾರೆ. ಇವರು ಆಗಾಗ ರಾಮಚಂದ್ರ ರಾವ್ ಅವರ ಖಾಸಗಿ ಕಚೇರಿಗೆ ಭೇಟಿ ನೀಡುತ್ತಿದ್ದರು ಎನ್ನಲಾಗಿದೆ. ಇಬ್ಬರು ಮಹಿಳೆಯರ ಪೈಕಿ ಒಬ್ಬಾಕೆ ಈ ವಿಡಿಯೋಗಳನ್ನು ಚಿತ್ರೀಕರಿಸಿದ್ದಾಳೆ ಎನ್ನಲಾಗಿದೆ. ಸದ್ಯಕ್ಕೆ ಮಹಿಳೆಯರಿಗಾಗಿ ಹುಡುಕಾಟ ನಡೆದಿದೆ.
Big twist for DGP Ramachandra Rao Rasalile case
Share

Leave a comment

Leave a Reply

Your email address will not be published. Required fields are marked *

Don't Miss

ಜಲಯೋಗ ಸಾಧನೆಯಲ್ಲಿ ವಕೀಲ ವಿ.ಕೆ.ರಘು ವಿಶ್ವ ದಾಖಲೆ

ಚಿಕ್ಕಮಗಳೂರು: ನಗರದ ವಕೀಲ ವಿ.ಕೆ.ರಘು ಅವರು ಜಲಯೋಗ ಸಾಧನೆಯಲ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಬಾರಿಯ ಅಂತರಾಷ್ಟ್ರೀಯ ಯೋಗ ದಿನಾಚರಣೆ ಸಂದರ್ಭದಲ್ಲಿ ನೀರಿನ ಮೇಲೆ ೯೬೦ ಬಾರಿ ಶ್ರೀರಾಮನ ಮಂತ್ರಗಳನ್ನು ಪಠಿಸುತ್ತ...

ಬ್ಯಾಂಕ್ ಸಾಲದಿಂದ ಮುಕ್ತಿ ಹೊಂದಲು ಕ್ಯಾನ್ ಅದಾಲತ್

ಚಿಕ್ಕಮಗಳೂರು: ಬ್ಯಾಂಕ್ ಸುಸ್ತಿದಾರ ಬೆಳೆಗಾರರ ಅನುಕೂಲಕ್ಕಾಗಿ ಕೆನರಾ ಬ್ಯಾಂಕ್ ಕಾಫಿ ಬೆಳೆಯುವ ಜಿಲ್ಲೆಗಳ ಆಯ್ದ ಕೆಲವು ಶಾಖೆಗಳಲ್ಲಿ ಕ್ಯಾನ್ ಅದಾಲತ್ ನಡೆಸುತ್ತಿದ್ದು, ಸುಸ್ತಿದಾರ ಬೆಳೆಗಾರರು ಈ ಅವಕಾಶ ಸದುಪಯೋಗಪಡಿಸಿಕೊಂಡು ಬ್ಯಾಂಕ್ ಸಾಲದಿಂದ...

Related Articles

ಮೌಲ್ಯ – ಸೇವೆ ಮರೆತು ಹಣ ದೂಚಲು ಪ್ರಜಾಪ್ರಭುತ್ವದ ಕಗ್ಗೂಲೆ…

ಅದಲು-ಬದಲು ಯಾವ ಪಕ್ಷಗಳಿಗೆ ಸಿದ್ದಾಂತ, ನೈತಿಕತೆ ಇದೆ ಭಾರತದಲ್ಲಿ ಸಾಧ್ಯವಿಲ್ಲ. ಎಲ್ಲಾ ಪಕ್ಷಗಳು ಬೆರಿಕೆಯ ತುರಿಕೆಯಲ್ಲಿವೆ.ಅದರಲ್ಲೂ...

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು...

ರಾಜ್ಯದಲ್ಲಿ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

ಬೆಂಗಳೂರು: ಡಿಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ...